Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಸಿ ಮೀನುಗಾರರಿಗೆ ಬಹುಮಾನ ವಿತರಣೆ

ಸಾಹಸಿ ಮೀನುಗಾರರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ22 Aug 2016 10:34 PM IST
share
ಸಾಹಸಿ ಮೀನುಗಾರರಿಗೆ ಬಹುಮಾನ ವಿತರಣೆ

  ಭಟ್ಕಳ, ಆ.22: ಆಗಸ್ಟ್.3ರಂದು ನಡೆದ ದೋಣಿ ದುರಂತದಲ್ಲಿ 9 ತಾಸುಗಳ ಕಾಲ ಸಮುದ್ರದಲ್ಲಿ ಈಜಾಡುತ್ತಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ ಬೋಟ್ ಚಾಲಕ ಗೋಪಾಲ ಮೊಗೇರ, ಸುರೇಶ್ ಬಸವ ಖಾರ್ವಿ, ನವೀನ್ ಮಾಸ್ತಿ ಖಾರ್ವಿ, ಶ್ರೀನಿವಾಸ ನಾರಾಯಣ ಖಾರ್ವಿ ಇವರಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ವತಿಯಿಂದ 10 ಸಾವಿರ ರೂ. ಬಹುಮಾನ, ಪದಕ ಹಾಗೂ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೋಸ್ಟ್ ಗಾರ್ಡ್ ಸ್ಟೇಷನ್ ಕಾರವಾರದ ಕಮಾಂಡೆಂಟ್ ಎಂ. ಕೆ. ಶರ್ಮಾ ಮಾತನಾಡಿ, ಮೀನುಗಾರರ ಜೀವ ರಕ್ಷಣೆ ಮಾಡಿರುವ ಮಹತ್ಕಾರ್ಯವನ್ನು ಮಾಡಿರುವ ಇವರನ್ನು ಸನ್ಮಾನಿಸಿರುವುದು ಸಂತಸ ತಂದಿದೆ. ನಾವು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಇನ್ನಷ್ಟು ಜನರಿಗೆ ಸಂಕಷ್ಟದಲ್ಲಿರುವವರಿಗೆ ಸಹಕಾರ ಮಾಡಲು ಸಹಾಯವಾಗುತ್ತದೆ. ಮೀನುಗಾರರು ಸಮುದ್ರಕ್ಕೆ ತೆರಳುವಾಗ ಕಡ್ಡಾಯವಾಗಿ ಜೀವ ರಕ್ಷಕ ಸಾಧನಗಳನ್ನು ತೆಗೆದುಕೊಂಡು ಹೋಗಬೇಕು. ನಮಗೆ ಮೀನುಗಾರಿಕೆಗಿಂತ ಜೀವ ಮುಖ್ಯವಾಗಿರುತ್ತದೆ ಎಂದರು.

ಮುಖ್ಯವಾಗಿ ಜೂನ್‌ನಿಂದ ಆಗಸ್ಟ್‌ವರೆಗೆ ಸಮುದ್ರ ತೀರ ಅಪಾಯಕಾರಿಯಾಗಿರುವುದರಿಂದ ಪ್ರತಿಯೋರ್ವರೂ ಕೂಡಾ ಕನಿಷ್ಠ ಜೀವ ರಕ್ಷಕಗಳನ್ನು ಇಟ್ಟುಕೊಂಡೇ ಸಮುದ್ರಕ್ಕೆ ತೆರಳಬೇಕು. ನಿಮ್ಮಲ್ಲಿ ಜೀವ ರಕ್ಷಕವಿದ್ದರೆ 10 ದಿನವಾದರೂ ನೀರಿನಲ್ಲಿ ಬದುಕುವ ಸಾಧ್ಯತೆ ಇದೆ ಎಂದರು. ಶಾಸಕ ಮಾಂಕಾಳ ಎಸ್. ವೈದ್ಯ ಮಾತನಾಡಿ, ಮೀನುಗಾರರ ಜೊತೆ ನಾವಿದ್ದೇವೆ, ನಮ್ಮ ಸರಕಾರವಿದೆ ಎನ್ನುವುದನ್ನು ಈಗಾಗಲೇ ನಾವು ಸಾಬೀತು ಪಡಿಸಿದ್ದೇವೆ. ನಿಮಗೆ ಸಂಕಷ್ಟದ ಸಂದಭರ್ದಲ್ಲಿ ನಾವು ಎಂದೂ ಸಹ ಬಿಟ್ಟು ಕೊಡುವುದಿಲ್ಲ ಎಂದು ಭರವಸೆ ನೀಡಿದ ಅವರು ಸಮಯ ಪ್ರಜ್ಞೆಯಿಂದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿಯೂ ತಮ್ಮ ಬೋಟ್‌ನ್ನು ಕೊಂಡು ಹೋಗಿ 7 ಜನರ ಪ್ರಾಣ ಉಳಿಸಿದ ಗೋಪಾಲ ಮೊಗೇರ ಅವರ ಕಾರ್ಯ ಶ್ಲಾಘನೀಯವಾದದ್ದು. ಅವರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಹಾಗೂ ಸಾಹಸ ತೋರಿದ ಎಲ್ಲರಿಗೂ ನಗದು, ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿರುವುದು ಸಂತಸ ತಂದಿದೆ ಎಂದರು. ಕೋಸ್ಟ್ ಗಾರ್ಡ್‌ನವರನ್ನು ತಮ್ಮ ಬೋಟನ್ನು ಇಡಲು ಸ್ಥಳಾವಕಾಶ ಕೇಳಿದರೆ ಭಟ್ಕಳದಲ್ಲಿ ಕೊಡಲು ನಾವು ಸಿದ್ಧರಿದ್ದೇವೆ ಎಂದೂ ಘೋಷಿಸಿದರು. ಮೀನುಗಾರರ ಮುಖಂಡ ವಸಂತ ಖಾರ್ವಿ ಮಾತನಾಡಿ, ಕೋಸ್ಟ್ ಗಾರ್ಡ್ ಚಿಕ್ಕ ಬೋಟನ್ನು ಮಳೆಗಾಲದ ಸಮಯದಲ್ಲಿ ಬಂದರಿನಲ್ಲಿ ಇಡುವಂತಾಗಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಕೋಸ್ಟ್ ಗಾರ್ಡ್ ಸಹಾಯಕ ಕಮಾಂಡೆಂಟ್ ಅಭಿಷೇಕ್ ಗಡಿಯಾಲ್, ಪಿಆರ್‌ಒ ಎಂ.ಎಸ್.ರಾಜನ್, ಗ್ರಾಮೀಣ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಮಂಜಪ್ಪ, ಸಿ.ಎಸ್ಪಿ ಸಬ್‌ಇನ್‌ಸ್ಪೆಕ್ಟರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X