Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮುವಾದಿಗಳನ್ನು ಹತ್ತಿಕ್ಕಲು ಶಾಂತಿಯ...

ಕೋಮುವಾದಿಗಳನ್ನು ಹತ್ತಿಕ್ಕಲು ಶಾಂತಿಯ ಅಭಿಯಾನ ಅವಶ್ಯ : ಭಾಸ್ಕರ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ22 Aug 2016 7:32 PM IST
share
ಕೋಮುವಾದಿಗಳನ್ನು ಹತ್ತಿಕ್ಕಲು ಶಾಂತಿಯ ಅಭಿಯಾನ ಅವಶ್ಯ : ಭಾಸ್ಕರ್ ನಾಯ್ಕ

ಭಟ್ಕಳ,ಆ.22: ದೇಶದಲ್ಲಿ ಕೋಮುವಾದಿಗಳು ತಮ್ಮಅಟ್ಟಹಾಸವನ್ನು ಮೆರೆಯುತ್ತಿದ್ದುಅಶಾಂತಿಯ ವಾತವರಣ ಸೃಷ್ಟಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಶಾಂತಿ ಮತ್ತು ಮಾನವೀಯತೆ ಅಭಿಯಾನ ಅತ್ಯಂತ ಮಹತ್ವ ಪಡೆದುಕೊಳ್ಳುತ್ತದೆ ಶಾಂತಿ ಮತ್ತು ಮಾನವೀಯತೆ ಅಭಿಯಾನ ತಾಲೂಕು ಸಮಿತಿಯ ಭಾಸ್ಕರ್ ನಾಯ್ಕ ಹೇಳಿದರು.

ಅವರು ಇಲ್ಲಿನ ಶ್ರೀನಿವಾಸ್ ಹೋಟೆಲ್ ನಲ್ಲಿ ಶಾಂತಿ ಮತ್ತು ಮಾನವೀಯತೆ ಅಭಿಯಾನ ತಾಲೂಕು ಸ್ವಾಗತ ಸಮಿತಿ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಭಾರತ ಶಾಂತಿ ಸೌಹಾರ್ಧತೆಯ ದೇಶವಾಗಿದ್ದು ಇದನ್ನುಕೆಡಿಸುವ ಪ್ರಯತ್ನಗಳು ದೇಶಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವುದು ದುರಾಷ್ಟಕರ ಎಂದ ಅವರು ಈ ದೇಶದಲ್ಲಿ ಶಾಂತಿ ಮತ್ತು ಮಾನವೀಯತೆ ನೆಲೆಸಿದರೆ ಮಾತ್ರ ಅಭಿವೃದ್ದಿ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಆಭಿಯಾನದ ಜಿಲ್ಲಾ ಸಮಿತಿಯ ಸಂಚಾಲಕ ಎಂ.ಆರ್. ಮಾನ್ವಿ ಮಾತನಾಡಿ ಶಾಂತಿ ಭಂಜಕರೇ ಈ ದೇಶದ ವೈರಿಗಳಾಗಿದ್ದು ನಾವು ಈ ದೇಶವನ್ನು ಶಾಂತಿ ಭಂಜಕರಿಂದ ಬಹುದೂರ ಕೊಂಡೊಯ್ಯಲು ಬಯಸುತ್ತೇವೆ. ಸ್ವಾತಂತ್ರ್ಯಪೂರ್ವದಲ್ಲಿದ್ದ ಭಾರತದ ಸೌಹಾರ್ಧ ವಾತವರಣವನ್ನು ಮರು ಸೃಷ್ಟಿಸಲು ಈ ದೇಶದ ಶೇ.99 ಮಂದಿಯ ಪ್ರಯತ್ನವಾಗಿದ್ದು ದೇಶದ ಶೇ.1% ಜನರು ವಿಷಜಂತುಗಳಾಗಿ ದೇಶವನ್ನುಕಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳಲ್ಲಿ ಈ ದೇಶವನ್ನು ಶಾಂತಿ, ಸೌಹಾರ್ಧತೆಯತಾಣವನ್ನಾಗಿ ಮಾಡುವಂತೆ ಅಭಿಯಾನದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.

ಶಾಂತಿ, ನೆಮ್ಮದಿ ಇಲ್ಲದ ಮತ್ತು ಛಿದ್ರ ಸಮಾಜವು ಎಂದಿಗೂ ಆರ್ಥಿಕ ಪ್ರಗತಿ ಸಾಧಿಸಲಾರದು.ಈ ರೋಗವು ವ್ಯಾಪಕವಾದರೆ ದೇಶದೊಳಗೆ ಹರಿದು ಬರುವ ವಿದೇಶಿ ಬಂಡವಾಳವು ನಿಂತು ಬಿಡಬಹುದು ಮಾತ್ರವಲ್ಲ ದೇಶದ ಹೂಡಿಕೆದಾರರೇ ಬಂಡವಾಳ ಹೂಡಲು ವಿದೇಶದಲ್ಲಿ ಅವಕಾಶವನ್ನು ಹುಡುಕಬಹುದು.ಪ್ರಸಕ್ತಆರ್ಥಿಕ ಚಟುವಟಿಕೆಗಳು, ವ್ಯಾಪಾರ, ಉದ್ದಿಮೆಗಳು ನಷ್ಟ ಹೊಂದಿ ಆರ್ಥಿಕ ಕುಸಿತ, ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳು ಸೃಷ್ಟಿಯಾಗಬಹುದು.ಈ ಪರಿಸ್ಥಿತಿಯನ್ನು ಉತ್ತಮ ಪಡಿಸಲು ಪ್ರಥಮತಃ ದೇಶವಾಸಿಗಳಾದ ನಾವೆಲ್ಲರೂ ಪರಿಸ್ಥಿತಿಯ ಗಂಭೀರತೆಯನ್ನುಅರಿಯಬೇಕು.ಖಂಡಿತವಾಗಿಯೂ ಇಡೀ ದೇಶದ ವಾತಾವರಣವು ಅಸಹನೀಯವಾಗಿಲ್ಲ. ಸಹಿಷ್ಣುತೆ ಇಂದೂ ನಮ್ಮ ಸಮಾಜದ ವಿಶೇಷತೆಯಾಗಿದೆ.ಆದರೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಹಿಷ್ಣುತೆ ಬಗ್ಗೆ ನಾವು ಹೆಮ್ಮೆ ಪಡುವ ಕಾಲ ಹೆಚ್ಚು ಸಮಯ ಉಳಿಯಲಾರದು.ನಮ್ಮರಾಜಕೀಯ, ಧಾರ್ಮಿಕ ನಿಷ್ಠೆಗಳನ್ನು ಮೀರಿ ವಿಶಾಲವಾದ ಸಾಮಾಜಿಕ ನೆಲೆಯಲ್ಲಿ ಕೋಮುವಾದದ ವಿರುದ್ಧ ಒಗ್ಗಟ್ಟಾಗಿ ಕಾರ್ಯಾಚರಿಸಬೇಕಾಗಿದೆ.ಕೋಮು ಸೌಹಾರ್ದತೆಯನ್ನು ಸ್ಥಾಪಿಸಲು ಎಲ್ಲಾ ಕೋಮಿನ ಪ್ರಭಾವಿ ನಾಯಕರು ಮುಂದೆ ಬರಬೇಕಾಗಿದೆ.ಊರ ಪ್ರಮುಖರು, ಬುದ್ಧಿಜೀವಿಗಳು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರೆಲ್ಲರೂ ಇದರ ಪ್ರಾಮುಖ್ಯತೆಯನ್ನುಅರಿತು ಇದಕ್ಕೆ ಸೂಕ್ತ ಸ್ಥಾನವನ್ನು ನೀಡಬೇಕಾಗಿದೆ.ಇವೆಲ್ಲವುಗಳು ಧರ್ಮದ ಹೆಸರಿನಲ್ಲಿ ಅಥವಾ ಅದರ ದುರ್ಬಳಕೆಯಿಂದ ಆಗುತ್ತಿರುವುದರಿಂದ ಧಾರ್ಮಿಕ ನೇತಾರರು, ವಿದ್ವಾಂಸರು ಮತ್ತು ಆಧ್ಯಾತ್ಮಿಕ ಗುರುಗಳು ಇದರ ಹೊಣೆಗಾರಿಕೆಗಳನ್ನು ವಹಿಸಿಕೊಳ್ಳಬೇಕು ಎಂದರು.

ಭಟ್ಕಳದಲ್ಲಿ ವಿದ್ಯಾರ್ಥಿಗಳೀಂದ ಶಾಂತಿಯರ್ಯಾಲಿ, ಮನೆ ಮನೆಗೆ ಭೀಟಿ ನೀಡುವುದು, ಬೀದಿ ನಾಟಕ, ವಿಚಾರಗೋಷ್ಟಿ, ಗಣ್ಯ ಸಭೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸುವುದುರ ಮೂಲಕ ಶಾಂತಿ ಮಾನವೀಯತೆ ಸಂದೇಶ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿಯ ಸಂಚಾಲಕ ಮುಜಾಹಿದ್ ಮುಸ್ತಫಾ, ಅಭಿಯಾನ ಸಂಚಾಲಕ ಮುಹಮ್ಮದ್‌ ಯುನೂಸ್‌ರುಕ್ನುದ್ದೀನ್, ಸದಸ್ಯರಾದ ಡಾ.ಆರ್.ವಿ.ಸರಾಫ್, ರಾಧಕೃಷ್ಣಭಟ್, ಜಿಲ್ಲಾ ಸಮಿತಿ ಸದಸ್ಯ ಕೆ.ಎಂ.ಷರೀಫ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X