Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಜಯ್ ಈಗ ಶಿವಾಯ್

ಅಜಯ್ ಈಗ ಶಿವಾಯ್

ವಾರ್ತಾಭಾರತಿವಾರ್ತಾಭಾರತಿ14 Aug 2016 12:15 PM IST
share
ಅಜಯ್ ಈಗ ಶಿವಾಯ್

ಬಾಲಿವುಡ್‌ನ ಅತ್ಯಂತ ಪ್ರತಿಭಾವಂತ ನಟ ಅಜಯ್‌ದೇವಗನ್, ಹಿಟ್ ಚಿತ್ರಗಳನ್ನು ನೀಡದೆ ಬಹಳ ಸಮಯ ವಾಯಿತು. 2014ರಲ್ಲಿ ತೆರೆಕಂಡ ಸಿಂಗಂ- ರಿಟರ್ನ್ಸ್ ಚಿತ್ರದ ಬಳಿಕ ಅವರ ಯಾವ ಚಿತ್ರಕ್ಕೂ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಕಳೆದ ವರ್ಷ ತೆರೆಕಂಡ ದೃಶ್ಯಂ ಕೂಡಾ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಲಿಲ್ಲ. ಆದರೆ ಇದೀಗ ಅಜಯ್ ‘ಶಿವಾಯ್ ಚಿತ್ರದ ಮೂಲಕ, ವಾಪಸಾಗುತ್ತಿದ್ದಾರೆ. ಅಜಯ್‌ದೇವಗನ್ ಈ ಚಿತ್ರವನ್ನು ನಿರ್ಮಿಸಿರುವ ಜೊತೆಗೆ ನಿರ್ದೇಶನ ಕೂಡಾ ಮಾಡಿದ್ದಾರೆ. ಪಕ್ಕಾ ಆ್ಯಕ್ಷನ್ ಹಾಗೂ ಥ್ರಿಲ್ಲರ್ ಚಿತ್ರವಾದ ಶಿವಾಯ್‌ನ ಟ್ರೇಲರ್ ಈಗಾಗಲೇ ಹೊರಬಂದಿದ್ದು, ಚಿತ್ರಪ್ರೇಮಿಗಳಲ್ಲಿ ಭಾರೀ ಕುತೂಹಲವನ್ನು ಮೂಡಿಸುವಲ್ಲಿ ಯಶಸ್ವಿಯಾಗಿದೆ. ಆಯೇಷಾ ಸೈಗಲ್ ಈ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ. ಈ ಮೊದಲು ಆಕೆ ‘ಅಖಿಲ್’ ಎಂಬ ತೆಲುಗು ಚಿತ್ರದಲ್ಲಿ ನಟಿಸಿ ಗಮನಸೆಳೆದಿದ್ದರು. ಆಲಿ ಕಾಸ್ಮಿ, ವೀರ್‌ದಾಸ್, ಎರಿಕಾ ಕಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಈ ಚಿತ್ರವು ಅಜಯ್‌ಗೆ ಹೊಸ ಇಮೇಜ್ ತಂದುಕೊಡಲಿದೆಯೆಂಬ ಮಾತುಗಳು ಬಾಲಿವುಡ್‌ನಲ್ಲಿ ಬಲವಾಗಿ ಕೇಳಿಬರುತ್ತಿವೆ. ಗಿರೀಶ್ ಕಾರ್ನಾಡ್ ಕೂಡಾ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆ ನೋಡಿದರೆ ಶಿವಾಯ್ ಕಳೆದ ವರ್ಷವೇ ತೆರೆಕಾಣಬೇಕಿತ್ತು. ಆದರೆ ಅಜಯ್ ತಾನು ಈ ಮೊದಲೇ ಕಮಿಟ್ ಆಗಿದ್ದ ‘ದೃಶ್ಯಂ’ ಹಾಗೂ ‘ಸನ್ ಆಫ್ ಸರ್ದಾರ್’ ಚಿತ್ರದಲ್ಲಿ ಬ್ಯುಸಿಯಾಗಿದ್ದರಿಂದ ಶಿವಾಯ್‌ನ ಶೂಟಿಂಗ್ ಮುಂದೂಡ ಲ್ಪಟ್ಟಿತ್ತು. ಕೌಟುಂಬಿಕ ಹಿನ್ನೆಲೆಯ ಆ್ಯಕ್ಷನ್ ಚಿತ್ರವಾಗಿ ರುವ ಶಿವಾಯ್‌ನಲ್ಲಿ ಅಮಾಯಕ ನೊಬ್ಬ, ಅಸ್ತಿತ್ವಕ್ಕಾಗಿ ತನ್ನನ್ನು ನಾಶಪಡಿಸಲು ಹೊರಟವರ ವಿರುದ್ಧವೇ ಸಮರ ಸಾರುವ ಕಥಾ ವಸ್ತುವನ್ನು ಹೊಂದಿದೆ. ಹಾಲಿವುಡ್ ಶೈಲಿಯ ತಂತ್ರಜ್ಞಾನ ಹೊಂದಿರುವ ಈ ಚಿತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ಕಲಾನಿರ್ದೇಶಕ ಸಾಬುಸಿರಿಲ್ ಕೂಡಾ ದುಡಿದಿದ್ದಾರೆ.ಎಲ್ಲವೂ ಸರಿಹೋದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಅಂದರೆ ಅಕ್ಟೋಬರ್ 28ರಂದು ‘ಶಿವಾಯ್’ ಬೆಳ್ಳಿತೆರೆಗಪ್ಪಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X