Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಯಮ ಪಾಲನೆ ಖಾತ್ರಿಗೊಂಡ ಬಳಿಕ...

ನಿಯಮ ಪಾಲನೆ ಖಾತ್ರಿಗೊಂಡ ಬಳಿಕ ಮರಳುಗಾರಿಕೆ ಆರಂಭ?

ವಾರ್ತಾಭಾರತಿವಾರ್ತಾಭಾರತಿ16 Aug 2016 12:21 AM IST
share

ಸಾಗಾಟದ ಮೇಲೆ ಜಿಲ್ಲಾಡಳಿತದ ಸಿಸಿಟಿವಿ ಕಣ್ಗಾವಲು

ಮಂಗಳೂರು, ಆ.15: ದ.ಕ. ಜಿಲ್ಲೆಯಲ್ಲಿ ಎರಡು ತಿಂಗಳ ಮರಳುಗಾರಿಕೆ ನಿಷೇಧದ ಬಳಿಕ ಆ.16ರಿಂದ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಗೊಳ್ಳಬೇಕಿದೆ. ಆದರೆ, ಜಿಲ್ಲಾಡಳಿತ ಮರಳುಗಾರಿಕೆ ಮೇಲೆ ಬಿಗಿ ಕಣ್ಗಾವಲಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಸಾಂಪ್ರದಾಯಿಕ ಮರಳುಗಾರಿಕೆಗೆ ಒತ್ತು ನೀಡಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಮಾರ್ಗಸೂಚಿಗಳನ್ನು ಪರವಾನಿಗೆದಾರರು ಪಾಲಿಸಿದ್ದಾರೆಯೇ ಎಂಬುದನ್ನು ಖಾತ್ರಿಪಡಿಸಿದ ಬಳಿಕವೇ ಮರಳುಗಾರಿಕೆ ಆರಂಭಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ನೂತನ ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ಈಗಾಗಲೇ ಮರಳುಗಾರರ ಜತೆ ಮಾತುಕತೆ ನಡೆಸಿದ್ದು, ಈ ವಾರದಲ್ಲಿ ಮತ್ತೆ ಸಭೆ ನಡೆಸಿ ನಿಯಮ ಪಾಲನೆ ಕುರಿತು ಖಾತ್ರಿಪಡಿಸಲಿದ್ದಾರೆ. ಸಿಆರ್‌ಝಡ್ ವ್ಯಾಪ್ತಿಯ ಮರಳುಗಾರಿಕೆಗೆ ಹೊಸ ಕಾನೂನು ರಚನೆಯಾಗಿದ್ದರೂ, ಸ್ಪಷ್ಟ ಮಾರ್ಗಸೂಚಿ ಇಲ್ಲದ ಕಾರಣ ಅಕ್ರ

ು ಮರಳುಗಾರಿಕೆ ಅವ್ಯಾಹತಗೊಂಡಿತ್ತು. ಇದು ಕರಾವಳಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯನ್ನು ಮನಗಂಡು ಹಿಂದಿನ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ಸಮಿತಿಯು ಜುಲೈ 11ರಂದು ವರದಿ ಸಲ್ಲಿಸಿತ್ತು. ವರದಿಯ ಪ್ರಕಾರ ಸಾಂಪ್ರದಾಯಿಕ ಮರಳುಗಾರಿಕೆಗೆ ಒತ್ತುಕೊಟ್ಟು ಯಾಂತ್ರಿಕ ಮರಳುಗಾರಿಕೆ ನಿಷೇಧ ಹಾಗೂ ರಾತ್ರಿ ಮರಳು ಗಣಿಗಾರಿಕೆ, ಸಾಗಾಟ ನಿಷೇಧ ನಿಯಮಗಳು ಪ್ರಸ್ತಾವಿಸಲ್ಪಟ್ಟಿತ್ತು. ಮಾತ್ರವಲ್ಲದೆ, ಮರಳನ್ನು ಜಿಲ್ಲೆಯೊಳಗೆ ಮಾತ್ರವೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಬಳಕೆ ಮಾಡಬೇಕು ಎಂಬ ಪ್ರಮುಖ ಷರತ್ತಿನ ಹಿನ್ನೆಲೆಯಲ್ಲಿ ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಮೂಲಕ ಜಿಲ್ಲಾಡಳಿತ ಕಣ್ಗಾವಲು ಇರಿಸಲಿದ್ದು, ಮರಳು ಸಾಗಾಟದ ಲಾರಿಗಳಿಗೆ ಜಿಪಿಎಸ್ ಅಳವಡಿಕೆಯನ್ನೂ ಕಡ್ಡಾಯಗೊಳಿಸಲು ಸಮಿತಿ ಶಿಫಾರಸು ಮಾಡಿತ್ತು. ಸಮಿತಿಯ ಶಿಫಾರಸಿನಂತೆ ಮರಳು ತೆಗೆಯಲು ಯಂತ್ರೋಪಕರಣ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮರಳು ತೆಗೆದ ಬಳಿಕವೂ ಟ್ರಕ್, ಲಾರಿ ಅಥವಾ ಟಿಪ್ಪರ್‌ಗಳಿಗೆ ಲೋಡಿಂಗ್ ಮಾಡುವಾಗಲೂ ಯಂತ್ರೋಪಕರಣ ಬಳಕೆಗೆ ಅವಕಾಶ ಇರುವುದಿಲ್ಲ. ಸಿಆರ್‌ಝಡ್‌ನ ನಿಯಮದ ಪ್ರಕಾರ ನಾಡದೋಣಿಗಳ ಮೂಲಕ ಮಾತ್ರ ಮರಳು ತೆಗೆಯಲು ಅವಕಾಶವಿದೆ. ಅದರಂತೆ ಪ್ರತಿ ಪರವಾನಿಗೆದಾರರು 2 ದೋಣಿಗಳನ್ನು ಮಾತ್ರವೇ ಬಳಸಬಹುದು. ದೋಣಿಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರಿಂದ ನೋಂದಣಿ ಮಾಡಿಸಿರಬೇಕು. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಮರಳುಗಾರಿಕೆಗೆ ಅವಕಾಶವಿದೆ. ಪರವಾನಿಗೆಯ ನಿಗದಿತ ಪ್ರಮಾಣಕ್ಕೆ ಅನುಗುಣವಾಗಿ ಮರಳು ಸಾಗಾಟ ಮಾಡತಕ್ಕದ್ದು. ಆರು ಚಕ್ರದ ವಾಹನಗಳಲ್ಲಿ ಮಾತ್ರ ಸಾಗಾಟಕ್ಕೆ ಅವಕಾಶವಿದ್ದು, 10 ಮತ್ತು 12 ಚಕ್ರಗಳ ವಾಹನಗಳಲ್ಲಿ ಮರಳು ಸಾಗಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ರಸ್ತುತ ಸಿಆರ್‌ಝಡ್ ವ್ಯಾಪ್ತಿಯಲ್ಲಿ 427 ಗುತ್ತಿಗೆದಾರರಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿದೆ. ಈ ಪರವಾನಿಗೆ ದಾರರೆಲ್ಲರೂ ಜಿಲ್ಲಾಡಳಿತ ನೇತೃತ್ವದ ಸಮಿತಿಯ ಮಾರ್ಗಸೂಚಿ ಗಳನ್ನು ಪಾಲಿಸುವುದು ಅನಿವಾರ್ಯ. ನಿಯಮ ಉಲ್ಲಂಘಿಸಿದರೆ ಅಂತಹ ಪರವಾನಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕೂಡಾ ನಿರ್ಧರಿಸಲಾಗಿದೆ ಎಂದು ಈಗಾಗಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ನಾಗೇಂದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಮರಳುಗಾರಿಕೆಗೆ ಸಂಬಂಧಿಸಿ ಅಧಿಕಾರಿಗಳ ಸಭೆಯನ್ನು ಮಂಗಳವಾರ ಕರೆಯಲಾಗಿದ್ದು, ಈ ಸಂದರ್ಭ ಮರಳುಗಾರಿಕೆ ಮತ್ತೆ ಆರಂಭಿಸುವ ದಿನ ಅಂತಿಮಗೊಳಿಸಲಾಗುವುದು. ಸಾಂಪ್ರದಾಯಿಕತೆಗೆ ಒತ್ತುಕೊಟ್ಟು, ಹೊಸ ಮಾರ್ಗಸೂಚಿಯಂತೆ ದ.ಕ. ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಯಬೇಕೆಂದು ಜಿಲ್ಲಾಡಳಿತ ಇಚ್ಛೆಯಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಎಲ್ಲ ಮರಳುಗಾರರಿಗೆ ನೋಟಿಸ್ ನೀಡಲಾಗುವುದು.
          -ಕೆ.ಜಿ. ಜಗದೀಶ್, ದ.ಕ. ಜಿಲ್ಲಾಧಿಕಾರಿ

ನಿಯಮಗಳನ್ನು ಪಾಲಿಸಿದರೆ ಅವಕಾಶ
ನಿಷೇಧಿತ ಅವಧಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಪಾಲಿಸಿದಲ್ಲಿ ಮರಳುಗಾರಿಕೆಗೆ ಅವಕಾಶ ದೊರೆಯಲಿದೆ. ಈಗಾಗಲೇ ಪರವಾನಿಗೆ ನೀಡುವ ಸಂದರ್ಭ ನಿಯಮಗಳನ್ನು ಪಾಲಿಸುವಂತೆ ಪರವಾನಿಗೆದಾರರಿಗೆ ಸ್ಪಷ್ಟಪಡಿಸಲಾಗಿದೆ. ಮರಳು ಸಾಗಾಟದ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X