Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 284 ಮಂದಿ ಸನ್ನಡತೆ ಕೈದಿಗಳಿಗೆ 'ಬಿಡುಗಡೆ...

284 ಮಂದಿ ಸನ್ನಡತೆ ಕೈದಿಗಳಿಗೆ 'ಬಿಡುಗಡೆ ಭಾಗ್ಯ'

ವಾರ್ತಾಭಾರತಿವಾರ್ತಾಭಾರತಿ15 Aug 2016 11:58 PM IST
share
284 ಮಂದಿ ಸನ್ನಡತೆ ಕೈದಿಗಳಿಗೆ ಬಿಡುಗಡೆ ಭಾಗ್ಯ

ಜೈಲಿನಲ್ಲಿದ್ದ ಪ್ರೇಮಿಗಳಿಗೆ 'ಸ್ವಾತಂತ್ರ'
ಬೆಂಗಳೂರು, ಆ. 15: ಇಡೀ ದೇಶವೇ 70ನೆ ಸ್ವಾತಂತ್ರೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿರುವ ಸುಸಂದರ್ಭದಲ್ಲೇ, 48ಮಂದಿ ಮಹಿಳಾ ಕೈದಿಗಳು ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 284 ಮಂದಿ ಕೈದಿಗಳಿಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆಯ ಸ್ವಾತಂತ್ರ ದಕ್ಕಿದೆ.
ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ 120, ಬಳ್ಳಾರಿ ಕಾರಾಗೃಹದಿಂದ 26, ಧಾರವಾಡ-8, ಮೈಸೂರು-52, ಬೆಳಗಾವಿ-35, ವಿಜಯಪುರ-16 ಹಾಗೂ ಕಲಬುರಗಿ ಕಾರಾಗೃಹದಿಂದ 27 ಮಂದಿ ಸೇರಿ ದಂತೆ ಒಟ್ಟು 284 ಮಂದಿ ಜೈಲು ಹಕ್ಕಿಗಳಿಗೆ ಸ್ವಾತಂತ್ರ ಸಿಕ್ಕಂತೆ ಆಗಿದೆ.
14 ವರ್ಷ ಶಿಕ್ಷೆ ಪೂರೈಸಿದ 236 ಮಂದಿ ಪುರುಷರು ಹಾಗೂ ಹತ್ತು ವರ್ಷ ಶಿಕ್ಷೆ ಪೂರೈಸಿದ 48 ಮಂದಿ ಮಹಿಳಾ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ. ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸನ್ನಡತೆ ಕೈದಿಗಳಿಗೆ ಪ್ರಮಾಣ ಪತ್ರ ನೀಡುವ ಮೂಲಕ ಬಿಡುಗಡೆ ಮಾಡಲಾಯಿತು.
ಹೊಸ ಮಾರ್ಗಸೂಚಿಯನ್ವಯ ಒಟ್ಟು 320 ಮಂದಿ ಕೈದಿಗಳನ್ನು ಸನ್ನಡತೆ ಆಧಾರ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಆದರೆ, ಆ ಪೈಕಿ ಕೊಲೆ, ದರೋಡೆ ಸೇರಿದಂತೆ ಗಂಭೀರ ಸ್ವರೂಪದ ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆ ಸಂಖ್ಯೆ 284ಕ್ಕೆ ಇಳಿಸಲಾಗಿದೆ.
ಪ್ರೇಮಿಗಳ ಬಿಡುಗಡೆ: ಅನೈತಿಕ ಸಂಬಂಧದ ಹಿನ್ನೆಲೆ ಯಲ್ಲಿ ತನ್ನ ಪ್ರಿಯಕರನ ಜತೆ ಸೇರಿ ಪತಿ ಅಶೋಕ್ ಗುತ್ತೆದಾರ್ ಹತ್ಯೆಗೈದ ಕಲಬುರಗಿ ಜೈಲು ಸೇರಿದ್ದ ಪದ್ಮಾ ವತಿ ಮತ್ತು ಆಕೆಯ ಪ್ರಿಯಕರ ಸುಭಾಶ್‌ಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಹೊಂದಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೆ ಇಬ್ಬರು ಪ್ರೇಮಿಗಳು ಪತ್ರಿಕೋದ್ಯಮ ಪದವಿ ಪಡೆದಿದ್ದು, ಇಬ್ಬರೂ ಬಹಿರಂಗ ವಾಗಿ ಮದುವೆ ಆಗುವ ಮೂಲಕ ಹೊಸ ಜೀವನಕ್ಕೆ ಕಾಲಿರಿಸುವ ಇಚ್ಛೆಹೊಂದಿದ್ದಾರೆ. ತಮಗೆ ತಪ್ಪಿನ ಅರಿವಾ ಗಿದ್ದು, ಉತ್ತಮ ಪ್ರಜೆಗಳಾಗಿ ಜೀವನ ನಡೆಸುತ್ತೇವೆ ಎಂದು ಪ್ರೇಮಿಗಳು ಹೇಳಿದ್ದಾರೆ.
ಈ ಮಧ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಶಿಕ್ಷೆಗೆ ಒಳಗಾಗಿ ಬಳ್ಳಾರಿ ಕೇಂದ್ರ ಕಾರಾ ಗೃಹದಲ್ಲಿದ್ದ ತಂದೆ-ಮಗನಿಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಭಾಗ್ಯ ಲಭಿಸಿದಂತಾಗಿದೆ.

ಹೊಸ ಜೀವನ ನಡೆಸಿ
ಸನ್ನಡತೆ ಆಧಾರದ ಮೇಲೆ ಕಾರಾಗೃಹದಿಂದ ಹೊರ ಬರುತ್ತಿರುವ ಎಲ್ಲ ಕೈದಿಗಳು ಸಮಾಜದ ಮುಖ್ಯ ವಾಹಿನಿಗೆ ಬರಲು ಸಮಸ್ಯೆಗಳನ್ನು ಎದುರಿ ಸಬೇಕಾಗು್ತದೆ. ಆ ಹಿನ್ನೆಲೆಯಲ್ಲಿ ರಾಗ-ದ್ವೇಷ,ಉದ್ವೇಗಕ್ಕೆ ಒಳಗಾಗದೆ ಹೊಸ ಜೀವನ ನಡೆಸ ಬೇಕೆಂದು ಕಲಬುರಗಿ ಜಿಲ್ಲಾ ನ್ಯಾಯಾಲಯದ ನ್ಯಾ.ಬಿ.ವಿ. ಪಾಟೀಲ್ ಸಲಹೆ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X