Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಫೀಝ್ ಸಯೀದ್ ವಿರುದ್ಧ ಫತ್ವಾ

ಹಫೀಝ್ ಸಯೀದ್ ವಿರುದ್ಧ ಫತ್ವಾ

ಇಸ್ಲಾಮ್ ವಿರೋಧಿಯೆಂದು ಘೋಷಣೆ

ವಾರ್ತಾಭಾರತಿವಾರ್ತಾಭಾರತಿ18 Aug 2016 11:49 PM IST
share

ಬರೇಲಿ(ಉ.ಪ್ರ), ಆ.18: ಇಲ್ಲಿಯ ಬರೇಲ್ವಿ ಪಂಥದ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಸಂಸ್ಥೆಯು ಮುಂಬೈ ಭಯೋತ್ಪಾದಕ ದಾಳಿಗಳ ರೂವಾರಿ ಹಾಗೂ ಪಾಕಿಸ್ತಾನದ ಜಮಾಅತುದಅವಾದ ಮುಖ್ಯಸ್ಥ ಹಫೀಝ್ ಸಯೀದ್‌ನನ್ನು ಇಸ್ಲಾಮ್ ವಿರೋಧಿಯೆಂದು ಘೋಷಿಸಿ ಗುರುವಾರ ಆತನ ವಿರುದ್ಧ ಫತ್ವಾ ಹೊರಡಿಸಿದೆ.

ಸಂಸ್ಥೆಯ ಮುಖ್ಯಸ್ಥ ಮುಫ್ತಿ ಮುಹಮ್ಮದ್ ಸಲೀಂ ಬರೇಲ್ವಿ ಅವರು ಹೊರಡಿಸಿರುವ ಈ ಫತ್ವಾ ಹಫೀಝ್‌ನನ್ನು ಇಸ್ಲಾಮ್‌ನಿಂದ ಬಹಿಷ್ಕರಿಸಿದ್ದು, ಆತನನ್ನು ಅನುಸರಿಸುವುದು ಅಥವಾ ಆತನನ್ನು ಮುಸ್ಲಿಮ್ ಎಂದು ಪರಿಗಣಿಸುವುದು ‘ಕಾನೂನು ವಿರುದ್ಧ’ವಾಗುತ್ತದೆ ಎಂದು ಘೋಷಿಸಿದೆ. ಲಷ್ಕರೆ ತಯ್ಯಿಬಾದ ಸ್ಥಾಪಕನಾಗಿರುವ ಹಫೀಝ್ ತನ್ನ ತಲೆಯ ಮೇಲೆ 10 ಮಿ.ಅಮೆರಿಕನ್ ಡಾ.ಬಹುಮಾನ ಹೊತ್ತಿದ್ದಾನೆ.
ಪಾಕಿಸ್ತಾನದ ಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಅವರ, ಬಾಕಿ ಯುಳಿದಿರುವ ಆದೇಶವನ್ನು ಪಾಲಿಸಲು ಸೇನೆಯನ್ನು ಕಾಶ್ಮೀರಕ್ಕೆ ಕಳುಹಿಸುವಂತೆ ಪಾಕ್ ಸೇನೆಯ ಮುಖ್ಯಸ್ಥ ಜರಾಹಿಲ್ ಶರೀಫ್ ಅವರಿಗೆ ಸಯೀದ್ ಸೂಚಿಸಿರುವ ಬೆನ್ನಿಗೇ ಸೆಮಿನರಿಯ ಈ ತೀರ್ಪು ಹೊರಬಿದ್ದಿದೆ.
ದರ್ಗಾ ಅಲಾ ಹಝರತ್‌ನೊಂದಿಗೆ ಗುರುತಿಸಿಕೊಂಡಿರುವ ಮಂಝರ್-ಎ-ಇಸ್ಲಾಮ್ ಸೌದಾಗರನ್ ಜೈಪುರದ ನಿವಾಸಿ ಮುಹಮ್ಮದ್ ಮೊಯ್ನುದ್ದೀನ್ ಅವರ ಪ್ರಶ್ನೆಗೆ ಉತ್ತರವಾಗಿ ಈ ಫತ್ವಾ ಹೊರಡಿಸಿದೆ. ಇಸ್ಲಾಮಿಗೂ ಸಯೀದ್‌ಗೂ ಯಾವುದೇ ಸಂಬಂಧವಿಲ್ಲವೆಂದು ಅದು ಸ್ಪಷ್ಟಪಡಿಸಿದೆ.
 
ಅಲ್ಲಾಹ್ ಮತ್ತು ಪ್ರವಾದಿ ಮುಹಮ್ಮದರ ವಿರುದ್ಧ ಬರೆಯು ವವರನ್ನು ಮುಸ್ಲಿಮರೆಂದು ಸಯೀದ್ ಪರಿಗಣಿಸುತ್ತಿರುವುದಾಗಿ ಮೊಯ್ನುದ್ದೀನ್ ತನ್ನ ಪ್ರಶ್ನೆಯಲ್ಲಿ ಉಲ್ಲೇಖಿಸಿದ್ದರು. ಆತ ಧರ್ಮ ವಿರೋಧಿ ಸಿದ್ಧಾಂತ ಮತ್ತು ಅಭಿಪ್ರಾಯಗಳನ್ನ್ನು ಪ್ರಚುರ ಪಡಿಸುತ್ತಿದ್ದಾನೆ ಮತ್ತು ತನ್ಮೂಲಕ ಭೀತಿವಾದದಲ್ಲಿ ತೊಡಗುವಂತೆ ಜನರನ್ನು ಪ್ರಚೋದಿಸುತ್ತಿದ್ದಾನೆ ಎಂದೂ ಅವರು ಬೆಟ್ಟು ಮಾಡಿದ್ದರು. ಇಂತಹ ವ್ಯಕ್ತಿಯನ್ನು ಮುಸ್ಲಿಮನೆಂದು ಪರಿಗಣಿಸಬೇಕೇ ಎಂದವರು ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X