Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂವರು ಆರೋಪಿಗಳ ಬಂಧನ

ಮೂವರು ಆರೋಪಿಗಳ ಬಂಧನ

ಗುಜರಾತ್‌ನ ಪತ್ರಕರ್ತ ಕಿಶೋರ್ ದವೆ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ24 Aug 2016 11:09 PM IST
share

ಅಹ್ಮದಾಬಾದ್, ಆ.24: ಗುಜರಾತ್‌ನ ಪತ್ರಕರ್ತ ಕಿಶೋರ್ ದವೆ ಎಂಬವರ ಹತ್ಯೆಯ ಸಂಬಂಧ ಮೂವರನ್ನು ಬಂಧಿಸಲಾಗಿದೆ. ದವೆಯವರನ್ನು ಸೋಮವಾರ ರಾತ್ರಿ ಅವರ ಕಚೇರಿಯಲ್ಲಿ ಇರಿದು ಕೊಲೆ ಮಾಡಲಾಗಿತ್ತು.

ಪ್ರಧಾನ ಆರೋಪಿ ಫಿರೋಝ್ ಹಾಗೂ ಸಂಜಯ ರಾಥೋಡ್ ಮತ್ತು ಆರಿಫ್ ಸಯೀದ್ ಎಂಬವರನ್ನು ಬುಧವಾರ ಬಂಧಿಸಲಾಗಿದೆ. ಅಪರಾಧ ಮಾಡಿರುವ ಕುರಿತು ಅವರು ಒಪ್ಪಿಕೊಂಡಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ನೀಲೇಶ್ ಜಜಾಡಿಯ ತಿಳಿಸಿದ್ದಾರೆ.
 ‘ಜೈಹಿಂದ್’ ಎಂಬ ಗುಜರಾತಿ ವೃತ್ತಪತ್ರಿಕೆಯ ಜುನಾಗಡ ಬ್ಯೂರೊದ ಮುಖ್ಯಸ್ಥರಾಗಿದ್ದ ದವೆಯವರನ್ನು ಸೋಮವಾರ ರಾತ್ರಿ 9ರ ವೇಳೆ ಬರವಣಿಗೆಯಲ್ಲಿ ನಿರತರಾಗಿದ್ದಾಗ ಇರಿದು ಕೊಲೆಮಾಡಲಾಗಿತ್ತು. ದಾಳಿ ನಡೆದ ವೇಳೆ ಅಲ್ಲಿ ಬೇರಾರೂ ಇರಲಿಲ್ಲ. ಅವರ ಒಂದು ಚಿಕ್ಕ ಕೊಠಡಿಯ ಕಚೇರಿಯಲ್ಲಿ ಭದ್ರತಾ ಕ್ಯಾಮರಾಗಳಿರಲಿಲ್ಲ. ಕಚೇರಿ ಸಹಾಯಕನೊಬ್ಬ ಅವರ ಮೃತದೇಹವನ್ನು ಕಂಡನೆಂದು ಪೊಲೀಸ್ ಮೂಲಗಳು ವಿವರಿಸಿವೆ.
ಫಿರೋಝ್, ದವೆಯವರ ವ್ಯಾಪಾರ ಪಾಲುದಾರನಾಗಿದ್ದನು. ಅವರಿಬ್ಬರೂ ಸಾರಿಗೆ ಉದ್ಯಮ ನಡೆಸುತ್ತಿದ್ದರು. ಕಿಶೋರ್‌ಗೆ ಸ್ವಂತ 2 ಬಸ್‌ಗಳು ಹಾಗೂ ಒಂದು ಮಿನಿ ಬಸ್ ಇದೆಯೆಂದು ಅವು ಹೇಳಿವೆ.
ಒಂದು ಬಸ್‌ನ ಮಾಲಕತ್ವವನ್ನು ತನಗೆ ವರ್ಗಾಯಿಸುವಂತೆ ಫಿರೋಝ್ ಕೆಲವು ತಿಂಗಳುಗಳಿಂದ ದವೆಯವರನ್ನು ಒತ್ತಾಯಿಸುತ್ತಿದ್ದನು. ಆದರೆ ಅದಕ್ಕೆ ಅವರು ಮೀನ ಮೇಷ ಎಣಿಸುತ್ತಿದ್ದರು. ತನಗೆ ಕಾನೂನು ವಿಚಾರದಲ್ಲಿ ದವೆ ಸಹಾಯ ಮಾಡುತ್ತಿಲ್ಲವೆಂಬ ಸಿಟ್ಟೂ ಫಿರೋಝ್‌ಗಿತ್ತೆಂದು ಜಜಾಡಿಯ ಹೇಳಿದ್ದಾರೆ.


ಸೋಮವಾರ ರಾತ್ರಿ ಫಿರೋಝ್ ಸಂಜಯ್ ಹಾಗೂ ಆರಿಫ್, ದವೆಯವರ ಕಚೇರಿಗೆ ಹೋಗಿ ಜಗಳವಾಡಿದ್ದರು.ಬಳಿಕ ಫಿರೋಝ್, ದವೆಯವರನ್ನು ಹಲವು ಬಾರಿ ತಿವಿದಿದ್ದ. ಆರೋಪಿಗಳು ಸುಟ್ಟಿದ್ದ ರಕ್ತಸಿಕ್ತ ಬಟ್ಟೆ ಪೊಲೀಸರಿಗೆ ಲಭಿಸಿದೆ. ಅವರು ಅಪಹರಿಸಿದ್ದ ದವೆಯವರ ಮೊಬೈಲ್ ಫೋನ್‌ನ ಭಾಗಗಳೂ ದೊರೆತಿವೆಯೆಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X