Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಸಮಾನತೆ ಸಂವಿಧಾನದ ಆಶಯಕ್ಕೆ ವಿರುದ್ಧ:...

ಅಸಮಾನತೆ ಸಂವಿಧಾನದ ಆಶಯಕ್ಕೆ ವಿರುದ್ಧ: ಹರ್ಷ ಮಂದರ್

ವಾರ್ತಾಭಾರತಿವಾರ್ತಾಭಾರತಿ14 Aug 2016 11:41 PM IST
share

ಮಂಗಳೂರು, ಆ.14: ಸಂವಿಧಾನದ ಆಶಯವಾದ ಭ್ರಾತೃತ್ವವು ಸಮಾಜದಲ್ಲಿ ನೆಲೆಗೊಳ್ಳಲು ಭಾರತದ ವಿವಿಧ ವಲಯಗಳಲ್ಲಿ ವ್ಯಾಪಿಸಿರುವ ಅಸಮಾನತೆ ಅಡ್ಡಿಯಾಗುತ್ತಿದೆ ಎಂದು ಖ್ಯಾತ ಬರಹಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ತಿಳಿಸಿದರು.

‘ಮಂಗಳೂರು ಅಭಿವೃದ್ಧಿಗಾಗಿ ನಾಗರಿಕ ವೇದಿಕೆ’ಯ ವತಿಯಿಂದ ‘ಭಾರತದ ಭ್ರಾತೃತ್ವಕ್ಕೆ ಸವಾಲುಗಳು’ ಎಂಬ ವಿಷಯದ ಬಗ್ಗೆ ನಗರದಲ್ಲಿ ನಡೆದ ಸಂವಾದಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಭಾರತದ ಸಂವಿಧಾನದ ಬಹುಮುಖ್ಯ ಆಶಯವಾದ ಭ್ರಾತೃತ್ವ, ಸಹೋದರತೆ ಅಥವಾ ಬಂಧುತ್ವ ಬೇರೆ ಬೇರೆ ಕಾರಣಗಳಿಂದ ಸವಕಲಾಗುತ್ತಿದೆ. ದೇಶದಲ್ಲಿ ಸುಶಿಕ್ಷಿತರ ಸಂಖ್ಯೆ ಏರಿಕೆಯಾಗುತ್ತಿದ್ದರೂ ಸಂವಿಧಾನದ ವೌಲ್ಯಗಳು ಕುಸಿಯುತ್ತಿರುವುದು ನಿರಾಶಾದಾಯಕ ಬೆಳವಣಿಗೆ ಯಾಗಿದೆ. ಅರುಣಾಚಲ ಪ್ರದೇಶದಂತಹ ರಾಜ್ಯವೊಂದರಲ್ಲಿ 120 ಭಾಷೆಗಳನ್ನು ಆಡುವ ಜನರಿದ್ದಾರೆ. ಅದರಲ್ಲೂ ಒಂದು ಭಾಷೆಯನ್ನು ಕೇವಲ 300 ಜನರು ಮಾತ್ರ ಆಡುತ್ತಾರೆ. ಇಂತಹ ವೈವಿಧ್ಯವನ್ನು ಹೊಂದಿರುವ ದೇಶದಲ್ಲಿ ಪರಸ್ಪರ ಸಹೋದರತೆಯಿಂದ ಇದ್ದಾಗ ಮಾತ್ರ ಸಮಾನತೆಯ ವೌಲ್ಯ ನೆಲೆಸಲು ಸಾಧ್ಯ. ಆದರೆ, ಘರ್‌ವಾಪಸಿಯಂತಹ ಚಟು ವಟಿಕೆಗಳು ಸಮಾನತೆಯ ವೌಲ್ಯಕ್ಕೆ ವಿರುದ್ಧವಾಗಿದೆ ಎಂದರು.
 ಜಾತಿವ್ಯವಸ್ಥೆ ಅಸಮಾನತೆಗೆ ಪ್ರಮುಖ ಕಾರಣ. ಧಾರ್ಮಿಕ ವೌಲ್ಯಗಳು ಸಮಾಜದ ದುರ್ಬಲರ, ದಲಿತರ, ಶೋಷಿತರ, ಅಲ್ಪ ಸಂಖ್ಯಾತರ ಬೆಂಬಲವಾಗಿ ನಿಲ್ಲಬೇಕಾಗಿತ್ತು. ಆದರೆ ಈ ವೌಲ್ಯಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ. ಗಾಂಧಿಯೂ ವ್ಯಕ್ತಿಗತವಾಗಿ ಧಾರ್ಮಿಕ ವ್ಯಕ್ತಿಯಾಗಿದ್ದರೂ ಧಾರ್ಮಿಕ ಅಂಧಶ್ರದ್ಧೆಯನ್ನು ಹೊಂದಿರಲಿಲ್ಲ. ಅವರು ಗೋಡ್ಸೆಯ ಗುಂಡಿಗೆ ಬಲಿಯಾದ ಸಂದರ್ಭ ಅವರು ನುಡಿದ ‘ರಾಮ್’ ಈ ದೇಶದ ಬಹುಸಂಖ್ಯಾತರ ರಾಮ. ಆ ರಾಮ ಒಂದು ವರ್ಗಕ್ಕೆ ಸೀಮಿತವಾದ, ಹಿಂಸೆಗೆ ಪ್ರಚೋದನೆ ನೀಡುವ ರಾಮನಲ್ಲ. ಆದರೆ ಇಂದು ‘ಜೈ ಶ್ರೀರಾಮ್’ ಘೋಷಣೆ ಕೋಮುದ್ವೇಷದ ಭಾವನೆ ಬೆಳೆಸಲು ಬಳಕೆಯಾಗುತ್ತಿರುವುದು ವಿಪರ್ಯಾಸ ಎಂದರು.
ಮಂಗಳೂರು ಅಭಿವೃದ್ಧಿಗಾಗಿ ನಾಗರಿಕ ವೇದಿಕೆ’ಯ ಸಂಚಾಲಕಿ ವಿದ್ಯಾ ದಿನಕರ್ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X