Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಗೆ ಮೊಸಳೆಗಳಿರುವ ತೊರೆಯಲ್ಲಿ...

ಶಾಲೆಗೆ ಮೊಸಳೆಗಳಿರುವ ತೊರೆಯಲ್ಲಿ ಸೊಂಟದವರೆಗಿನ ನೀರಿನಲ್ಲೇ ನಡೆದುಕೊಂಡು ಹೋಗುತ್ತಿರುವ ಮಕ್ಕಳು!

ವಾರ್ತಾಭಾರತಿವಾರ್ತಾಭಾರತಿ14 Aug 2016 7:49 PM IST
share
ಶಾಲೆಗೆ ಮೊಸಳೆಗಳಿರುವ ತೊರೆಯಲ್ಲಿ ಸೊಂಟದವರೆಗಿನ ನೀರಿನಲ್ಲೇ ನಡೆದುಕೊಂಡು ಹೋಗುತ್ತಿರುವ ಮಕ್ಕಳು!

ಕೇಂದ್ರಪಾಡಾ(ಒಡಿಶಾ),ಆ.14: ಕೇಂದ್ರಪಾಡಾ ಜಿಲ್ಲೆಯ ರಾಜಕನಿಕಾ ತಾಲೂಕಿನ ಕುಗ್ರಾಮ ಬುರುಡಿಯಾದ ಸೇತುವೆ ವಂಚಿತ ಮಕ್ಕಳು ಪ್ರತಿದಿನ ಶಾಲೆಗೆ ಹೋಗಲು ಮೊಸಳೆಗಳ ಭೀತಿಯಿರುವ ಮಡುವಿನಲ್ಲಿ ಸೊಂಟದವರೆಗಿನ ನೀರಿನಲ್ಲೇ ನಡೆಯಬೇಕಾಗಿದೆ.
ಯಾವುದೇ ಸಮಯದಲ್ಲಿ ಮೊಸಳೆಗಳು ದಾಳಿ ನಡೆಸುವ ಬೆದರಿಕೆಯಿರುವುದರಿಂದ ಈ ಪ್ರಯಾಣ ಮಕ್ಕಳ ಪಾಲಿಗೆ ಬಲು ಅಪಾಯಕಾರಿಯಾಗಿದೆ.
 ಗ್ರಾಮದಲ್ಲಿ ಶಾಲೆಯಿಲ್ಲ,ಹೀಗಾಗಿ ಮಕ್ಕಳು ಒಂದು ಕಿ.ಮೀ.ದೂರದ ತರಸಾ ಗ್ರಾಮದಲ್ಲಿರುವ ಶಾಲೆಯನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಎರಡೂ ಗ್ರಾಮಗಳನ್ನು ಪ್ರತ್ಯೇಕಿಸಿರುವ ತೊರೆಯನ್ನು ದಾಟುವುದು ಈ ಮಕ್ಕಳ ಪಾಲಿಗೆ ಅನಿವಾರ್ಯ ಕರ್ಮವಾಗಿದೆ. ಈ ಅನಿವಾರ್ಯ ಸಂಕಟಕ್ಕೆ ಸಿಲುಕಿರುವ ಪೋಷಕರು ಮಕ್ಕಳ ಸುರಕ್ಷತೆಗಾಗಿ ತಾವೂ ಅವರೊಂದಿಗೆ ತೆರಳುತ್ತಾರೆ.

ಖರಸ್ರೋತ ನದಿಯಲ್ಲಿ ಭರತವಿರುವಾಗ ತೊರೆಯಲ್ಲಿಯೂ ನೀರು ಉಕ್ಕಿ ಹರಿಯುತ್ತದೆ, ಇಂತಹ ಸಂದರ್ಭಗಳಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ.
ತೊರೆಗೆ ಅಡ್ಡವಾಗಿ ಸೇತುವೆಯೊಂದನ್ನು ನಿರ್ಮಿಸುವ ಪ್ರಸ್ತಾವನೆಗೆ ಗ್ರಾಮ ಪಂಚಾಯತ್ ಮಂಜೂರಿ ನೀಡಿದ್ದು, ಕಾಮಗಾರಿ ಆರಂಭಿಸಲು ಹಣಕಾಸು ಬಿಡುಗಡೆಗಾಗಿ ಕಾಯುತ್ತಿದ್ದೇವೆ ಎಂದು ತರಸಾ ಗ್ರಾ.ಪಂ.ಅಧ್ಯಕ್ಷೆ ಸಂಯುಕ್ತಾ ನಾಯಕ್ ಹೇಳಿದರು.

ಮಕ್ಕಳ ಸುರಕ್ಷತೆಯ ಬಗ್ಗೆ ನಮಗೆ ಕಳವಳವಿದೆ. ಹೀಗಾಗಿ ಶಾಶ್ವತ ಸೇತುವೆ ನಿರ್ಮಾಣಗೊಳ್ಳುವವರೆಗೆ ಶೀಘ್ರವೇ ಬಿದಿರಿನ ತಾತ್ಕಾಲಿಕ ಸೇತುವೆಯನ್ನು ರಚಿಸಲಾಗುವುದು ಎಂದು ತಾಲೂಕು ಬಿಡಿಒ ಪ್ರಶಾಂತ ಕುಮಾರ ರೌತ್ ಸುದ್ದಿಸಂಸ್ಥೆಗೆ ತಿಳಿಸಿದರು.
 ಮಕ್ಕಳು ಶಾಲೆಗೆ ಹೋಗುವಾಗ ಅವರ ಸುರಕ್ಷತೆಗಾಗಿ ನಾವು ದೇವರನ್ನು ಬೇಡಿಕೊಳ್ಳುತ್ತೇವೆ. ನಮಗೆ ಬೇರೆ ಯಾವುದೇ ಪರ್ಯಾಯವಿಲ್ಲ. ಮೊಸಳೆಗಳ ಭೀತಿಯಿರುವ ತೊರೆಯನ್ನು ದಾಟುವುದು ಅತ್ಯಂತ ಅಪಾಯಕಾರಿಯಾಗಿದೆ ಎಂದು ಪೋಷಕ ಪ್ರೇಮಾನಂದ ಸಾಹು ಗೋಳು ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X