Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ ಸಮಸ್ಯೆಗೆ ರಾಜಕೀಯ ಪರಿಹಾರ...

ಕಾಶ್ಮೀರ ಸಮಸ್ಯೆಗೆ ರಾಜಕೀಯ ಪರಿಹಾರ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 Aug 2016 11:36 PM IST
share

ಹೊಸದಿಲ್ಲಿ, ಆ.22: ಕಾಶ್ಮೀರದಲ್ಲಿ ಮುಂದುವರಿದಿರುವ ಅಶಾಂತಿಯನ್ನು ರಾಜಕೀಯವಾಗಿ ನಿಭಾಯಿಸಬೇಕು. ಪ್ರತಿಯೊಂದನ್ನು ನ್ಯಾಯಾಂಗ ಮಾನದಂಡದೊಳಗೆ ನಿಭಾಯಿಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಈ ವಿಷಯದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಕಾರ್ಯಕರ್ತ ವಕೀಲ ಹಾಗೂ ಜಮ್ಮ-ಕಾಶ್ಮೀರ ನ್ಯಾಶನಲ್ ಪ್ಯಾಂಥರ್ಸ್ ಪಕ್ಷದ ನಾಯಕ ಭೀಮ ಸಿಂಗ್‌ರಿಗೆ ಸಹಾಯ ಮಾಡುವಂತೆ ಸಾಲಿಸಿಟರ್ ಜನರಲ್‌ಗೆ ಅದು ಸೂಚಿಸಿದೆ. ಈ ವಿವಾದಕ್ಕೆ ಹಲವು ಆಯಾಮಗಳಿವೆ. ಎಲ್ಲವನ್ನೂ ನ್ಯಾಯಾಂಗದಿಂದ ಪರಿಹರಿಸಲು ಸಾಧ್ಯವಿಲ್ಲವೆಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.

......................................................................
 ಗಣಪತಿ ದೇಣಿಗೆ ಹೆಸರಲ್ಲಿ ಶೋಷಣೆಯಿಂದ ಬೇಸತ್ತು ಊರು ಬಿಟ್ಟ ವಲಸಿಗ ಕಾರ್ಮಿಕರು


  ಪುಣೆ, ಆ.22: ಗಣೇಶ ಪೂಜೆ ಸಂಘಟಕರು ಬೇಡಿಕೆಯಿಟ್ಟಿದ್ದ ದೇಣಿಗೆಯನ್ನು ನೀಡಲು ಅಸಮರ್ಥರಾದ ಹನ್ನೊಂದು ಮಂದಿ ವಲಸಿಗ ಕಾರ್ಮಿಕರನ್ನು ಅಪಮಾನಿಸಿದ್ದಕ್ಕೆ ನೊಂದು ಅವರೆಲ್ಲರೂ ತಮ್ಮ ಉದ್ಯೋಗ ಹಾಗೂ ನಗರವನ್ನು ತೊರೆದು ತಮ್ಮ ಊರಿಗೆ ಹಿಂದಿರುಗಿದ ಘಟನೆ ವರದಿಯಾಗಿದೆ.
 ನೊಂದ ಕಾರ್ಮಿಕರು ದೂರು ದಾಖಲಿಸಿದ ತರುವಾಯ ಪೊಲೀಸರು ಶ್ರೀರಾಮ್ ಗಣೇಶ್ ಮಂಡಲ್, ಬೊಸಾರಿ ಇದರ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತೊಂದರೆಗೊಳಗಾದ ಕಾರ್ಮಿಕರೆಲ್ಲರೂ ಮುಸ್ಲಿಮರಾಗಿದ್ದು 20ರಿಂದ 30 ವರ್ಷದವರಾಗಿದ್ದಾರೆ. ಅವರೆಲ್ಲರೂ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಆಗಸ್ಟ್ 15ರಂದು ಗಣೇಶ ಮಂಡಲದ ಸದಸ್ಯರು ಪಿಂಪ್ರಿ- ಚಿಂಚ್ ವಾರ್ಡ್‌ನಲ್ಲಿರುವ ಕ್ರೌನ್ ಬೇಕರಿಗೆ ಆಗಮಿಸಿ ಗಣಪತಿ ಹಬ್ಬಕ್ಕಾಗಿ ರೂ. 100 ದೇಣಿಗೆ ನೀಡುವಂತೆ ಬೇಡಿಕೆಯಿಟ್ಟಿದ್ದರು. ಆದರೆ ಬೇಕರಿ ಕಾರ್ಮಿಕರು ರೂ. 50 ಮಾತ್ರ ತಮಗೆ ನೀಡಲು ಸಾಧ್ಯವೆಂದಿದ್ದರು. ಇದರಿಂದ ಕೋಪಗೊಂಡ ಮಂಡಲ ಸದಸ್ಯರು ದೇಣಿಗೆ ನೀಡಲು ನಿರಾಕರಿಸಿದ ಬೇಕರಿ ಉದ್ಯೋಗಿಗಳನ್ನು ರಸ್ತೆ ಮಧ್ಯದಲ್ಲಿ ಕುಳಿತುಕೊಳ್ಳಲು ಬಲವಂತಪಡಿಸಿದ್ದರು. ಈ ಘಟನಾವಳಿಯನ್ನು ಮಂಡಲ ಸದಸ್ಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ತಮ್ಮ ಸ್ನೇಹಿತರಿಗೆ ಕಳುಹಿಸಿದ್ದು, ಕೆಲವೇ ಕ್ಷಣಗಳಲ್ಲಿ ಇದು ವೈರಲ್ ಆಗಿ ಬಿಟ್ಟಿತ್ತು.
 ಸಂತ್ರಸ್ತ ಕಾರ್ಮಿಕರು ಬೇಕರಿಗೆ ಹೊಸದಾಗಿ ಕೆಲಸಕ್ಕೆ ಸೇರ್ಪಡೆಗೊಂಡ ಬಳಿಕ ಅವರೆಲ್ಲರೂ ಉದ್ಯೋಗ ತೊರೆದಿದ್ದಾರೆಂದು ಅಲ್ಲಿನ ಇತರ ನೌಕರರು ತಿಳಿಸಿದ್ದಾರೆ. ಬೇಕರಿ ಮಾಲಕ ಈ ವಿಚಾರದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

 
ಮೂರರಿಂದ ನಾಲ್ಕು ಮಂದಿ ಉದ್ಯೋಗಿಗಳು ಉತ್ತರಪ್ರದೇಶದಲ್ಲಿರುವ ತಮ್ಮ ಹಳ್ಳಿಗಳಿಗೆ ಹಿಂದಿರುಗಿದ್ದರೆ, ಉಳಿದವರು ಭಯದಿಂದ ಕೆಲಸಕ್ಕೆ ಹಾಜರಾಗಿಲ್ಲವೆಂದು ಬೇಕರಿ ಮಾಲಕ ತನಿಖಾ ತಂಡಕ್ಕೆ ತಿಳಿಸಿದ್ದಾರೆಂದು ಸಹಾಯಕ ಪೊಲೀಸ್ ನಿರೀಕ್ಷಕ ಮಹೇಶ್ ಸ್ವಾಮಿ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X