Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಸ್ವಾತಂತ್ರ್ಯೋತ್ಸವಕ್ಕೆ...

ಉಪ್ಪಿನಂಗಡಿ: ಸ್ವಾತಂತ್ರ್ಯೋತ್ಸವಕ್ಕೆ ಸಮವಸ್ತ್ರ ಧರಿಸದೆ ಪ್ರತಿಭಟಿಸಿದ ವಿದ್ಯಾರ್ಥಿಗಳು!

ಶಾಲೆ ಆರಂಭಗೊಂಡು 3 ತಿಂಗಳಾದರೂ ಲಭಿಸದ ಸಮವಸ್ತ್ರ

ವಾರ್ತಾಭಾರತಿವಾರ್ತಾಭಾರತಿ15 Aug 2016 6:13 PM IST
share
ಉಪ್ಪಿನಂಗಡಿ: ಸ್ವಾತಂತ್ರ್ಯೋತ್ಸವಕ್ಕೆ ಸಮವಸ್ತ್ರ ಧರಿಸದೆ ಪ್ರತಿಭಟಿಸಿದ ವಿದ್ಯಾರ್ಥಿಗಳು!

ಉಪ್ಪಿನಂಗಡಿ, ಆ.15: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳಾಗುತ್ತ ಬಂದರೂ ಸರಕಾರ ಇನ್ನೂ ಸಮವಸ್ತ್ರ ನೀಡದಿರುವುದನ್ನು ಖಂಡಿಸಿದ ಇಲ್ಲಿನ ಪುಳಿತ್ತಡಿ ಮಠದ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ ದಿನದಂದು ಪ್ರತಿಭಟನಾರ್ಥವಾಗಿ ಸಮವಸ್ತ್ರ ಧರಿಸದೆ ಶಾಲೆಗೆ ಆಗಮಿಸಿ 70ನೆ ಸ್ವಾತಂತ್ರೋತ್ಸವ ದಿನವನ್ನು ಆಚರಿಸಿದರು.

ಈ ಮೊದಲೇ ನಿರ್ಧಾರವಾದಂತೆ ಸರಕಾರದ ವಿರುದ್ಧ ಪ್ರತಿಭಟನಾತ್ಮಕವಾಗಿ ಸಮವಸ್ತ್ರ ಧರಿಸದೇ ವಿವಿಧ ಬಣ್ಣಗಳ ಬಟ್ಟೆಬರೆಗಳನ್ನು ತೊಟ್ಟು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದರು.

ಧ್ವಜಾರೋಹಣಗೈದು ಸ್ವಾತಂತ್ರೋತ್ಸವದ ಶುಭಾಷಯ ತಿಳಿಸಿದ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೇಶವ ರಂಗಾಜೆ, ಶಾಲೆ ಆರಂವಾಗಿ ಮೂರು ತಿಂಗಳಾಗುತ್ತಾ ಬಂದರೂ ಸರಕಾರದಿಂದ ಮಾತ್ರ ಇನ್ನೂ ಸಮವಸ್ತ್ರ ಬಂದಿಲ್ಲ. ಸರಕಾರವು ಎಲ್ಲಾ ರೀತಿಯಲ್ಲೂ ಸರಕಾರಿ ಶಾಲೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರಲ್ಲದೆ, ಸರಕಾರದ ಈ ಉದಾಸೀನತೆಯ ಧೋರಣೆಯನ್ನು ಪ್ರತಿಭಟಿಸುವುದಕ್ಕಾಗಿ ಈ ಬಾರಿಯ ಸ್ವಾತಂತ್ರ ದಿನದಂದು ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸದೆ ಸ್ವಾತಂತ್ರ್ಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.

ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವ ಜಾಥಾ ನಡೆಸಿದರು. ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯ ಸುನೀಲ್ ಕುಮಾರ್ ದಡ್ಡು, ಇಬ್ರಾಹೀಂ ಕುಕ್ಕುಜೆ, ಎಸ್‌ಡಿಎಂಸಿಯ ಪ್ರಮುಖರಾದ ಉದಯ ಅತ್ರೆಮಜಲು, ಬಾಬು ನೆಡ್ಚಿಲು, ಧರ್ನಪ್ಪನಾಯ್ಕ, ಸೇಸಪ್ಪ ಬೊಳ್ಳಾವು, ಲಕ್ಷ್ಮಣ ನೆಡ್ಚಿಲು, ರಾಮಚಂದ್ರ ನೆಡ್ಚಿಲು, ರಾಜೇಶ್ ಕಜೆಕ್ಕಾರು, ಪ್ರೇಮ ಬಲ್ಯಾರಬೆಟ್ಟು, ರವಿ ಬಲ್ಯಾರಬೆಟ್ಟು, ಕಮಲಾಕ್ಷಿ ಬೊಳ್ಳಾವು, ಶಾಂತಿಕಿರಣ, ನೋಣಯ್ಯ ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ಸೇಸಪ್ಪ ಗೌಡ ಸ್ವಾಗತಿಸಿದರು. ವಿಶ್ವೇಶ್ವರ ಭಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X