Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಭಿವೃದ್ಧಿ ಇಲಾಖೆಗಳು ರೈತರ,...

ಅಭಿವೃದ್ಧಿ ಇಲಾಖೆಗಳು ರೈತರ, ಸಾರ್ವಜನಿಕರ, ಸ್ನೇಹಪರ ಇಲಾಖೆಗಳಾಗಿ ಕಾರ್ಯ ನಿರ್ವಹಿಸಲಿ: ಕವಿತಾ ಲಿಂಗರಾಜು

ವಾರ್ತಾಭಾರತಿವಾರ್ತಾಭಾರತಿ24 Aug 2016 10:01 PM IST
share

ತರೀಕೆರೆ, ಆ.24: ಕೃಷಿಗೆ ಸಂಬಂಧಪಟ್ಟ ಅಭಿವೃದ್ಧಿ ಇಲಾಖೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಣೆ ಮಾಡಿ ಯೋಜನೆಗಳನ್ನು ರೂಪಿಸುವಾಗ ಅದರ ಲಾಭ ಜನತೆಗೆ ಆಗುತ್ತದೆಯೇ ಎಂದು ಪರಾಮರ್ಷಿಸಿ ನಂತರ ಅನುಷ್ಠಾನಗೊಳಿಸಬೇಕು ಎಂದು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಲಿಂಗರಾಜು ಅಧಿಕಾರಿಗಳಿಗೆ ತಿಳಿಸಿದರು.

ಸಮಿತಿ ಲಿಂಗದಹಳ್ಳಿಯ ಕೃಷಿ ತರಬೇತಿ ಕೇಂದ್ರ, ತಾಪಂ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ವೈದ್ಯಕೀಯ ಇಲಾಖೆ, ಮೀನುಗಾರಿಕೆ, ಸಾಮಾಜಿಕ ಅರಣ್ಯ ಇಲಾಖೆ ಪ್ಲಾಟೇಂಷನನ್ನು ವೀಕ್ಷಣೆ ಮಾಡಿ ನಂತರ ಅವರು ಮಾತನಾಡಿದರು. ಕೃಷಿಗೆ ಸಂಬಂಧ ಪಟ್ಟಂತೆ ಆಧುನಿಕ ತಂತ್ರಜ್ಞಾನದ ಅಳವಡಿಕೆ ಸಂಶೋಧನೆಗಳಿಂದ ಲಭ್ಯವಾಗುವ ಮಾಹಿತಿ ಆಧಾರದ ಮೇಲೆ ಕೃಷಿ ಉತ್ಪನ್ನಗಳನ್ನು ಹೆಚ್ಚಿಸುವ ಬಗ್ಗೆ ರೈತರಿಗೆ ಅರಿವು ಮೂಡಿಸುವಂತೆ ಕೃಷಿಕ ಚಿತ್ರಸೇನ ರವರಿಗೆ ಸೂಚಿಸಿದರು. ತೋಟಗಾರಿಕಾ ಇಲಾಖೆಯಲ್ಲಿ ಲಭ್ಯವಾಗುವ ಸವಲತ್ತುಗಳನ್ನು ರೈತರಿಗೆ ತಲುಪಿಸುವ ಜವಾಬ್ದಾರಿ ಹೊರಬೇಕು. ರೈತರಿಗೆ ಹನಿ ನೀರಾವರಿ ತೋಟಗಾರಿಕಾ ಬೆಳೆಗಳಿಗೆ ಸೂಕ್ತ ಸಮಯದಲ್ಲಿ ಕೀಟನಾಶಕಗಳನ್ನು ಸಿಂಪಡಿಸುವುದರ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು, ತೋಟಗಾರಿಕೆ ಬೆಳೆಗಳ ಉತ್ಪಾದನೆ ಹೆಚ್ಚಳ ಮತ್ತು ತರಕಾರಿಗಳ ಬೆಳೆ ಬಗ್ಗೆ ಅರಿವು, ಹೈನುಗಾರಿಕೆಯನ್ನು ಉಪಕಸುಬಾಗಿ ಇಟ್ಟುಕೊಂಡು ರೈತರು ಕೋಳಿ, ಕುರಿ, ಆಡುಗಳನ್ನು ಸಾಕುವುದರ ಜೊತೆಗೆ ಕೃಷಿಗೆ ಪೂರಕವಾದ ಉಪಕಸುಬುಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು. ಜಿಪಂ ಹಿರಿಯ ಸದಸ್ಯ ಕೆ.ಆರ್.ಆನಂದಪ್ಪಮಾತನಾಡಿ, ವಾಸ್ತವಿಕತೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಿ, ಹಿಂದೆ ರೈತರು ಮರುಪಾವತಿ ಮಾಡದೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಬ್ಸಿಡಿ ಯೋಜನೆಗಳು ಸಹ ರೈತರಿಗೆ ತಲುಪದೆ ವಾಪಸಾದ ಘಟನೆ ಇದೆ. ಹರಿಜನ ಗಿರಿಜನ ರೈತರಿಗೆ ಶೇ.50ರಷ್ಟು ಸಹಾಯ ಧನದೊಂದಿಗೆ ಹಸುವನ್ನು ನೀಡಲಾಗುತ್ತದೆ. ಇತರೆ ಜನಾಂಗಕ್ಕೆ ಶೇ.25ರ ಸಹಾಯ ಧನದೊಂದಿಗೆ ಸರಕಾರ ಹಸುಗಳನ್ನು ನೀಡುತ್ತದೆ. ಆದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಾಲ ಮರುಪಾವತಿ ಆಗದೇ ಇರುವವರಿಗೆ ಮಂಜೂರಾತಿ ನೀಡಿದರು ಸಹ ವಾಸ್ತವಿಕವಾಗಿ ಹಸುಗಳಿಗೆ ಹಣ ನೀಡುವುದಿಲ್ಲ. ರೈತರು ಸರಕಾರದ ಯೋಜನೆಗಳನ್ನು ಪಡೆಯಬೇಕಾದರೆ ಆರ್ಥಿಕ ವಿಚಾರದಲ್ಲಿ ಗಂಭೀರವಾದಂತಹ ನಿಲುವು ತೆಗೆದುಕೊಳ್ಳದೆ ಹೋದರೆ ಅವರಿಗೆ ಯಾವುದೇ ಸವಲತ್ತುಗಳು ಸಿಕ್ಕುವುದಿಲ್ಲ ಎಂಬ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಜಂಟಿ ನಿರ್ದೇಶಕಿ ಸೀತಾ ಸುದ್ದಿಗಾರರೊಂದಿಗೆ ಮಾತನಾಡಿ, ಸರಕಾರ ಮತ್ತು ಜಿಪಂ, ತಾಪಂಗಳು ಇರುವುದು ಜನರ ಹಿತಾಸಕ್ತಿ ಕಾಪಾಡುವುದಕ್ಕಾಗಿ ಅದನ್ನು ಅತ್ಯಂತ ಸೂಕ್ಷ್ಮವಾಗಿ ಅಧಿಕಾರಿಗಳು ಅರಿತು ಕಾರ್ಯ ನಿರ್ವಹಿಸಬೇಕು ಎಂದರು. ತಾಲೂಕಿನಲ್ಲಿ ಕೃಷಿ ಚಟುವಟಿಕೆ ಸಂಬಂಧ ಪಟ್ಟಂತೆ ಆವಶ್ಯಕವಾದ ರಸಗೊಬ್ಬರ, ಕೀಟನಾಶಕಗಳು, ಮಣ್ಣು ಪರೀಕ್ಷೆ, ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡುವ ವ್ಯವಸ್ಥೆ ರೈತರಿಗೆ ಸಲಹಾ ಕೇಂದ್ರ, ಕೌನ್ಸೆಲಿಂಗ್, ಮುಂತಾದವುಗಳನ್ನು ಕೃಷಿ ಇಲಾಖೆ ನಿರಂತರವಾಗಿ ಮಾಡುತ್ತಿದ್ದು, ಇದರ ಲಾಭವನ್ನು ರೈತರು ಪಡೆದುಕೊಂಡು ಕೃಷಿ ಉತ್ಪನ್ನಗಳನ್ನು ಹೆಚ್ಚಿಸಿಕೊಳ್ಳಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ಲೋಲಾಕ್ಷಿ ಬಾಯಿ, ಅನುಸೂಯಾ ಗೋಪಿಕೃಷ್ಣ, ಸೇರಿದಂತೆ ಎಲ್ಲಾ ಇಲಾಖಾಧಿಕಾರಿಗಳು ಸಮಿತಿಯ ಜೊತೆ ಪ್ರವಾಸದಲ್ಲಿ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X