Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿನಾಲ್ಕೂರು-ಸರಪಾಡಿ ಗ್ರಾಮಗಳ...

ಮಣಿನಾಲ್ಕೂರು-ಸರಪಾಡಿ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸಚಿವ ರೈ

ವಾರ್ತಾಭಾರತಿವಾರ್ತಾಭಾರತಿ23 Aug 2016 6:30 PM IST
share
ಮಣಿನಾಲ್ಕೂರು-ಸರಪಾಡಿ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸಚಿವ ರೈ

ಬಂಟ್ವಾಳ, ಆ. 23: ಸರ್ವ ಧರ್ಮೀಯರ ಧಾರ್ಮಿಕ ಕೇಂದ್ರಗಳನ್ನು ಒಳಗೊಂಡಿರುವ ಮಣಿನಾಲ್ಕೂರು-ಸರಪಾಡಿ ಗ್ರಾಮ ಸುಂದರ, ಸೌಹಾರ್ದದ ತಾಣವಾಗಿದ್ದು ಇಲ್ಲಿಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಜ್ಯ ಅರಣ್ಯ ಹಾಗೂ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಸರಪಾಡಿ ಗ್ರಾಮದ ಹೊಳ್ಳರಗುತ್ತು ಮನೆಯಲ್ಲಿ ಶನಿವಾರ ಮಧ್ಯಾಹ್ನ ನಡೆದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ವಿವಿಧ ರಸ್ತೆಗಳ ಅಭಿವೃದ್ಧಿ ಹಾಗೂ ಶಾಲೆ-ಕಾಲೇಜುಗಳ ನಿರ್ಮಾಣಕ್ಕೆ ಈಗಾಗಲೇ ಅನುದಾನ ಒದಗಿಸಲಾಗಿದೆ. 32 ಕೋಟಿ ರೂ. ವೆಚ್ಚದ ಅಜಿಲಮೊಗರು-ಕಡೇಶ್ವಲ್ಯ ಸೇತುವೆ ನಿರ್ಮಾಣವಾದಲ್ಲಿ ಸರಪಾಡಿಗೆ ಹೆಬ್ಬಾಗಿಲು ತೆರೆದಂತಾಗುತ್ತದೆ ಎಂದರು.

ಸಮಾರಂಭದಲ್ಲಿ ಸಚಿವ ರಮಾನಾಥ ರೈ, ಸರಪಾಡಿ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ ಜೈನ್, ಸರಪಾಡಿ ತಾಲೂಕು ಪಂಚಾಯತ್ ಸದಸ್ಯೆ ಸ್ವಪ್ನ ವಿಶ್ವನಾಥ ಪೂಜಾರಿ, ಹಿರಿಯರಾದ ವೇದಮೂರ್ತಿ ಸುಬ್ರಾಯ ಐತಾಳರು ಅರಮನೆಯವರನ್ನು ಹೊಳ್ಳರಗುತ್ತು ಮನೆಯವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ಹೊಳ್ಳರಗುತ್ತು ಮನೆಯವರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.

ಗುತ್ತಿನ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ತಾಲೂಕು ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ, ಸರಪಾಡಿ-ಮಣಿನಾಲ್ಕೂರು ವ್ಯಾಪ್ತಿಯಲ್ಲಿ ಸಚಿವ ರಮಾನಾಥ ರೈಯವರ ಮುತುವರ್ಜಿಯಿಂದ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯನ್, ಸರಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ಧರ್ಣಪ್ಪ ಪೂಜಾರಿ, ಸದಸ್ಯರಾದ ಪ್ರೇಮ, ನಾರಾಯಣಪ್ಪ, ಮಣಿನಾಲ್ಕೂರು ಗ್ರಾಪಂ ಅಧ್ಯಕ್ಷೆ ಗೀತಾ ಶ್ರೀಧರ ಪೂಜಾರಿ, ಉಪಾಧ್ಯಕ್ಷ ದಿನೇಶ್, ಸದಸ್ಯರಾದ ಆದಂ ಕುಂಞಿ, ಡೆರಿಸ್ ಮೊರೆಸ್, ಹೊಳ್ಳರಗುತ್ತು ಕುಟುಂಬದ ಹಿರಿಯರಾದ ಸುಂದರ ಶೆಟ್ಟಿ, ಬೆಂಗಳೂರು ಉದ್ಯಮಿ ವಿಠಲ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗುತ್ತಿನ ನಾರಾಯಣ ಶೆಟ್ಟಿ ಸ್ವಾಗತಿಸಿದರು. ಸರಪಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಿಚಾರ್ಡ್ ಡಿಸೋಜ ವಂದಿಸಿದರು. ಸರಪಾಡಿ ಗ್ರಾಪಂ ಸದಸ್ಯ ದನಂಜಯ ಶೆಟ್ಟಿ ಸರಪಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X