Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹ್ವಾನವಿಲ್ಲದೆ ಪಾಕ್‌ಗೆ ಪ್ರಧಾನಿ ಭೇಟಿ...

ಆಹ್ವಾನವಿಲ್ಲದೆ ಪಾಕ್‌ಗೆ ಪ್ರಧಾನಿ ಭೇಟಿ ನೀಡಿದ್ದು ದೇಶದ್ರೋಹವಲ್ಲವೇ?: ಸಚಿವ ಖಾದರ್

ದೇಶ ಪ್ರೇಮ ಯಾರಿಗೂ ಗುತ್ತಿಗೆ ವಹಿಸಿಲ್ಲ: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ23 Aug 2016 8:07 PM IST
share
ಆಹ್ವಾನವಿಲ್ಲದೆ ಪಾಕ್‌ಗೆ ಪ್ರಧಾನಿ ಭೇಟಿ ನೀಡಿದ್ದು ದೇಶದ್ರೋಹವಲ್ಲವೇ?: ಸಚಿವ ಖಾದರ್

ಮಂಗಳೂರು, ಆ.23: ಯಾರದೋ ವೈಯಕ್ತಿಕ ಹೇಳಿಕೆಗಳಿಗೆ ಪ್ರತಿಭಟನೆ ಮಾಡುವವರು, ದೇಶದ ಪ್ರಧಾನಿಯೊಬ್ಬರು ಆಹ್ವಾನವಿಲ್ಲದೆ, ದಿಢೀರನೆ ಪಾಕಿಸ್ತಾನಕ್ಕೆ ಭೇಟಿ ನೀಡಿ ಊಟ ಮಾಡಿ ಬರುವುದು ದೇಶದ್ರೋಹವಲ್ಲವೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಾಜಿ ಸಂಸದೆ ರಮ್ಯಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಪ್ರಧಾನಿಯೇ ಪಾಕಿಸ್ತಾನಕ್ಕೆ ಭೇಟಿ ನೀಡಿ ಅಲ್ಲಿನ ಪ್ರಧಾನಿಯ ಮೊಮ್ಮಗನ ಮದುವೆಯಲ್ಲಿ ಭಾಗಿಯಾಗಿದ್ದರು. ಯಾವುದೇ ಮಾಹಿತಿ ನೀಡದೆ ಭೇಟಿ ನೀಡಿದರೂ ಪ್ರಶ್ನಿಸಿಲ್ಲ, ಪ್ರತಿಕ್ರಿಯಿಸಿಲ್ಲ. ಮಾತ್ರವಲ್ಲದೆ, ಆ ಸಮಾರಂಭದಲ್ಲಿ ಭೂಗತ ದೊರೆ ದಾವೂದ್ ಇಬ್ರಾಹೀಂ ಕೂಡಾ ಭಾಗವಹಿಸಿದ್ದಾಗಿ ಉತ್ತರ ಪ್ರದೇಶದ ಸಚಿವರೊಬ್ಬರು ಆರೋಪಿಸಿದ್ದರೂ, ಅವರು ಸುಳ್ಳು ಆರೋಪ ಮಾಡಿದ್ದಾರೆಂಬುದಾಗಿಯೂ ಯಾರೊಬ್ಬರೂ ದೂರು ದಾಖಲಿಸಿಲ್ಲ. ಹಾಗಿದ್ದರೂ ಒಬ್ಬರ ವೈಯಕ್ತಿಕ ಅಭಿಪ್ರಾಯಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಪಾಕಿಸ್ತಾನದವರ ಜತೆ ಮಾತನಾಡುವುದು, ಅವರು ಒಳ್ಳೆಯವರು ಎಂದು ಹೇಳುವುದು ದೇಶದ್ರೋಹವಾದರೆ ಪಾಕಿಸ್ತಾನಕ್ಕೆ ಭೇಟಿ ನೀಡಿದ ಪ್ರಧಾನಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬಗ್ಗೆ ಯಾರೂ ಯಾಕೆ ಪ್ರತಿಕ್ರಿಯಿಸಿಲ್ಲ ಎಂದು ಪ್ರಶ್ನಿಸಿದರು. ಭಾರತ ವಿಭಜನೆಗೆ ಪ್ರಮುಖರೆಂದು ಹೇಳಲಾಗುತ್ತಿರುವ ಜಿನ್ನಾರನ್ನೇ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ವಿರುದ್ಧ ಯಾರೂ ಮಾತನಾಡಿಲ್ಲ ಎಂದವರು ಹೇಳಿದರು.

ತಿರಂಗಾ ಯಾತ್ರೆಗಳನ್ನು ನಡೆಸುವವರು, ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಮಹಾತ್ಮಾ ಗಾಂಧಿಯವರನ್ನು ಕೊಂದ ಗೋಡ್ಸೆ ಬಗ್ಗೆ ಅಭಿಪ್ರಾಯ ಹೇಳುತ್ತಿಲ್ಲ. ದೇಶದ ತ್ರಿವರ್ಣ ಧ್ವಜ ಸರಿಯಿಲ್ಲ ಎಂದು ಹೇಳಿದವರು, ಇಂದು ದೇಶದ ಸ್ವಾತಂತ್ರದ ಪ್ರತೀಕವಾದ ತ್ರಿವರ್ಣ ಧ್ವಜವನ್ನು ಕೈಯ್ಯಲ್ಲಿ ಹಿಡಿದು ಬೀದಿ ಬೀದಿ ಸುತ್ತುತ್ತಾ ದೇಶ ಪ್ರೇಮವನ್ನು ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಶಕ್ತಿ. ಸಹಬಾಳ್ವೆಯಿಂದ ಜೀವನ ನಡೆಸುವುದೇ ದೇಶ ಪ್ರೇಮ ಎಂದು ಖಾದರ್ ನುಡಿದರು.

ದೇಶ ಪ್ರೇಮವನ್ನು ಯಾರಿಗೂ ಗುತ್ತಿಗೆ ವಹಿಸಲಾಗಿಲ್ಲ. ಆಮ್ನೆಸ್ಟಿ ಇಂಟರ್ ನ್ಯಾಷನಲ್ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ವರದಿ ಬರಲಿ ಎಂದವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಯುವಕರನ್ನು  ಭಾವನಾತ್ಮಕವಾಗಿ ಈ ರೀತಿಯಲ್ಲಿ ಒಡೆಯುವುದರಿಂದಾಗಿಯೇ ಪ್ರವೀಣ್ ಪೂಜಾರಿ, ಹರೀಶ್, ರಾಜು ಮೊಗವೀರ ಮೊದಲಾದ ನಿರಪರಾಧಿಗಳ ಹತ್ಯೆಗೆ ಕಾರಣವಾಗಿದೆ. ದೇಶದ ವಿರುದ್ಧದ ಹೇಳಿಕೆಗಳನ್ನು ಯಾರೂ ಸಹಿಸುವುದಿಲ್ಲ. ಭಾರತೀಯರು ಯಾರೂ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದವರು ಹೇಳಿದರು.

ಉಳ್ಳಾಲ ನಗರ ಸಭೆ ಆಯುಕ್ತರ ವರ್ಗಾವಣೆ ವಿಚಾರದಲ್ಲಿ ಸ್ಥಳೀಯ ಶಾಸಕನಾದ ತನಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಈ ವಿಚಾರದಲ್ಲಿ ತಮ್ಮ ವಿರೋಧವನ್ನು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವ ಖಾದರ್ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X