Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಯಲ್ಲಿ 100 ಕೋ.ರೂ.ಗೆ ವಿಲಾಸಿ...

ಮುಂಬೈಯಲ್ಲಿ 100 ಕೋ.ರೂ.ಗೆ ವಿಲಾಸಿ ಫ್ಲ್ಯಾಟ್ ಖರೀದಿಸಿದ ಕಾಂಗ್ರೆಸ್ ಮುಖಂಡನ ಪುತ್ರ

ವಾರ್ತಾಭಾರತಿವಾರ್ತಾಭಾರತಿ23 Aug 2016 1:58 PM IST
share
ಮುಂಬೈಯಲ್ಲಿ 100 ಕೋ.ರೂ.ಗೆ ವಿಲಾಸಿ ಫ್ಲ್ಯಾಟ್ ಖರೀದಿಸಿದ ಕಾಂಗ್ರೆಸ್ ಮುಖಂಡನ ಪುತ್ರ

ಮುಂಬೈ, ಆ.23: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬಿಹಾರದ ಮಾಜಿ ರಾಜ್ಯಪಾಲ ಡಿ.ವೈ. ಪಾಟೀಲ್ ಅವರ ಪುತ್ರ ಅಜಿಂಕ್ಯ ಪಾಟೀಲ್ ವೊರ್ಲಿಯ ಸಿಲ್ವರೀನ್ ಟರೇಸ್‌ನಲ್ಲಿ 100 ಕೋ.ರೂ.ಗೆ ಟ್ರಿಪಲ್ ಡುಪ್ಲೆಕ್ಸ್ ವಿಲಾಸಿ ಫ್ಲ್ಯಾಟ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಸಮುದ್ರಾಭಿಮುಖವಾಗಿರುವ ಈ 23 ಮಹಡಿಗಳ ಕಟ್ಟಡದ ಫ್ಲ್ಯಾಟ್‌ಗಳಿಗೆ ಹಲವು ಪ್ರತಿಷ್ಠಿತ ವ್ಯಕ್ತಿಗಳಿಂದ ಬಹಳ ಬೇಡಿಕೆಯಿದ್ದು ಫ್ಲ್ಯಾಟ್‌ಗಳಿಗೆ ಬೇಡಿಕೆ ಕುಸಿಯುತ್ತಿರುವ ಇಂದಿನ ಸಂದರ್ಭದಲ್ಲಿ ರಾಜಕೀಯ ನಾಯಕರೊಬ್ಬರ ಪುತ್ರ ಇಷ್ಟೊಂದು ದೊಡೆ ಮೊತ್ತದ ಮನೆ ಖರೀದಿಸಿರುವುದು ಇತ್ತೀಚಿಗಿನ ವರ್ಷಗಳಲ್ಲಿಯೇ ಮೊದಲು ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರಈ ಫ್ಲ್ಯಾಟನ್ನು ಪಾಟೀಲ್ ಅವರ ಸಂಸ್ಥೆ ಎಐಪಿಎಸ್ ರಿಯಲ್ ಎಸ್ಟೇಟ್ ಖರೀದಿಸಿದ್ದು ದಾಖಲೆಗಳಿಗೆ ಅದರ ನಿರ್ದೇಶಕರಲ್ಲೊಬ್ಬರಾದ ರಾಜೇಶ್ ರಾವೊರಾನೆ ಸಹಿ ಹಾಕಿದ್ದಾರೆ. ಫ್ಲ್ಯಾಟ್‌ನ ಒಟ್ಟು ವೆಚ್ಚ 95.4 ಕೋಟಿ ರೂ. ಆಗಿದ್ದರೆ, ಸ್ಟ್ಯಾಂಪ್ ಡ್ಯೂಟಿ 4.7 ಕೋಟಿ ರೂ. ಅಷ್ಟಾಗಿದೆಯೆಂದು ತಿಳಿದುಬಂದಿದೆ.
ಪಾಟೀಲ್ 21ನೆ ಮಹಡಿಯಲ್ಲಿ ಒಂದು ಫ್ಲ್ಯಾಟ್ ಖರೀದಿಸಿದ್ದರೆ ಇನ್ನೆರಡು ಫ್ಲ್ಯಾಟ್‌ಗಳು 22ನೆ ಹಾಗೂ 23ನೆ ಮಹಡಿಗಳಲ್ಲಿವೆ. ಈ ಫ್ಲ್ಯಾಟ್‌ಗಳಿಗೆ ಟೆರೇಸ್ ಇದ್ದು, ಮೂರನೆ ಹಂತದಲ್ಲಿ ಪಾರ್ಕಿಂಗ್ ವ್ಯವಸ್ಥೆಯಿದೆ.
ಈ ಫ್ಲ್ಯಾಟ್ ಮೇಲಿನ ಹೂಡಿಕೆ ಉತ್ತಮವೆಂದು ಕಂಪೆನಿ ಅದನ್ನು ಖರೀದಿಸಿದೆ ಎಂದು ಕಂಪೆನಿಯ ವಕ್ತಾರ ದಿಲೀಪ್ ಕಾವಡ್ ಹೇಳಿದ್ದಾರೆ.

ಈ ಹಿಂದೆ ಸಿಲ್ವರೀನ್ ಬಂಗಲೆಯೆಂಬ ಕಟ್ಟಡ ಇದ್ದ ಜಾಗದಲ್ಲಿ ಈ ಅಪಾರ್ಟ್‌ಮೆಂಟ್ ಕಟ್ಟಡವಿದೆ. ಈ ಜಾಗದ ಪುನರ್ ಅಭಿವೃದ್ಧಿ ಹಕ್ಕುಗಳನ್ನು 2009ರಲ್ಲಿ ನೋಶಿರ್ ತಲಟಿ ಎಂಬವರು ಪಡೆದಿದ್ದರು. ಇದಾದ ನಾಲ್ಕು ವರ್ಷಗಳ ನಂತರ ಉದ್ಯಮಿ ಅವಿನಾಶ್ ಭೊಸಲೆಯವರ ಪುತ್ರಿ ಸ್ವಪ್ನಾಲಿ 75 ಕೋಟಿ ರೂ. ಪಾವತಿಸಿ ಡುಪ್ಲೆಕ್ಸ್ ಫ್ಲ್ಯಾಟನ್ನು 19ನೆ ಹಾಗೂ 20ನೆ ಮಹಡಿಗಳಲ್ಲಿ ಖರೀದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X