Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೋದಿ ಹೇಳಿಕೆಗೆ ಬೆಂಬಲ ಸೂಚಿಸಿದ್ದ ಬಲೂಚ್...

ಮೋದಿ ಹೇಳಿಕೆಗೆ ಬೆಂಬಲ ಸೂಚಿಸಿದ್ದ ಬಲೂಚ್ ನಾಯಕರ ವಿರುದ್ಧ ಮೊಕದ್ದಮೆ

ವಾರ್ತಾಭಾರತಿವಾರ್ತಾಭಾರತಿ22 Aug 2016 8:38 PM IST
share
ಮೋದಿ ಹೇಳಿಕೆಗೆ ಬೆಂಬಲ ಸೂಚಿಸಿದ್ದ ಬಲೂಚ್ ನಾಯಕರ ವಿರುದ್ಧ ಮೊಕದ್ದಮೆ

ಇಸ್ಲಾಮಾಬಾದ್, ಆ. 22: ಬಲೂಚಿಸ್ತಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಗಳಿಗೆ ಬೆಂಬಲ ಸೂಚಿಸಿರುವುದಕ್ಕಾಗಿ ಪ್ರತ್ಯೇಕತಾವಾದಿ ಬಲೂಚಿ ನಾಯಕರಾದ ಬ್ರಹಾಂಡಾಗ್ ಬುಗ್ಟಿ, ಹರ್ಬಿಯಾರ್ ಮರ್ರಿ ಮತ್ತು ಬಾನುಕ್ ಕರಿಮ ಬಲೂಚ್ ಅವರ ವಿರುದ್ಧ ಮೊಕದ್ದಮೆ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದರು.
ಬಲೂಚಿಸ್ತಾನದ ಖುಝ್ದಾರ್ ಪ್ರದೇಶದಲ್ಲಿನ ಕೆಲವು ನಿವಾಸಿಗಳು ನೀಡಿದ ದೂರಿನ ಆಧಾರದಲ್ಲಿ ಅವರ ವಿರುದ್ಧ ಐದು ಪತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ‘ಡಾನ್’ ಆನ್‌ಲೈನ್ ವರದಿ ಮಾಡಿದೆ.
ಮೋದಿ ಆಗಸ್ಟ್ 15ರಂದು ನೀಡಿರುವ ಹೇಳಿಕೆಯನ್ನು ಬುಗ್ಟಿ, ಮರ್ರಿ ಮತ್ತು ಬಲೂಚ್ ‘‘ಬೆಂಬಲಿಸಿದ್ದಾರೆ’’ ಎಂದು ದೂರುದಾರರು ಆರೋಪಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಖುಝ್ದಾರ್ ಮುಹಮ್ಮದ್ ಅಶ್ರಫ್ ಜಟಕ್ ತಿಳಿಸಿದರು.
ಬಲೂಚಿಸ್ತಾನ, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ‘ಆಝಾದ್ ಜಮ್ಮು ಮತ್ತು ಕಾಶ್ಮೀರ’ದ ಜನರು ಕಳೆದ ಕೆಲವು ದಿನಗಳಲ್ಲಿ ತನಗೆ ಧನ್ಯವಾದಗಳನ್ನು ಹೇಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತನ್ನ ಸ್ವಾತಂತ್ರ ದಿನದ ಭಾಷಣದಲ್ಲಿ ಹೇಳಿದ್ದರು.
ಪಾಕಿಸ್ತಾನದ ವಿರುದ್ಧ ಆಕ್ರಮಣ ನಡೆಸುವಂತೆ ಬಲೂಚ್ ನಾಯಕರು ಮೋದಿಯನ್ನು ಬೆಂಬಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಆರೋಪಿಸಿದರು.
ಬಲೂಚಿಸ್ತಾನದ ಮುಖ್ಯಮಂತ್ರಿ ಸನಾವುಲ್ಲಾ ಝೆಹ್ರಿ, ಕಳೆದ ವಾರದ ಭಾಷಣದಲ್ಲಿ ಮೋದಿಯ ಹೇಳಿಕೆಗಳನ್ನು ಖಂಡಿಸಿದ್ದರು. ಬಲೂಚಿಸ್ತಾನದಲ್ಲಿ ಈಗ ನಡೆಯುತ್ತಿರುವ ಬಂಡಾಯಕ್ಕೆ ಭಾರತ ಸರಕಾರ ಸಂಪೂರ್ಣ ನೆರವು ನೀಡುತ್ತಿದೆ ಎಂದು ಅವರು ಆರೋಪಿಸಿದ್ದರು.
ಬುಗ್ಟಿಗೆ ಭಾರತದಿಂದ ಹಣ ಬರುತ್ತಿದೆ ಎಂಬುದಾಗಿಯೂ ಅವರು ಆರೋಪಿಸಿದರು. ಅದಕ್ಕಾಗಿಯೇ ಅವರು ಮೋದಿಯ ಹೇಳಿಕೆಗಳಿಗೆ ಬೆಂಬಲ ನೀಡಿದ್ದಾರೆ ಎಂದರು.


ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ
ಮೋದಿಯ ಭಾಷಣದಿಂದ ಪ್ರೇರಿತರಾದ ಜನರು ಬಲೂಚಿಸ್ತಾನದಾದ್ಯಂತ ಭಾರೀ ಸಂಖ್ಯೆಯಲ್ಲಿ ಪಾಕಿಸ್ತಾನ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಭಾರೀ ಸಂಖ್ಯೆಯಲ್ಲಿ ಬುಡಕಟ್ಟು ಜನರು ದೇರಾ ಬುಗ್ಟಿ, ಖುಝ್ದಿರ್, ಕ್ವೆಟ್ಟಾ, ಚಮನ್ ಮತ್ತು ಪ್ರಾಂತದ ಇತರ ಭಾಗಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X