ಆ.24: ದುಗ್ಗಲಡ್ಕದಲ್ಲಿ ಕೃಷ್ಣಾಷ್ಟಮಿ
ಸುಳ್ಯ, ಆ.14: ಕೊಯಿಕುಳಿಯ ಮಿತ್ರಯುವಕ ಮಂಡಲದ ವತಿಯಿಂದ 25ನೆ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ದುಗ್ಗಲಡ್ಕ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಆ.24ರಂದು ನಡೆಯಲಿದೆ ಎಂದು ಕಾರ್ಯಕ್ರಮ ಸಮಿತಿ ಅಧ್ಯಕ್ಷ ಕೆ.ಟಿ.ವಿಶ್ವನಾಥ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಿತ್ರ ಬಳಗದ ಸ್ಥಾಪಕಾಧ್ಯಕ್ಷ ಎಂ.ಕೆ.ಪುರುಷೋತ್ತಮ ಗೌಡ ಮಾಣೀಬೆಟ್ಟು ಕಾರ್ಯಕ್ರಮ ಉದ್ಘಾಟಿಸಲಿದ್ದು, ನಪಂ ಸದಸ್ಯ ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ
ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ನಾಯರ್, ನಪಂ ಸದಸ್ಯೆ ಶಶಿಕಲಾ ನೀರಬಿದಿರೆ, ಮಿತ್ರ ಯುವಕ ಮಂಡಲದ ಅಧ್ಯಕ್ಷ ಆನಂದ ನೀರಬಿದಿರೆ ಉಪಸ್ಥಿತರಿದ್ದರು.
Next Story