Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಡಿಕೆ ಖರೀದಿಗೆ ಕರ್ನಾಟಕದ ಪ್ರಸ್ತಾವಿತ...

ಅಡಿಕೆ ಖರೀದಿಗೆ ಕರ್ನಾಟಕದ ಪ್ರಸ್ತಾವಿತ ಬೆಲೆ ತುಂಬ ಅಧಿಕ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ16 Aug 2016 6:55 PM IST
share
ಅಡಿಕೆ ಖರೀದಿಗೆ ಕರ್ನಾಟಕದ ಪ್ರಸ್ತಾವಿತ ಬೆಲೆ ತುಂಬ ಅಧಿಕ: ಕೇಂದ್ರ

ಹೊಸದಿಲ್ಲಿ,ಆ.16: ದೇಶಿಯ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಗಳ ಕುಸಿತದ ನಡುವೆಯೇ ಕೇಂದ್ರವು ತಾನು ಕರ್ನಾಟಕದಿಂದ ಅಡಿಕೆಯನ್ನು ಖರೀದಿಸಲು ಸಿದ್ಧ, ಆದರೆ ರಾಜ್ಯ ಸರಕಾರವು ಪ್ರಸ್ತಾಪಿಸಿರುವ ಪ್ರತಿ ಕೆಜಿಗೆ 300-400 ರೂ.ದರ ತುಂಬ ಹೆಚ್ಚಾಗಿದೆ ಎಂದು ಹೇಳಿದೆ.

ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ 40,000 ಟನ್ ಅಡಿಕೆ ಖರೀದಿಗಾಗಿ ಕರ್ನಾಟಕ ಸರಕಾರದ ಪ್ರಸ್ತಾವನೆಯ ಕುರಿತು ಚರ್ಚಿಸಲು ಕೇಂದ್ರ ಕೃಷಿ ಸಚಿವಾಲಯವು ತನ್ನ ಹಿರಿಯ ಅಧಿಕಾರಿಯೋರ್ವರನ್ನು ಬೆಂಗಳೂರಿಗೆ ಕಳುಹಿಸಿತ್ತು.

ಬೆಲೆ ಕುಸಿತವನ್ನು ತಡೆಯಲು ಕೇಂದ್ರವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಕರ್ನಾಟಕದ ಹಿರಿಯ ಬಿಜೆಪಿ ನಾಯಕರು ಕಳೆದ ಜೂನ್ ತಿಂಗಳಲ್ಲಿ ಆಗ್ರಹಿಸಿದ್ದರು. ಇತರ ಕ್ರಮಗಳ ಜೊತೆಗೆ ಅಡಿಕೆಯ ಆಮದನ್ನು ನಿಷೇಧಿಸುವಂತೆಯೂ ಅವರು ಕೋರಿದ್ದರು.

ಕರ್ನಾಟಕ ಸರಕಾರದ ಪ್ರಸ್ತಾವನೆಯನ್ನು ನಾವು ಪರಿಶೀಲಿಸುತ್ತಿದ್ದೇವೆ. ರಾಜ್ಯವು ಸಲ್ಲಿಸಿರುವ ಖರೀದಿ ಮತ್ತು ಮಾರುಕಟ್ಟೆ ಬೆಲೆಗಳು ಹಾಗೂ ಉತ್ಪಾದನಾ ವೆಚ್ಚಗಳು ತುಂಬ ಹೆಚ್ಚಾಗಿವೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

 ರಾಜ್ಯ ಸರಕಾರವು ಪ್ರಸ್ತಾಪಿಸಿರುವ ಚಾಲಿ ಅಡಿಕೆಗೆ ಪ್ರತಿ ಕೆಜಿಗೆ 300 ರೂ.ಮತ್ತು ಕೆಂಪಡಿಕೆಗೆ ಪ್ರತಿ ಕೆಜಿಗೆ 400 ರೂ.ಖರೀದಿ ಬೆಲೆಗಳು ಕೇರಳದ ಅಡಿಕೆ ಮತ್ತು ಸಂಬಾರ ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯವು ಶಿಫಾರಸು ಮಾಡಿರುವ ಪ್ರತಿ ಕೆಜಿಗೆ 172 ರೂ.ಬೆಲೆಗೆ ಹೋಲಿಸಿದರೆ ತುಂಬ ಹೆಚ್ಚಾಗಿವೆ. ಅಲ್ಲದೆ ಕರ್ನಾಟಕದಲ್ಲಿ ಅಡಿಕೆಯ ಪ್ರಚಲಿತ ಮಾರುಕಟ್ಟೆ ಬೆಲೆಗಳು ಉತ್ಪಾದನಾ ವೆಚ್ಚಕ್ಕಿಂತ ಮೇಲೆಯೇ ಇವೆ ಎಂದೂ ನಿರ್ದೇಶನಾಲಯವು ಮಾಹಿತಿ ನೀಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಾಲಿ ಅಡಿಕೆಯ ಬೆಲೆ ಶೇ.18ರಷ್ಟು ಮತ್ತು ಕೆಂಪಡಿಕೆಯ ಬೆಲೆ ಶೇ.16ರಷ್ಟು ಕುಸಿದಿವೆ.

ನಿರ್ದೇಶನಾಲಯವು ಬಿಂಬಿಸಿರುವ 4.5 ಲ.ಟನ್‌ಗೆ ಹೋಲಿಸಿದರೆ 2015-16ನೇ ಬೆಳೆಸಾಲಿನಲ್ಲಿ ಅಡಿಕೆ ಉತ್ಪಾದನೆಯ ಕರ್ನಾಟಕ ಸರಕಾರದ 4.07 ಲ.ಟ.ಅಂದಾಜು ಕಡಿಮೆಯಿದೆ ಎಂದು ಹೇಳಿರುವ ಸಚಿವಾಲಯವು, ಖರೀದಿಯ ಪ್ರಮಾಣವು ಎಲ್ಲ ಮಾದರಿಗಳ ಒಟ್ಟು ಉತ್ಪಾದನೆಯ ಶೇ.10ರವರೆಗೆೆ ಸೀಮಿತವಾಗಿರಬೇಕು. ಹೀಗಾಗಿ ಖರೀದಿಯ ಪ್ರಮಾಣ ಚಾಲಿ ಅಡಿಕೆಗೆ 24,471 ಟ. ಮತ್ತು ಕೆಂಪಡಿಕೆಗೆ 16,314 ಟ.ಆಗಬೇಕು ಎಂದು ಅಭಿಪ್ರಾಯಿಸಿದೆ.

ಆದರೆ ಕರ್ನಾಟಕ ಸರಕಾರವು ತನ್ನ ಪ್ರಸ್ತಾವನೆಯಲ್ಲಿ 28,000 ಟ.ಚಾಲಿ ಮತ್ತು 12,000 ಟ.ಕೆಂಪಡಿಕೆಯನ್ನು ಖರೀದಿಸುವಂತೆ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X