Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಂಗ್ಲಾದೇಶದ ನಿರಾಶ್ರಿತ ಹಿಂದೂಗಳ...

ಬಾಂಗ್ಲಾದೇಶದ ನಿರಾಶ್ರಿತ ಹಿಂದೂಗಳ ಪುನರ್ವಸತಿಗೆ ಅಸ್ಸಾಂನಲ್ಲಿ ಭಾರೀ ವಿರೋಧ

ವಾರ್ತಾಭಾರತಿವಾರ್ತಾಭಾರತಿ14 Aug 2016 5:31 PM IST
share
ಬಾಂಗ್ಲಾದೇಶದ ನಿರಾಶ್ರಿತ ಹಿಂದೂಗಳ ಪುನರ್ವಸತಿಗೆ ಅಸ್ಸಾಂನಲ್ಲಿ ಭಾರೀ ವಿರೋಧ

ಗುವಾಹಟಿ, ಆ.14: ಅಸ್ಸಾಂನಲ್ಲಿ ಬಾಂಗ್ಲಾದೇಶಿ ನಿರಾಶ್ರಿತ ಹಿಂದೂಗಳಿಗೆ ಪುನವರ್ಸತಿ ಮತ್ತು ಅವರಿಗೆ ದೇಶದ ಪೌರತ್ವವನ್ನು ನೀಡುವ ಸರಕಾರದ ನಿರ್ಧಾರವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದೆ ಎಂದು ವರದಿಯಾಗಿದೆ.

    ಅಸ್ಸಾಂ ಕೃಷಿ ಸಂಗ್ರಾಮ್ ಸಮಿತಿ ಕಾರ್ಯಕರ್ತರು, ಬಾಂಗ್ಲಾದೇಶಿ ಹಿಂದೂ ನಿರಾಶ್ರಿತರಿಗೆ ಪೌರತ್ವವನ್ನು ನೀಡಿ ಅಸ್ಸಾಂನಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡುವ ರಾಜ್ಯ ಸರಕಾರದ ನಿರ್ಧಾರವನ್ನು ವಿರೋಧಿಸಿ ಅನ್ನಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್, ’ಪೌರತ್ವ ತಿದ್ದುಪಡಿ ವಿಧೇಯಕ 2016’ ಇದರ ಪ್ರತಿಗಳನ್ನು ಸುಟ್ಟು ಪ್ರತಿಭಟನೆ ನಡೆಸಿದೆ. ಅಸ್ಸಾಮ್‌ನ ಬಹುದೊಡ್ಡ ಸಾಹಿತ್ಯ ಸಂಘಟನೆಯಾದ ’ಅಸ್ಸಾಮ್ ಸಾಹಿತ್ಯ ಸಭಾ’ ಕೂಡಾ ಬಾಂಗ್ಲಾದೇಶದ ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡದಂತೆ ವಿರೋಧ ವ್ಯಕ್ತಪಡಿಸುತ್ತಿದೆ ಎನ್ನಲಾಗಿದೆ. . ’ಹಿಂದೂ ಬಾಂಗ್ಲಾದೇಶೀಯರ ಹೊರೆಯನ್ನು ರಾಜ್ಯ ಹೊರಲಾರದು. 1971 ಮಾರ್ಚ್ 25ರ ನಂತರ ಅಸ್ಸಾಂಗೆ ಬಂದ ಎಲ್ಲ ಬಾಂಗ್ಲಾದೇಶಿ ನಾಗರಿಕರು ಅವರು ಹಿಂದೂಗಳಾಗಿದ್ದರೂ, ಮುಸ್ಲಿಮರಾಗಿದ್ದರೂ ಇಲ್ಲಿಂದ ಹೋಗಲೇ ಬೇಕು’ ಎಂದು ಅದು ಹೇಳುತ್ತಿದ್ದು,

 ಆಲ್ ಅಸ್ಸಾಂ ಸ್ಟೂಡೆಂಟ್ ಯೂನಿಯನ್‌ನ ಮುಖ್ಯ ಸಲಹಾಕಾರರಾದ ಸಮುಜ್ವಲ್ ಭಟ್ಟಾಚಾರ್ಯ "1971 ರನಂತರ ಬಂದ ಹಿಂದೂ ಮತ್ತು ಮುಸ್ಲಿಮ್ ಬಾಂಗ್ಲಾದೇಶೀಯರ ಭಾರವನ್ನು ಅಸ್ಸಾಂ ಸಹಿಸಿಕೊಳ್ಳಲಾರದು" ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪೌರತ್ವ ತಿದ್ದುಪಡಿ ವಿಧೇಯಕ 2016 ಎಂದರೆ,ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ನಿರಾಶ್ರಿತರಾಗಿ ಬಂದವರಿಗೆ ನಾಗರಿಕತೆ ನೀಡುವುದಕ್ಕೆ ಸಂಬಂಧಿಸಿದ ವಿದೇಯಕವಾಗಿದೆ. ಇದು ಈಗ ಸಂಸತ್ತಿನ ಜಂಟಿ ಸಮಿತಿಯ ಮುಂದೆ ಪರಿಶೀಲನೆಯಲ್ಲಿದೆ.

   ವಿಧೇಯಕವನ್ನು ವಿರೋಧಿಸುವ ಸಂಘಟನೆಗಳ ಪ್ರಕಾರ,ಸುಮಾರು ಎರಡೂ ಮುಕ್ಕಾಲು ಕೋಟಿಯಷ್ಟು ಬಾಂಗ್ಲಾದೇಶಿ ಹಿಂದೂಗಳು ಪೌರತ್ವ ತಿದ್ದುಪಡಿ ಅಧಿನಿಯಮವನ್ನು ಉಪಯೋಗಿಸಿ ಇಲ್ಲಿ ಪ್ರವೇಶಿಸಬಹುದು. ಅಸ್ಸಾಂ ಸೀಮಿತ ಭೌಗೋಳಿಕ ಪ್ರದೇಶವನ್ನು ಹೊಂದಿದ್ದರೂ 1951ರಿಂದ 1971ರವರೆಗೆ ಅಪಾರ ಸಂಖ್ಯೆಯ ಬಾಂಗ್ಲಾ ದೇಶೀಯರನ್ನು ಸ್ವೀಕರಿಸಲಾಗಿದೆ. ಇನ್ನು ಹೆಚ್ಚಿನ ಬಾಂಗ್ಲಾ ದೇಶೀಯರನ್ನು ಸ್ವೀಕರಿಸಲಾಗದು ಎಂದು ಈ ಸಂಘಟನೆಗಳು ಹೇಳುತ್ತಿವೆ.

   ಆದರೆ ಅಸ್ಸಾಂ ರಾಜ್ಯ ಸರಕಾರ ಇದಕ್ಕೆ ತದ್ವಿರುದ್ಧ ನಿಲುವನ್ನು ಹೊಂದಿದ್ದು, ಸಚಿವ ಪರಿಮಲ್ ಶುಕ್ಲ ವೈದ್ಯ " ನಾವು ದೇಶ ವಿಭಜನೆಯ ನಂತರ ಎಷ್ಟು ಮಂದಿ ಇಲ್ಲಿಗೆ ಬಂದಿದ್ದಾರೆ ಎಂದು ಮೊದಲು ನೋಡಬೇಕಾಗಿದೆ. ಹೀಗೆ ಬಂದವರಲ್ಲಿ ಕೆಲವರು ಹಿಂದೂಗಳಿರಬಹುದು,ಬಂಗಾಳಿಗಳಿರಬಹುದು. ಇದರಲ್ಲಿ ಅವರ ತಪ್ಪೇನಿಲ್ಲ. ಬಂಗಾಳಿ ಹಿಂದೂ ಆಗಿದ್ದರೂ ಕೂಡಾ ಅಸ್ಸಾಂನಲ್ಲಿ ವಾಸಿಸುವಂತಿಲ್ಲ ಎಂದರೆ ಅರ್ಥವೇನು?" ಎಂದು ಪ್ರಶ್ನಿಸುತ್ತಾರೆ. ಅಸ್ಸಾಂನಲ್ಲಿ ನಿರಂತರ ಮೂರು ಬಾರಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಕೂಡಾ ಬಾಂಗ್ಲಾ ನಿರಾಶ್ರಿತ ಹಿಂದೂಗಳಿಗೆ ಪೌರತ್ವವನ್ನು ನೀಡುವ ಪರವಾಗಿದೆ. ಆದರೆ ಅದು ಕೂಡಾ ವಿರೋಧಿ ಸಂಘಟನೆಗಳ ಧ್ವನಿಯಲ್ಲೇ ಮಾತಾಡುತ್ತಿವೆ.

    " ಸರಕಾರ ಎಲ್ಲರಿಗೂ ಒಪ್ಪಿಗೆಯಾಗುವ ಕಾನೂನು ವ್ಯವಸ್ಥೆಯನ್ನು ರೂಪಿಸಬೇಕು. ಅದು ಎಲ್ಲ ಭಾರತೀಯರಿಗೂ ತಮ್ಮ ಹಿತಕ್ಕಾಗಿದೆ ಎಂದು ಅನಿಸುವಂತಿರಬೇಕು. ಮತ್ತು ಅಸಾಂನಲ್ಲಿರುವ ನಮ್ಮ ಜನಜಾತಿ ಪಂಗಡಗಳಿಗೆ ಅದರಿಂದ ಯಾವುದೇ ತೊಂದರೆಯುಂಟಾಗಬಾರದು" ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ವಕ್ತಾರರಾದ ಅಪೂರ್ವ್ ಭಟ್ಟಾಚಾರ್ಯ ಹೇಳುತ್ತಾರೆ. ಪೌರತ್ವ ತಿದ್ದುಪಡಿ ವಿಧೇಯಕ 2016, ಒಂದು ವೇಳೆ ಜಾರಿಗೆ ಬಂದರೆ ಭಾರತಕ್ಕೆಬರುವ ನಿರಾಶ್ರಿತರಿಗೆ ಬಹುದೊಡ್ಡ ನೆರವು ಎನಿಸಿಕೊಳ್ಳುವುದು ನಿಜವಾಗಿದೆ. ಆದರೆ ಕೇವಲ ಅಸ್ಸಾಂ ಒಂದರ ಮೇಲೆಯೇ ಬಾಂಗ್ಲಾದೇಶಿ ಹಿಂದೂ ನಿರಾಶ್ರಿತರ ಭಾರವನ್ನು ಹೇರಿದರೆ ಮುಂಬರುವ ದಿನಗಳಲ್ಲಿ ಅದು ಸಮಸ್ಯೆಗೆ ಕಾರಣವೂ ಆಗಬಹುದು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X