Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಹರೂ, ಪಟೇಲ್‌ಗೆ ಗಲ್ಲು : ಹೇಳಿಕೆಯ...

ನೆಹರೂ, ಪಟೇಲ್‌ಗೆ ಗಲ್ಲು : ಹೇಳಿಕೆಯ ಗೊಂದಲಕ್ಕೆ ಜಾವಡೇಕರ್ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ23 Aug 2016 7:45 PM IST
share
ನೆಹರೂ, ಪಟೇಲ್‌ಗೆ ಗಲ್ಲು : ಹೇಳಿಕೆಯ ಗೊಂದಲಕ್ಕೆ ಜಾವಡೇಕರ್ ಸ್ಪಷ್ಟೀಕರಣ

ಹೊಸದಿಲ್ಲಿ, ಆ.23: ಭಾರತೀಯ ಸ್ವಾತಂತ್ರ ಹೋರಾಟದ ಅಗ್ರಗಣ್ಯರನ್ನು ಬ್ರಿಟಿಷರು ಹೇಗೆ ನಡೆಸಿಕೊಂಡರೆಂಬ ಕುರಿತು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ನೀಡಿದ ಹೇಳಿಕೆಯೊಂದು ಇಂದು ವಿವಾದ ಅಲೆಯೆಬ್ಬಿಸಿದ್ದು, ಅದಕ್ಕವರು ಅನಿವಾರ್ಯವಾಗಿ ಸ್ಪಷ್ಟೀಕರಣ ನೀಡಿ ಶಾಂತಗೊಳಿಸಬೇಕಾಗಿ ಬಂದಿದೆ.
ಮಧ್ಯಪ್ರದೇಶದ ಛಿಂದ್ರಾರದಲ್ಲಿ ಅವರು ನೀಡಿದ್ದ ಹೇಳಿಕೆಯೊಂದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸುತ್ತು ಹೊಡೆಯುತ್ತಿದ್ದು, ಅದರಲ್ಲಿ ಅವರು, ‘‘ಸುಭಾಶ್ಚಂದ್ರ ಬೋಸ್, ಸರ್ದಾರ್ ಪಟೇಲ್, ಪಂಡಿತ್ ನೆಹರೂ, ಭಗತ್‌ಸಿಂಗ್, ರಾಜಗುರು ಸಭೀ ಫಾಂಸಿ ಪರ್ ಚಢೇ(ಎಲ್ಲರೂ ಗಲ್ಲುಗಂಬವೇರಿದರು)’’ ಎಂದಿರುವುದು ಕೇಳಿಸುತ್ತಿದೆ.
ಜಾವಡೇಕರ್‌ನ ಈ ಹೇಳಿಕೆ, ಭಗತ್‌ಸಿಂಗ್ ಹಾಗೂ ರಾಜಗುರು ಅವರಂತೆ ನೆಹರೂ ಹಾಗೂ ಪಟೇಲರನ್ನೂ ಬ್ರಿಟಿಷರು ಗಲ್ಲಿಗೇರಿಸಿದರೆಂಬ ಭಾವನೆ ಮೂಡಿಸುವಂತಿತ್ತು.
 ಸರಣಿ ಟ್ವೀಟ್‌ಗಳಲ್ಲಿ ಈ ಕುರಿತು ಸ್ಪಷ್ಟೀಕರಣ ನೀಡಿರುವ ಜಾವಡೇಕರ್, ವರದಿಗಳಿಂದ ತನಗೆ ಅಚ್ಚರಿಯಾಗಿದೆ. ತಾನೂ 1857ರ ಬಳಿಕ ಎಲ್ಲ ಸ್ವಾತಂತ್ರ ಹೋರಾಟಗಾರರಿಗೆ ಗೌರವ ನೀಡಿದ್ದೆ. ತಾನು ಗಾಂಧಿ, ನೆಹರೂ, ಸುಭಾಶ್ಚಂದ್ರ ಬೋಸರಂತಹ ನಾಯಕರನ್ನು ಉಲ್ಲೇಖಿಸಿದ್ದೆ. ಆದರೆ, ಆ ಬಳಿಕ ಒಂದು ಪೂರ್ಣವಿರಾಮವಿತ್ತು. ಮುಂದಿನ ವಾಕ್ಯದಲ್ಲಿ ಬ್ರಿಟಿಷರಿಂದ ನೇಣಿಗೇರಿಸಲ್ಪಟ್ಟ, ಕಾರಾಗೃಹಕ್ಕೆ ದೂಡಲ್ಪಟ್ಟ ಹಾಗೂ ಸಂಕಷ್ಟಕ್ಕೊಳಗಾಗಿದ್ದವರನ್‌ಉ ನೆನಪಿಸಿದ್ದೇನೆಂದು ತಿಳಿಸಿದ್ದಾರೆ.
ತನ್ನ ಮಾತನ್ನು ಆಲಿಸಿದವರ ಮನದಲ್ಲಿ ಈ ಕುರಿತು ಯಾವುದೇ ಗೊಂದಲವಿಲ್ಲ. ಇಂದು ಎಲ್ಲ ಗೊಂದಲ ನಿವಾರಿಸುವುದೆಂದು ತಾನು ಆಶಿಸುತ್ತೇನೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X