Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳೆಯರ ಕುಸ್ತಿ: ಸಾಕ್ಷಿ ಸೋತರೂ ಕಮರದ...

ಮಹಿಳೆಯರ ಕುಸ್ತಿ: ಸಾಕ್ಷಿ ಸೋತರೂ ಕಮರದ ಕಂಚಿನ ಕನಸು

ವಾರ್ತಾಭಾರತಿವಾರ್ತಾಭಾರತಿ17 Aug 2016 11:45 PM IST
share
ಮಹಿಳೆಯರ ಕುಸ್ತಿ: ಸಾಕ್ಷಿ ಸೋತರೂ ಕಮರದ ಕಂಚಿನ ಕನಸು

  ರಿಯೋ ಡಿ ಜನೈರೊ, ಆ.17: ರಿಯೋ ಒಲಿಂಪಿಕ್ಸ್‌ನಲ್ಲಿ ವನಿತೆಯರ 58 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್ ಸೋಲುಂಡಿದ್ದರೂ ಕಂಚಿನ ಪದಕ ಗೆಲ್ಲುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಬುಧವಾರ ಇಲ್ಲಿ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಪದಕದ ಭರವಸೆ ಮೂಡಿಸಿದ್ದ ಸಾಕ್ಷಿ ರಶ್ಯದ ವಾಲೆರಿಯಾ ಕೊಬ್ಲೊವಾ ವಿರುದ್ಧ 2-9 ಅಂಕಗಳ ಅಂತರದಿಂದ ಶರಣಾದರು. ವಾಲೆರಿಯಾ ಫೈನಲ್‌ಗೆ ತಲುಪಿದ ಹಿನ್ನೆಲೆಯಲ್ಲಿ ಸಾಕ್ಷಿ ರಿಪಿಚೇಜ್ ಸುತ್ತಿನಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಈ ಸುತ್ತಿನಲ್ಲಿ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಕಂಚಿನ ಪದಕ ಸಿಗಲಿದೆ. ಈ ಮೂಲಕ ಭಾರತ ಪದಕದ ಖಾತೆ ತೆರೆಯಲಿದೆ.

ಇದಕ್ಕೆ ಮೊದಲು ನಡೆದ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಡೊವಾದ ಮರಿಯಾನಾ ಚೆರ್ಡಿವರಾರನ್ನು ಮಣಿಸಿದ ಸಾಕ್ಷಿ ಅಂತಿಮ-8ರ ಹಂತ ತಲುಪಿದರು. ಅಂತಿಮ-32ರ ಪಂದ್ಯದಲ್ಲಿ ಮಲಿನ್ ಜೊಹಾನ್ನಾ ಮಾಟ್‌ಸನ್ ವಿರುದ್ಧ ಒಂದು ಹಂತದಲ್ಲಿ 0-4 ರಿಂದ ಹಿನ್ನಡೆಯಲ್ಲಿದ್ದ ಸಾಕ್ಷಿ ಮರು ಹೋರಾಟವನ್ನು ನೀಡಲು ಯಶಸ್ವಿಯಾಗಿದ್ದು, ಅಂತಿಮವಾಗಿ 5-4 ಅಂಕಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಕ್ವಾರ್ಟರ್‌ಫೈನಲ್‌ನಲ್ಲಿ ವಿನೇಶ್‌ಗೆ ‘ಆಘಾತಕಾರಿ’ ಸೋಲು: ಭಾರತದ ಕುಸ್ತಿ ತಾರೆ ವಿನೇಶ್ ಫೋಗತ್ ಮಹಿಳೆಯರ 48 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ಚೀನಾದ ಸನ್ ಯನನ್ ವಿರುದ್ಧ ಪಂದ್ಯದ ವೇಳೆ ಗಾಯಗೊಂಡ ಕಾರಣ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಬುಧವಾರ ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಆತ್ಮವಿಶ್ವಾಸದಿಂದ ಕಣಕ್ಕಿಳಿದಿದ್ದ ವಿನೇಶ್ ಒಂದು ಅಂಕ ಮುನ್ನಡೆಯಲ್ಲಿದ್ದಾಗ ಮಂಡಿನೋವು ಕಾಣಿಸಿಕೊಂಡ ಕಾರಣ ಭಾರೀ ಹಿನ್ನಡೆ ಅನುಭವಿಸಿದರು. ಅಂತಿಮವಾಗಿ 2-1 ಅಂತರದಿಂದ ಜಯ ಸಾಧಿಸಿದ ಚೀನಾದ ಆಟಗಾರ್ತಿ ಸೆಮಿಫೈನಲ್‌ಗೆ ತಲುಪಿದ್ದಾರೆ. ವಿನೇಶ್‌ಗೆ ಕಾಣಿಸಿಕೊಂಡ ಗಾಯ ಗಂಭೀರವಾಗಿದ್ದು, ಒಂದು ವೇಳೆ ರಿಪಿಚೇಜ್ ಸುತ್ತಿನಲ್ಲಿ ಆಡುವ ಅವಕಾಶ ಲಭಿಸಿದರೆ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದಕ್ಕೆ ಮೊದಲು ನಡೆದ ಪ್ರಿ-ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ವಿನೇಶ್ ರೊಮಾನಿಯದ ಎದುರಾಳಿ ಎಮಿಲಿಯಾ ಅಲಿನಾ ವಿರುದ್ಧ 11-0 ಅಂಕಗಳ ಅಂತರದಿಂದ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ತಲುಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X