Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಕ್ರಾಡಿಯಲ್ಲಿ ನಾಯಿಗಳ ಮಾರಣಹೋಮ:...

ಕೌಕ್ರಾಡಿಯಲ್ಲಿ ನಾಯಿಗಳ ಮಾರಣಹೋಮ: ಪ್ರಾಣಿಪ್ರಿಯರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 Aug 2016 8:17 PM IST
share
ಕೌಕ್ರಾಡಿಯಲ್ಲಿ ನಾಯಿಗಳ ಮಾರಣಹೋಮ: ಪ್ರಾಣಿಪ್ರಿಯರ ಆಕ್ರೋಶ

ಉಪ್ಪಿನಂಗಡಿ, ಆ.24: ಕೌಕ್ರಾಡಿ ಗ್ರಾಮ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಉಪಟಳ ಜಾಸ್ತಿಯಾಗಿದೆ ಎಂಬ ದೂರಿನ ಮೇರೆಗೆ ಗ್ರಾಮ ಪಂಚಾಯತ್ ಯಾವುದೇ ಮುನ್ಸೂಚನೆ, ಪ್ರಚಾರ ನಡೆಸದೆ ಬುಧವಾರ ಏಕಾಏಕಿ ಬೀದಿ ನಾಯಿಗಳ ವಧೆಗೆ ಮುಂದಾಗಿದ್ದು, ಇದರಿಂದಾಗಿ ಹಲವರ ಸಾಕು ನಾಯಿಗಳೂ ಇದಕ್ಕೆ ಬಲಿಯಾಗುವಂತಾಗಿದೆ. ಬೀದಿ ನಾಯಿಗಳ ಸಂಹಾರಕ್ಕೆ ಮುಂದಾಗಿರುವ ಪಂಚಾಯತ್‌ನ ಕ್ರಮವು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ನಾಯಿ ಹಿಡಿಯುವ ತಂಡವೊಂದು ಇಲ್ಲಿಗೆ ಬಂದು ಪೇಟೆ ಬದಿಯಲ್ಲಿ ಸಂಚರಿಸುತ್ತಿರುವ ನಾಯಿಗಳನ್ನು ಅಮಾನುಷವಾಗಿ ಹಿಡಿದೆಳೆದು ಇಂಜೆಕ್ಷನ್ ಚುಚ್ಚಿ ಕೊಲ್ಲುತ್ತಿತ್ತಲ್ಲದೆ, ನಾಯಿಗಳನ್ನು ಹಿಡಿದು ಕೊಲ್ಲುವ ಭರದಲ್ಲಿ ಈ ತಂಡವು ಸಾಕು ನಾಯಿಗಳನ್ನು ಬಲಿ ಪಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ನಾಯಿಗಳನ್ನು ಸಂಹಾರ ನಡೆಸುವ ಮುನ್ನ ಪತ್ರಿಕಾ ಪ್ರಚಾರ, ಗ್ರಾಮ ವ್ಯಾಪ್ತಿಯಲ್ಲಿ ಮೈಕ್ ಪ್ರಚಾರ ಮಾಡಿ ಸಾಕು ನಾಯಿಗಳನ್ನು ಕಟ್ಟಿ ಹಾಕುವಂತೆ ತಿಳಿಸಬೇಕಾದುದು ನಿಯಮ. ಆದರೆ ಇಲ್ಲಿ ಎಲ್ಲವನ್ನೂ ಗಾಳಿಗೆ ತೂರಲಾಗಿದೆ. ಅದಲ್ಲದೆ ಕೌಕ್ರಾಡಿ ಗ್ರಾಮ ವ್ಯಾಪ್ತಿಯಿಂದ ಹೊರಗೆ ಇರುವ ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಕ್ಕಡ ಪೇಟೆ, ಜನ ವಸತಿ ಪ್ರದೇಶಗಳಲ್ಲಿ ನಾಯಿಗಳ ಸಂಹಾರ ಮಾಡಿದ್ದು, ಇಲ್ಲಿಯೂ ಹಲವರ ಸಾಕು ನಾಯಿಗಳು ಜೀವ ತೆತ್ತಿದೆ ಎಂದು ಪ್ರಾಣಿಪ್ರಿಯರು ಆರೋಪಿಸಿದ್ದಾರೆ.

ಕೊಕ್ಕಡದ ಪೇಟೆಯಲ್ಲಿ ಒಂದು ಹೆಣ್ಣು ನಾಯಿ ಇದ್ದು, ಅದು ಆಸುಪಾಸಿನ ಅಂಗಡಿ, ಮನೆಯವರ ಅಚ್ಚುಮೆಚ್ಚಿನ ನಾಯಿಯಾಗಿತ್ತು. ಇದು ಕೆಲ ದಿನಗಳ ಹಿಂದೆ ಹತ್ತು ಮರಿಗಳನ್ನು ಇಟ್ಟಿದ್ದು, ಈ ನಾಯಿಯೂ ಸಾವನ್ನಪ್ಪಿದೆ. ಹೀಗಾಗಿ ಇದೀಗ ಈ ಎಲ್ಲಾ ಮರಿಗಳು ತಬ್ಬಲಿಗಳಾಗಿದ್ದು, ಪ್ರಾಣಿ ಪ್ರಿಯರಿಗೆ ಆಘಾತವನ್ನು ನೀಡಿದೆ.

ದೂರುಗಳು ಬಂದಿದ್ದವು: ಅಧ್ಯಕ್ಷ

ಪಂಚಾಯತ್ ವ್ಯಾಪ್ತಿಯಲ್ಲಿ ನಾಯಿಗಳ ಉಪಟಳ ಅಧಿಕವಾಗಿತ್ತು. ಮತ್ತು ಹುಚ್ಚು ನಾಯಿ ಕಡಿತದ ಬಗ್ಗೆಯೂ ದೂರು ಬಂದಿತ್ತು. ಶಾಲಾ, ಕಾಲೇಜು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿ ದೂರು ನೀಡಿದ್ದರು. ಹೀಗಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಹಾರ ನಡೆಸುವ ಬಗ್ಗೆ ಪಂಚಾಯತ್ ತೀರ್ಮಾನಿಸಿದ್ದು, ಅದರಂತೆ ಕ್ರಮಕೈಗೊಳ್ಳಲಾಗಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹೀಂ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X