Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರ ಮುಚ್ಚಿಟ್ಟ ಎಚ್ ಐ ವಿ ಗುಟ್ಟು ರಟ್ಟು,...

ವರ ಮುಚ್ಚಿಟ್ಟ ಎಚ್ ಐ ವಿ ಗುಟ್ಟು ರಟ್ಟು, ಜಿಲ್ಲಾಡಳಿತದ ನೆರವಿನಿಂದ ಮದುವೆ ರದ್ದು

ವಾರ್ತಾಭಾರತಿವಾರ್ತಾಭಾರತಿ24 Aug 2016 9:03 AM IST
share
ವರ ಮುಚ್ಚಿಟ್ಟ ಎಚ್ ಐ ವಿ ಗುಟ್ಟು ರಟ್ಟು, ಜಿಲ್ಲಾಡಳಿತದ ನೆರವಿನಿಂದ ಮದುವೆ ರದ್ದು

ತಿರುನಲ್ವೇಲಿ, ಆ.24: ವರನಿಗೆ ಎಚ್‌ಐವಿ ಇರುವ ಬಗ್ಗೆ ಮುಚ್ಚಿಟ್ಟಿದ್ದ ಗುಟ್ಟು ರಟ್ಟಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮಧ್ಯಸ್ಥಿಕೆಯಲ್ಲಿ ವಧುವಿನ ಕಡೆಯವರು ವಿವಾಹವನ್ನು ರದ್ದು ಮಾಡಿದ ಅಪರೂಪದ ಘಟನೆ ನಡೆದಿದೆ.

ಘಟನೆ ಬೆಳಕಿಗೆ ಬಂದದ್ದು ಹೀಗೆ. ವರನ ಸಂಬಂಧಿಕರು ಹಾಗೂ ಸ್ನೇಹಿತರು ಮದುವೆ ಹಾಲ್‌ನಲ್ಲಿ ಮದುವೆ ಬ್ಯಾನರ್ ಹಾಕಿದ್ದರು. ಈ ಬ್ಯಾನರ್ ನೋಡಿದ ಕೆಲವರು ಜಿಲ್ಲಾಧಿಕಾರಿ ಎಸ್.ಪಳನಿ ಅವರಿಗೆ ರವಿವಾರ ರಾತ್ರಿ ಕರೆ ಮಾಡಿ ವರನಿಗೆ ಎಚ್‌ಐವಿ ಸೋಂಕು ಇರುವುದನ್ನು ಗಮನಕ್ಕೆ ತಂದರು.

"ಈ ದೂರವಾಣಿ ಮಾಹಿತಿ ರಾತ್ರಿ 9:30ರ ವೇಳೆಗೆ ಬಂತು. ತಕ್ಷಣ ಎಸ್ಪಿ ಹಾಗೂ ವೈದ್ಯಕೀಯ ಸೇವೆಗಳ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿ, ಇದನ್ನು ದೃಢಪಡಿಸುವಂತೆ ಆದೇಶಿಸಿದೆ. ವರನ ಕಡೆಯವರನ್ನು ಪತ್ತೆ ಮಾಡಿ ವಿಷಯ ತಿಳಿಸುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿತ್ತು" ಎಂದು ಜಿಲ್ಲಾಧಿಕಾರಿ ಘಟನೆ ವಿವರ ನೀಡಿದರು.

 ಅಧಿಕಾರಿಗಳು ಸರಕಾರಿ ಆಸ್ಪತ್ರೆಯ ಸಮಗ್ರ ಸಲಹಾ ಕೇಂದ್ರ ಹಾಗೂ ತಪಾಸಣಾ ಕೇಂದ್ರದ ದಾಖಲೆಗಳನ್ನು ಪರಿಶೀಲಿಸಿದಾಗ, 2014ರ ಜುಲೈ 30ರಿಂದ ಈತ ಎಚ್‌ಐವಿ ಚಿಕಿತ್ಸೆ ಪಡೆಯುತ್ತಿರುವುದು ದೃಢಪಟ್ಟಿತು. ಮರುದಿನ ಬೆಳಗ್ಗೆ ಈ ವೈದ್ಯಕೀಯ ದಾಖಲೆಗಳು ಕೈಸೇರಿದವು. ಅದರಲ್ಲಿ ಇದ್ದ ದೂರವಾಣಿ ಸಂಖ್ಯೆಗೆ ಕರೆ ಮಾಡಿ, ಗಂಟೆಯ ಒಳಗಾಗಿ ಬಂದು ಭೇಟಿ ಮಾಡುವಂತೆ ಸೂಚಿಸಿದೆವು. ಆದರೆ ಅವರು ಬರಲಿಲ್ಲ. ಈ ಮಧ್ಯೆ ವರನ ಸಹೋದರಿಯ ದೂರವಾಣಿ ಸಂಖ್ಯೆ ಪಡೆದು ಮಾಹಿತಿ ನೀಡಲಾಯಿತು. ಆಕೆ ಅದನ್ನು ನಂಬಲಿಲ್ಲ. ವಧುವಿನ ಕಡೆಯವರಿಗೆ ಕರೆ ಮಾಡಿದಾಗ, "ವಿರೋಧ ಪಕ್ಷದ ಕಾರ್ಯಕರ್ತರು ಈ ವದಂತಿ ಹಬ್ಬಿಸಿ ಮದುವೆ ತಪ್ಪಿಸಲು ಹೊರಟಿದ್ದಾರೆ ಎಂದು ವರನ ಕಡೆಯವರು ಹೇಳಿರುವುದು ತಿಳಿಯಿತು. ತಕ್ಷಣ ವಿವಾಹ ಸ್ಥಳಕ್ಕೆ ಧಾವಿಸಿ ಮದುವೆ ನಿಲ್ಲಿಸಿದೆವು ಎಂದು ತಹಶೀಲ್ದಾರ್ ಚೆಂಗಂ ಎಂ.ಕಾಮರಾಜ್ ವಿವರಿಸಿದರು.

ವಧುವಿಗೆ ಪರಿಸ್ಥಿತಿ ವಿವರಿಸಿದಾಗ, ಆಕೆ ವಿವಾಹ ರದ್ದು ಮಾಡಲು ಒಪ್ಪಿಕೊಂಡಳು. ವಧುವಿನ ಕಡೆಯವರು ಗ್ರಾಮಕ್ಕೆ ತೆರಳಲು ಪೊಲೀಸ್ ರಕ್ಷಣೆ ಕೋರಿದ್ದು, ವಧುವಿಗೆ ಸಂಬಂಧಿ ಯುವಕನೊಬ್ಬನ ಜತೆ ವಿವಾಹ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X