Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಚಿತ ಅಡುಗೆ ಅನಿಲಕ್ಕಾಗಿ ಈ ಬಡ ದಲಿತ...

ಉಚಿತ ಅಡುಗೆ ಅನಿಲಕ್ಕಾಗಿ ಈ ಬಡ ದಲಿತ ಕಾರ್ಮಿಕ ಎರಡನೆ ಮದುವೆಯಾಗಲೇಬೇಕು !

ವಾರ್ತಾಭಾರತಿವಾರ್ತಾಭಾರತಿ23 Aug 2016 2:41 PM IST
share
ಉಚಿತ ಅಡುಗೆ ಅನಿಲಕ್ಕಾಗಿ ಈ ಬಡ ದಲಿತ ಕಾರ್ಮಿಕ ಎರಡನೆ ಮದುವೆಯಾಗಲೇಬೇಕು !

ಲಕ್ನೋ, ಆ.23: ಇಲ್ಲಿಂದ 90 ಕಿ.ಮೀ. ದೂರದಲ್ಲಿರುವ ಸೀತಾಪುರ ಜಿಲ್ಲೆಯ ಜುಧೌರ್ ಗ್ರಾವದ ಬಡ ದಲಿತ ಭೂರಹಿತ ದಿನಗೂಲಿ ಕಾರ್ಮಿಕನಾದ ಪುಟ್ಟಿಲಾಲ್ ಗೌತಮ್ ವಿಚಿತ್ರ ಪರಿಸ್ಥಿತಿಯನ್ನೆದುರಿಸುತಿದ್ದಾನೆ. 45 ವರ್ಷದ ವಿಧುರನಾಗಿರುವ ಈತ ತನ್ನ ಮನೆಯ ಒಲೆ ಉರಿಯಬೇಕಾದರೆ ಈಗ ಎರಡನೇ ವಿವಾಹವಾಗಲೇ ಬೇಕು ಆದರೆ ಆತನ ನಾಲ್ಕು ಮಂದಿ ಮಕ್ಕಳು ಆತನ ಎರಡನೆ ವಿವಾಹವಾಗುವ ಯೋಚನೆಯ ವಿರುದ್ಧವಾಗಿದ್ದಾರೆ. ಸರಕಾರದ ನಿಯಮಗಳ ಪ್ರಕಾರ ಆತ ತನ್ನ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಂಗವಾಗಿ ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಬೇಕಾದಲ್ಲಿ ಆತನಿಗೆ ಪತ್ನಿಯಿರಲೇಬೇಕು. ಆತನ ಪುತ್ರಿಯರು ಇನ್ನೂ ಚಿಕ್ಕವರಾಗಿರುವುದರಿಂದ ಅವರ ಹೆಸರಿನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಆತನಿಗೆ ಸಾಧ್ಯವಿಲ್ಲ.

ಕಳೆದ ಹಲವಾರು ದಿನಗಳಿಂದ ಆತ ಸಂಬಂಧಿತ ಇಲಾಖೆಯ ಕಚೇರಿಗೆ ಅಲೆದಾಡುತ್ತಿದ್ದರೂ ಆತ ಬರಿಗೈಯಲ್ಲೇ ಮರಳಬೇಕಾಗಿ ಬಂದಿದೆ.
‘‘ನನ್ನ ಪತ್ನಿಯನ್ನು ಸೂಕ್ತ ದಾಖಲೆಗಳೊಂದಿಗೆ ಕಚೇರಿಗೆ ಬರಲು ಅವರು ಹೇಳಿದ್ದಾರೆ. ನನ್ನ ಪತ್ನಿ ಈಗ ಬದುಕಿಲ್ಲ ಹಾಗೂ ನನಗೆ ಸಾಕಲು ನಾಲ್ಕು ಮಂದಿ ಮಕ್ಕಳಿದೆಯೆಂದು ಅವರಲ್ಲಿ ಹೇಳಿದರೂ ಪ್ರಯೋಜನವಾಗಿಲ್ಲ. ಅವರು ನನ್ನ ಮಾತನ್ನು ಕೇಳುತ್ತಿಲ್ಲ. ನಿಯಮವೆಂದರೆ ನಿಯಮ ಎನ್ನುತ್ತಾರೆ’’ ಎಂದು ಗೌತಮ್ ವಿವರಿಸುತ್ತಾನೆ.
ಆತನ ಪತ್ನಿ ಗೌರಿ ಅಸೌಖ್ಯದಿಂದ ಎರಡು ವರ್ಷಗಳ ಹಿಂದೆ ತೀರಿಕೊಂಡಿದ್ದಳು. ‘‘ನನಗೀಗ ಮಾರುಕಟ್ಟೆಯಿಂದ ಕಟ್ಟಿಗೆ ಹಾಗೂ ಸೀಮೆಎಣ್ಣೆ ಖರೀದಿಸುವ ಅನಿವಾರ್ಯತೆಯಿದೆ. ಆದರೆ ಕಟ್ಟಿಗೆ ಬೆಲೆ ಮಳೆಯಿಂದಾಗಿ ಕ್ವಿಂಟಾಲ್‌ಗೆ ರೂ. 500ರಷ್ಟಿದೆ. ನನ್ನಿಂದ ಅದನ್ನು ಖರೀದಿಸಲು ಅಸಾಧ್ಯ’’ ಎಂದು ಆತ ತನ್ನ ಸಮಸ್ಯೆಯನ್ನು ವಿವರಿಸುತ್ತಾನೆ. ಪ್ರಸಕ್ತ ಆತ ತನ್ನ ಮಕ್ಕಳನ್ನು ಹತ್ತಿರದ ಕಾಡಿಗೆ ಕಳುಹಿಸಿ ಮರದ ಕೊಂಬೆ ಹಾಗೂ ತರಗೆಲೆಗಳನ್ನು ತರಿಸುತ್ತಾನೆ. ಆತನ ಪುತ್ರಿಯರು ಮಣ್ಣಿನ ಒಲೆಯಲ್ಲಿ ಅಡುಗೆ ಮಾಡಲು ಆತನಿಗೆ ಸಹಾಯ ಮಾಡುತ್ತಾರೆ.
ಆತ ತನ್ನ ಸಮಸ್ಯೆಯನ್ನು ಊರಿನ ಹಿರಿಯರಲ್ಲಿ ಹೇಳಿದಾಗ ಅವರು ಮರು ವಿವಾಹವಾಗಲು ಸಲಹೆ ನೀಡಿದ್ದಾರೆ. ‘‘ಆದರೆ ನನ್ನ ಮಕ್ಕಳು ಇದನ್ನು ವಿರೋಧಿಸಿದ್ದಾರೆ. ಅವರಿಗೆ ಮಲತಾಯಿ ಬೇಕಿಲ್ಲವಂತೆ’’ ಎಂದು ಗೌತಮ್ ಹೇಳುತ್ತಾನೆ.
ಈ ಯೋಜನೆಯ ನಿಯಮಗಳನ್ನು ಪ್ರಧಾನಿ ತಿದ್ದುಪಡಿ ಮಾಡಬೇಕು, ನನ್ನಂತಹ ವಿಧುರರು ಅದರ ಪ್ರಯೋಜನ ಪಡೆಯಲು ಸಾಧ್ಯವಿಲ್ಲ’’ ಎಂದು ಆತ ಬೇಸರದಿಂದ ನುಡಿಯುತ್ತಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X