Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.2ರಂದು ಅಖಿಲ ಭಾರತ ಸಾರ್ವತ್ರಿಕ...

ಸೆ.2ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಸಿಐಟಿಯುನಿಂದ ವಾಹನ ಜಾಥಾ

ವಾರ್ತಾಭಾರತಿವಾರ್ತಾಭಾರತಿ17 Aug 2016 8:55 PM IST
share
  • ಸೆ.2ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಸಿಐಟಿಯುನಿಂದ ವಾಹನ ಜಾಥಾ
  • ಸೆ.2ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಸಿಐಟಿಯುನಿಂದ ವಾಹನ ಜಾಥಾ

ಉಳ್ಳಾಲ, ಆ.17: ಕಾರ್ಮಿಕ ವರ್ಗದ 17 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಸೆ.2 ರಂದು ಅಖಿಲ ಭಾರತ ಸಾರ್ವತ್ರಿಕ ಮಹಾ ಮುಷ್ಕರ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಸಿಐಟಿಯು ಸಂಘಟನೆಯು ಜಿಲ್ಲೆಯಾದ್ಯಂತ ವಾಹನ ಜಾಥಾ ನಡೆಸಿ ತೊಕ್ಕೊಟ್ಟಿನಲ್ಲಿ ಬಂದ್ ಬಗ್ಗೆ ಪ್ರಚಾರ ನಡೆಸಿತು.

ತೊಕ್ಕೊಟ್ಟಿಗೆ ಬುಧವಾರ ಆಗಮಿಸಿದ ವಾಹನ ಪ್ರಚಾರ ಜಾಥಾವನ್ನು ಉಳ್ಳಾಲವಲಯ ಸಿಐಟಿಯು ಸಂಘದ ಪದಾಧಿಕಾರಿಗಳು ಬರಮಾಡಿಕೊಂಡರು.

ಸಿಐಟಿಯು ಜಿಲ್ಲಾ ಮುಖಂಡ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಕಳೆದ ಸಲದ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಅಧಿಕಾರಕ್ಕೆ ಬಂದ ನಂತರ ಕೇಂದ್ರದ ಕಾರ್ಮಿಕ ಸಂಘಟನೆಗಳು ದೇಶದ ಸುಮಾರು 17 ಕೋಟಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಪಟ್ಟಿ ತಯಾರಿಸಿ ಪ್ರಮುಖ 17 ಬೇಡಿಕೆಗಳನ್ನು ಮುಂದಿಟ್ಟಿತ್ತು. ಆದರೆ ನರೇಂದ್ರಮೋದಿಯವರ ಸರಕಾರವು ಒಂದೂವರೆ ವರುಷ ಪೂರೈಸಿದರೂ ಕಾರ್ಮಿಕರ ಯಾವುದೇ ಬೇಡಿಕೆಗಳನ್ನು ಈಡೇರಿಸದೆ ಈ ಹಿಂದಿನ ಸರಕಾರಗಳಿಗಿಂತಲೂ ತೀವ್ರವಾದ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ನಿರುದ್ಯೋಗ ಸಮಸ್ಯೆಯು ಹೆಚ್ಚಾಗಿ, ದೇಶದಲ್ಲಿ ಬಡತನ ತಾಂಡವವಾಡುತ್ತಿದ್ದರೂ ಪ್ರಧಾನಿಯವರು ಮಾತ್ರ ಭಾರೀ ಸಾಧನೆ ಮಾಡುತ್ತಿರುವುದರ ಬಗ್ಗೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿ ಕಾರ್ಮಿಕರ, ಜನಸಾಮಾನ್ಯರ ಸಮಸ್ಯೆಯನ್ನು ಬದಿಗಿಟ್ಟು ವಿಶ್ವದ ಎದುರು ದೇಶದ ಶ್ರೀಮಂತಿಕೆಯನ್ನು ತೋರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಇಂದು ರಸ್ತೆ ಸಾರಿಗೆ ವ್ಯವಸ್ಥೆಯನ್ನೂ ದೊಡ್ಡ ಬಂಡವಾಳಶಾಹಿಗಳಿಗೆ ನೀಡಿ ಖಾಸಗೀಕರಣ ಮಾಡುವ ಮಸೂದೆಯನ್ನು ಜಾರಿಗೆಗೊಳಿಸಲು ಹೊರಟಿದ್ದಾರೆ. ಇದರಿಂದ ಸಾರಿಗೆಯಲ್ಲಿ ಕೆಲಸಮಾಡುತ್ತಿರುವ ಅದೆಷ್ಟೋ ಕಾರ್ಮಿಕರು ಬೀದಿಪಾಲಾಗಲಿದ್ದಾರೆ. ನೂತನ ರಸ್ತೆ ಸುರಕ್ಷತಾ ಮಸೂದೆಯ ಅಸಂಬದ್ಧ ಕಾನೂನನ್ನು ಜಾರಿಗೆಗೊಳಿಸಿ ಬಡ ವಾಹನ ಚಾಲಕರಿಂದ 1,000ದಿಂದ 4 ಲಕ್ಷ ರೂ.ವರೆಗೆ ದಂಡ ವಸೂಲಾತಿ ನಡೆಸುತ್ತಿರುವುದು ಖಂಡನೀಯ ಎಂದು ಹೇಳಿದರು.

ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಕೃಷ್ಣಪ್ಪ ಸಾಲಿಯಾನ್, ವಿಲಾಸಿನಿ ಬಬ್ಬುಕಟ್ಟೆ, ಪದ್ಮಾವತಿ ಶೆಟ್ಟಿ, ಸಂತೋಷ್ ಶಕ್ತಿನಗರ, ಯೋಗೀಶ್ ಜೆಪ್ಪು, ಜಯಂತ್ ನಾಯ್ಕು, ಹರೀಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X