Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪದಕ ವಂಚಿತರಾದರೂ, ಮಿಲಿಯನ್ ಜನರ ಹೃದಯ...

ಪದಕ ವಂಚಿತರಾದರೂ, ಮಿಲಿಯನ್ ಜನರ ಹೃದಯ ಗೆದ್ದ ದೀಪಾ

ವಾರ್ತಾಭಾರತಿವಾರ್ತಾಭಾರತಿ15 Aug 2016 11:03 PM IST
share
ಪದಕ ವಂಚಿತರಾದರೂ, ಮಿಲಿಯನ್ ಜನರ ಹೃದಯ ಗೆದ್ದ ದೀಪಾ

ಅಗರ್ತಲ, ಆ.15: ಭಾರತದ ಜಿಮ್ನಾಸ್ಟಿಕ್ ತಾರೆ ದೀಪಾ ಕರ್ಮಾಕರ್ ರವಿವಾರ ರಾತ್ರಿ ರಿಯೋ ಒಲಿಂಪಿಕ್ಸ್‌ನಲ್ಲಿ ಕೂದಲೆಳೆ ಅಂತರದಿಂದ ಕಂಚಿನ ಪದಕ ವಂಚಿತರಾದರೂ ತ್ರಿಪುರಾ ಸಹಿತ ದೇಶದ ಜನರ ಹೃದಯ ಗೆಲ್ಲಲು ಯಶಸ್ವಿಯಾಗಿದ್ದಾರೆ.

ಜಿಮ್ನಾಸ್ಟಿಕ್ ಫೈನಲ್‌ನಲ್ಲಿ ಅಪಾಯಕಾರಿ ‘ಪ್ರೊಡೊನೊವಾ’ ವಿಭಾಗದಲ್ಲಿ ಸ್ಪರ್ಧಿಸಿದ್ದ ದೀಪಾ ಲ್ಯಾಂಡಿಂಗ್‌ನ ಮೇಲೆ ಮೈದಾನವನ್ನು ಸ್ವಲ್ಪವೇ ಸ್ಪರ್ಶಿಸಿದ ಕಾರಣ ಅಂಕವನ್ನು ಕಳೆದುಕೊಂಡರು. ಒಟ್ಟು 15,066 ಅಂಕ ಗಳಿಸಿದ್ದ ದೀಪಾ ನಾಲ್ಕನೆ ಸ್ಥಾನ ಪಡೆದಿದ್ದರು.

ದೀಪಾ ಪದಕ ಜಯಿಸುವುದರಿಂದ ವಂಚಿತರಾದರೂ ಈ ಹಿಂದಿಗಿಂತ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ದೀಪಾರ ಹೆತ್ತವರು, ಸಂಬಂಧಿಕರು ಹಾಗೂ ಹಿತೈಷಿಗಳು ಅಭಿಪ್ರಾಯಪಟ್ಟಿದ್ದಾರೆ.

 ‘‘ಫೈನಲ್‌ನಲ್ಲಿ ನನ್ನ ಮಗಳ ಪ್ರದರ್ಶನ ಉತ್ತಮವಾಗಿತ್ತು. ಆಕೆಯ ಪ್ರದರ್ಶನದಿಂದ ನಮಗೆ ಅತೀವ ಸಂತಸವಾಗಿದೆ. ಆಕೆ ನನ್ನ ಮಗಳು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಯಾಗುತ್ತಿದೆ. ಭಾರತದ ಪುಟ್ಟ ರಾಜ್ಯ ತ್ರಿಪುರಾದಿಂದ ವಿಶ್ವದ ಅಗ್ರ ಜಿಮ್ನಾಸ್ಟಿಕ್ ಸ್ಪರ್ಧೆಯೊಂದರಲ್ಲಿ ಭಾಗವಹಿಸಲು ತೆರಳಿದ್ದು ಹೆಮ್ಮೆಯ ವಿಷಯ’’ ಎಂದು ದೀಪಾರ ತಂದೆ ದುಲಾಲ್ ಕರ್ಮಾಕರ್ ಹೇಳಿದ್ದಾರೆ.

‘‘ನನ್ನ ಮಗಳು 2018ರ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಗೆದ್ದೇ ಗೆಲ್ಲುತ್ತಾಳೆ’’ ಎಂದು ದೀಪಾರ ತಾಯಿ ಗೌರಿ ದೇವಿ ಹೇಳಿದ್ದಾರೆ.

2018ರ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯುತ್ತದೆ. ರವಿವಾರದ ಸಂಜೆಯಿಂದಲೇ ತ್ರಿಪುರಾದ ರಾಜಧಾನಿ ಅಗರ್ತಲದ ಹೊರಭಾಗ ಅಭಯ್‌ನಗರದಲ್ಲಿರುವ ದೀಪಾರ ಮನೆಯ ಹೊರಗೆ ಸಾವಿರಾರು ಜನರು ಹಾಗೂ ಪತ್ರಕರ್ತರು ಜಮಾಯಿಸಿದ್ದರು.

‘‘ಅರ್ಹತಾ ಸುತ್ತಿನಲ್ಲಿ 8ನೆ ಸ್ಥಾನ ಪಡೆದಿದ್ದ ದೀಪಾ ಫೈನಲ್‌ನಲ್ಲಿ ನಾಲ್ಕನೆ ಸ್ಥಾನಕ್ಕೆ ತಲುಪಿರುವುದಕ್ಕೆ ನಮಗೆಲ್ಲರಿಗೂ ತುಂಬಾ ಸಂತೋಷವಾಗುತ್ತಿದೆ. ಮುಂದಿನ ಒಲಿಂಪಿಕ್ಸ್‌ನಲ್ಲಿ ದೀಪಾ ಪದಕ ಗೆಲ್ಲುತ್ತಾರೆಂಬ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವಿದೆ. ತ್ರಿಪುರಾದ ಹೆಸರನ್ನು ವಿಶ್ವದ ಅಗ್ರಮಾನ್ಯ ಕ್ರೀಡೆಯಲ್ಲಿ ಬೆಳಗಿಸಿರುವ ದೀಪಾರ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಾಗುತ್ತಿದೆ’’ ಎಂದು ದೀಪಾರ ನೆರೆಮನೆಯವರಾದ ಸಿಪಿಐ-ಎಂ ಪಕ್ಷದ ಮುಖಂಡ ಶಂಕರ್ ಪ್ರಸಾದ್ ದತ್ತ್ ಹೇಳಿದ್ದಾರೆ.

 ರವಿವಾರ ಸಂಜೆಯಿಂದಲೇ ತ್ರಿಪುರಾದ ಜನತೆ ಟಿವಿ ಸೆಟ್ ಮುಂದೆ ಕುಳಿತುಕೊಂಡಿದ್ದರು. ದೀಪಾ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕದ ಬರ ನೀಗಿಸುತ್ತಾರೆಂಬ ವಿಶ್ವಾಸದಲ್ಲಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ.

‘‘ದೀಪಾ ಪದಕವನ್ನು ಗೆಲ್ಲದೆ ಇದ್ದರೂ ಫೈನಲ್‌ನಲ್ಲಿ ಆಕೆಯ ಪ್ರದರ್ಶನ ಅದ್ಭುತವಾಗಿತ್ತು. ದೀಪಾ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಫೈನಲ್ ಸುತ್ತಿಗೆ ತಲುಪಿ ಹೊಸ ಇತಿಹಾಸ ನಿರ್ಮಿಸಿದ್ದಾರೆ’’ ಎಂದು ತ್ರಿಪುರಾದ ಕ್ರೀಡಾಮಂತ್ರಿ ಸಾಹಿದ್ ಚೌಧರಿ ಹೇಳಿದ್ದಾರೆ.

ದೀಪಾ 52 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೊದಲ ಮಹಿಳಾ ಜಿಮ್ನಾಸ್ಟಿಕ್ ಪಟು ಎನಿಸಿಕೊಂಡಿದ್ದರು. 1964ರಲ್ಲಿ ಕೊನೆಯ ಬಾರಿ ಒಲಿಂಪಿಕ್ಸ್‌ನಲ್ಲಿ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾರತ ಭಾಗವಹಿಸಿತ್ತು. ಈ ವರೆಗೆ ಭಾರತದ 11 ಪುರುಷ ಜಿಮ್ನಾಸ್ಟಿಕ್ ತಾರೆಯರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X