Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದಲಾವಣೆಗೆ ತೆರೆದುಕೊಳ್ಳಿ: ಸಚಿವ ಸುರೇಶ್...

ಬದಲಾವಣೆಗೆ ತೆರೆದುಕೊಳ್ಳಿ: ಸಚಿವ ಸುರೇಶ್ ಪ್ರಭು

ವಿಶ್ವ ಕೊಂಕಣಿ ಕೇಂದ್ರದಿಂದ 3.5 ಕೋಟಿ ರೂ. ವಿದ್ಯಾರ್ಥಿ ವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 Aug 2016 4:25 PM IST
share
ಬದಲಾವಣೆಗೆ ತೆರೆದುಕೊಳ್ಳಿ: ಸಚಿವ ಸುರೇಶ್ ಪ್ರಭು

ಮಂಗಳೂರು, ಆ.19: ವಿದ್ಯಾರ್ಥಿಗಳು ಕೇವಲ ಉನ್ನತ ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲ, ಜಗತ್ತಿನಲ್ಲಿ ಆಗುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ತಮ್ಮನ್ನು ತೆರೆದುಕೊಳ್ಳಬೇಕು. ಬದಲಾವಣೆಯೊಂದಿಗೆ ನಾವು ಬದಲಾದಾಗ ಯಶಸ್ಸು ಕಾಣಲು ಸಾಧ್ಯ ಎಂದು ಕೇಂದ್ರದ ರೈಲ್ವೆ ಸಚಿವ ಸುರೇಶ್ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕೊಂಕಣಿ ಮಾನ್ಯತಾ ದಿನವಾದ ಇಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ವಿಶ್ವ ಕೊಂಕಣಿ ಕೇಂದ್ರದ ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ನಿಧಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.

ವಿದ್ಯಾರ್ಹತೆಯ ಜತೆಗೆ ಕೌಶಲ್ಯವೂ ಇದ್ದಲ್ಲಿ ಅವಕಾಶಗಳು ಲಭ್ಯವಾಗುತ್ತವೆ ಎಂದು ಹೇಳಿದ ಅವರು, ನಾವು ನಮ್ಮ ಮಾತೃಭಾಷೆಗೆ ಆದ್ಯತೆ ನೀಡಿದಾಗ ಸರ್ವತೋಮುಖ ಅಭಿವೃದ್ದಿಗೆ ಸಾಧ್ಯವಾಗುತ್ತದೆ ಎಂದರು. ಇತರ ಭಾಷೆಗಳನ್ನು ಕಲಿಯಬೇಕು. ಆದರೆ ಮಾತೃ ಭಾಷೆ ಬಹು ಮುಖ್ಯ. ಅದಿಲ್ಲದೆ ಯಾವುದೇ ರೀತಿಯ ಯಶಸ್ಸು ಕೂಡಾ ಅಪೂರ್ಣ. ಕೊಂಕಣಿ ಭಾಷೆಯು ವಿಶ್ವ ಮಾನ್ಯತೆಯನ್ನು ಪಡೆದಿದ್ದು, ಇದು ಯಾವುದೇ ಧರ್ಮ, ಜಾತಿಗೆ ಸೀಮಿತವಾಗಿರದೆ, ಜಾತ್ಯತೀತ ಭಾಷೆಯಾಗಿದೆ ಎಂದು ಸಚಿವ ಸುರೇಶ್ ಪ್ರಭು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲೇ ಸಾಮಾನ್ಯ ಜ್ಞಾನಕ್ಕೂ ಹೆಚ್ಚಿನ ಒತ್ತು ನೀಡಿದಾಗ ಮಾತ್ರವೇ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು. 21ನೆ ಶತಮಾನ ಸ್ಪರ್ಧೆಯ ಶತಮಾನವಾಗಿದ್ದು, ಇಲ್ಲಿ ಗುಣಮಟ್ಟದ ಕೌಶಲ್ಯಯುಕ್ತ ಶಿಕ್ಷಣವೇ ಮಹತ್ವಪೂರ್ಣದ್ದು. ಸಮುದಾಯವು ತಮಗೆ ನೀಡಿದ ವಿದ್ಯಾರ್ಥಿ ವೇತನದ ನೆರವು ಪಡೆದು ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವ ಜತೆಗೆ ಭವಿಷ್ಯದಲ್ಲಿ ತಾವು ಇನ್ನಷ್ಟು ವಿದ್ಯಾರ್ಥಿಗಳಿಗೆ ನೆರವಾಗಲು ಸಹಕರಿಸಬೇಕು ಎಂದು ಅವರು ಹೇಳಿದರು.

ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ಯೋಜನೆಯ ಮೂಲ ಪ್ರೇರಕ ಟಿ.ವಿ. ಮೋಹನದಾಸ ಪೈ ದಿಕ್ಸೂಚಿ ಭಾಷಣ ಮಾಡಿ, ಸಮಸ್ಯೆಗಳನ್ನು ಬಗೆಹರಿಸುವ ಕೌಶಲ್ಯವಿರುವ ವಿದ್ಯಾವಂತ ಯುವ ಸಮುದಾಯದ ಭವಿಷ್ಯ ಉಜ್ವಲವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲೊಂದು ಕನಸಿನೊಂದಿಗೆ ತಮ್ಮ ಜೀವನದ ಗುರಿ ತಲುಪುವ ಜತೆಗೆ ಕೊಂಕಣಿ ಭಾಷೆಯನ್ನೂ ಬೆಳೆಸಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ರ್ಯಾನ್ ಇಂಟರ್‌ನ್ಯಾಷನಲ್ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಮೇಡಮ್ ಗ್ರೇಸ್ ಪಿಂಟೋ, ಉಮಾ ಸುರೇಶ್ ಪ್ರಭು, ಎಂ. ಜಗನ್ನಾಥ ಶೆಣೈ, ಬಸ್ತಿ ವಾಮನ ಶೈಣೈ ಮೊದಲಾದವರು ಉಪಸ್ಥಿತರಿದ್ದರು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಡಾ. ಪಿ. ದಯಾನಂದ ಪೈ ಅಧ್ಯಕ್ಷತೆ ವಹಿಸಿದ್ದರು. ವೆಂಕಟೇಶ ಬಾಳಿಗ ಕಾರ್ಯಕ್ರಮ ನಿರೂಪಿಸಿದರು.

24 ಮಂದಿಗೆ ವಿದೇಶ ವ್ಯಾಸಂಗಕ್ಕೆ ತಲಾ 1 ಲಕ್ಷ ರೂ. ವಿದ್ಯಾರ್ಥಿ ವೇತನ

ಇಂದು ನಡೆದ ಕಾರ್ಯಕ್ರಮದಲ್ಲಿ 3.5 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನವನ್ನು ಇಂದು ವಿತರಿಸಲಾಯಿತು. ಇದರಲ್ಲಿ 24 ಮಂದಿಗೆ ವಿದೇಶ ವ್ಯಾಸಂಗಕ್ಕಾಗಿ ತಲಾ 1 ಲಕ್ಷ ರೂ.ಗಳ ವಿದ್ಯಾರ್ಥಿ ವೇತನವೂ ಸೇರಿದೆ. ಪ್ರಸಕ್ತ ವರ್ಷ 635 ಇಂಜಿನಿಯರಿಂಗ್ ಹಾಗೂ 50 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಟ್ರಸ್ಟಿ ರಾಮದಾಸ ಕಾಮತ್ ಯು. ಮಾಹಿತಿ ನೀಡಿದರು.

2010ರಲ್ಲಿ ಆರಂಭಗೊಂಡ ಈ ನಿಧಿಯಡಿ ಕಳೆದ ಆರು ವರ್ಷಗಳಲ್ಲಿ 11.64 ಕೋಟಿ ರೂ. ವೌಲ್ಯದ ವಿದ್ಯಾರ್ಥಿವೇತನವನ್ನು 11585 ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಸೇರಿ, 12,000 ಫಲಾನುಭವಿಗಳಿಗೆ ಒಟ್ಟು 15 ಕೋಟಿ ರೂ.ಗಳನ್ನು ವಿಶ್ವ ಕೊಂಕಣಿ ಕೇಂದ್ರದಿಂದ ವಿತರಿಸಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X