Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳ...

ಕಡಬ ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ14 Aug 2016 7:33 PM IST
share
ಕಡಬ ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

ಕಡಬ,ಆ.14: ಪೂರ್ವ ವಿದ್ಯಾರ್ಥಿಗಳು ಶಾಲೆಯ ಆಸ್ತಿಯಾಗಿದ್ದು, ತನ್ನ ಗಳಿಕೆಯಲ್ಲಿ ಇಂತಿಷ್ಟು ಪಾಲು ತಾನು ಶಿಕ್ಷಣ ಪಡೆದ ಶಾಲೆಗೆಂದು ದೇಣಿಗೆಯ ರೂಪದಲ್ಲಿ ಮೀಸಲಿಟ್ಟಾಗ ಜೀವನ ಸಾರ್ಥಕವಾಗುತ್ತದೆ ಎಂದು ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ಪೆರ್ಲ ಹೇಳಿದರು.

  ಅವರು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಕಾಲೇಜಿನ ಪೂರ್ವ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಈ ಸಂಸ್ಥೆಯಿಂದ ನಿರ್ಗಮಿಸಿರುವ ಹಿರಿಯ ವಿದ್ಯಾರ್ಥಿಗಳು ಈ ಕಾಲೇಜಿನ ರಾಯಬಾರಿಗಳು. ಅವರಿಂದ ಸಂಸ್ಥೆಯ ಕೀರ್ತಿ ಎಲ್ಲಡೆ ಪಸರಿಸುವಂತಾಗಿದ್ದು, ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೂರ್ವ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಪೂರ್ವ ವಿದ್ಯಾರ್ಥಿಗಳ ಅಪೂರ್ವ ಸ್ನೇಹ ಸಮ್ಮಿಲನವನ್ನು ಮತ್ತು ಭೋಜನ ಕೂಟವನ್ನು ಏರ್ಪಡಿಸಿರುವುದು ಕಾಲೇಜಿನ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿ. ವಿದ್ಯಾರ್ಥಿ ಜೀವನದ ಗತದಿನಗಳನ್ನು ಸಹಪಾಠಿಗಳೊಂದಿಗೆ ಮೆಲುಕು ಹಾಕುವ, ಶಿಕ್ಷಣ ನೀಡಿದ ಅಧ್ಯಾಪಕರನ್ನು ಗೌರವಿಸುವ ಅಪೂರ್ವ ಸಮ್ಮಿಳನಕ್ಕೆ ಕಾಲೇಜು ಆವರಣ ಸಾಕ್ಷಿಯಾಗಿರುವುದು ಹೆಮ್ಮೆಯ ವಿಚಾರ. ಸುಶಿಕ್ಷಿತರೇ ಸಮಾಜಘಾತುಕ ಶಕ್ತಿಗಳಾಗುತ್ತಿರುವುದು ಖೇದಕರ. ಪ್ರತಿ ವಿದ್ಯಾರ್ಥಿಗೆ ಹೃದಯ ಶ್ರೀಮಂತಿಕೆಯ ಶಿಕ್ಷಣ ದೊರೆತಾಗ ಉತ್ತಮ ನಾಗರಿಕನಾಗಲು ಸಾಧ್ಯ ಎಂದರು.

     ಜಿಲ್ಲಾ ಪಂಚಾಯಿತಿ ಸದಸ್ಯ ಪಿ. ಪಿ. ವರ್ಗಿಸ್ ಮಾತನಾಡಿ, ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಪದವಿ ಕಾಲೇಜಿನ ಸ್ಥಾಪನೆ ಶೀಘ್ರದಲ್ಲಿ ನಡೆಯಲಿದೆ ಎಂದು ಭರವಸೆ ನೀಡಿದರು. ತಾಲೂಕು ಪಂಚಾಯಿತಿ ಸದಸ್ಯರಾದ ಪಿ.ವೈ. ಕುಸುಮಾ, ಫಝಲ್ ಕೋಡಿಂಬಾಳ, ಕಡಬ ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಮಂಡೆಕರ ಶುಭಹಾರೈಸಿದರು. ಸಾಮಾಜಿಕ ಮುಂದಾಳು ರಾಜರತ್ನ ಆರಿಗ, ಕಾಲೇಜಿನ ಪ್ರಾಂಶುಪಾಲ ಜನಾರ್ದನ ಕೆ.ಎ. ಉಪಸ್ಥಿತರಿದ್ದರು. ಉಪನ್ಯಾಸಕರಾದ ವಾಸುದೇವ ಗೌಡ ಕೊಲ್ಪೆ ಸ್ವಾಗತಿಸಿ, ಇ.ಸಿ. ಚೆರಿಯನ್ ಬೇಬಿ ವಂದಿಸಿದರು. ಹರಿಶಂಕರ್ ಕಾರ್ಯಕ್ರಮ ನಿರೂಪಿಸಿದರು.

ಬೆಳಿಗ್ಗೆ ಕಾಲೇಜಿನ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಜನಾರ್ದನ ಕೆ.ಎ. ಸ್ನೇಹ ಸಮ್ಮಿಲನ ಕಾರ್ಯಕ್ರಮದ ಮಾರ್ಗದರ್ಶಕ ರಾಜರತ್ನ ಆರಿಗ, ಶ್ರೀ ದುರ್ಗಾಂಬಿಕಾ ದೇವಳದ ವ್ಯಸವ್ಥಾಪನ ಸಮಿತಿ ಅಧ್ಯಕ್ಷ ಜನಾರ್ದನ ಗೌಡ, ಉಪಸ್ಥಿತರಿದ್ದರು. ವಿಶೇಷತೆಗಳು:

* ಕಾರ್ಯಕ್ರಮಕ್ಕೆ ಆಗಮಿಸುವ ಹಳೆ ವಿದ್ಯಾರ್ಥಿಗಳ ನೊಂದಣಿ ಕಾರ್ಯಕ್ರಮ ಕಾಲೇಜಿನ ಆವರಣದ ಗೇಟ್ ಬಳಿ ಪ್ರಸಕ್ತ ವಿದ್ಯಾರ್ಥಿಗಳಿಂದ ನಡೆಯಿತು.

* ಕಾಲೇಜು ಆವರಣದಲ್ಲಿ 25 ವರ್ಷವನ್ನು ಬಿಂಬಿಸುವ 25 ವಿವಿಧ ಬಗೆಯ ಬಣ್ಣದ ಬಾವುಟ ಅಳವಡಿಸಲಾಗಿತ್ತು.

* ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲಾ ಹಳೆ ವಿದ್ಯಾರ್ಥಿಗಳಿಗಾಗಿ ಭೋಜನ ಕೂಟ ಏರ್ಪಡಿಸಲಾಗಿತ್ತು.

* ಚಿಂತನ ಮಂಥನ ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಪಿ.ಪಿ. ಮ್ಯಾಥ್ಯೂ, ವಸಂತ ರಾಯಿ ಗಾಂವ್ಕರ್, ಜೆಪಿಯಂ ಚೆರಿಯನ್, ಕಿಟ್ಟಣ್ಣ ರೈ, ತಮ್ಮಯ್ಯ ಗೌಡ, ಗೋಪಾಲ್ ರಾವ್ ಬಿಳಿನೆಲೆ, ಕುಶಾಲಪ್ಪ, ರೋಶನ್, ಪದ್ಮ, ಮೊದಲಾದ ಅಧ್ಯಾಪಕರು ಹಳೆಯ ನೆನೆಪುಗಳನ್ನು ಮೆಲುಕು ಹಾಕಿದರು. ಕಾಲೇಜು ವತಿಯಿಂದ ಇವರುಗಳನ್ನು ಗೌರವಿಸಲಾಯಿತು.

* ತುಳು ಚಿತ್ರರಂಗದ ’ಪಿಲಿಬೈಲು ಯಮುನಕ್ಕ’ ಚಿತ್ರದ ನಾಯಕಿ ಸೋನಂ ಮುನ್ಸೂರ್, ನಾಯಕ ಮಂಜು ರೈ, ಬಾಲನಟಿ ಪೂರ್ವಿ ಕೆ. ರಾವ್, ನಿರ್ಮಾಪಕ ಹರೀಶ್, ನಿರ್ದೇಶಕ ಸಂದೀಪ್ ರಾಜ್ ತಂಡ ಹಾಡು, ಕುಣಿತಗಳ ಮೂಲಕ ಮನರಂಜಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

* ನೂತನವಾಗಿ ಹಳೆ ವಿದ್ಯಾರ್ಥಿ ಸಂಘ ರಚಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X