ನಾಲ್ಕುಸಾವಿರ ಉದ್ಯೋಗಾವಕಾಶ ಕಲ್ಪಿಸುವ ‘ಟೂಲ್ಸ್ಪಾರ್ಕ್’ ಅಭಿವೃದ್ಧಿಗೆ ಸಚಿವ ಸಂಪುಟ ಸಮ್ಮತಿ
ಬೆಂಗಳೂರು, ಆ.24: ತುಮಕೂರಿನ ವಸಂತ ನರಸಾಪುರದಲ್ಲಿ ಏಕೀಕೃತ ಯಂತ್ರೋಪಕರಣ(ಟೂಲ್ಸ್) ಪಾರ್ಕ್ ಅಭಿವೃದ್ಧಿಗೆ ವಿಶೇಷ ವಾಹಕ ಸಂಸ್ಥೆ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಬುಧವಾರ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜಯಚಂದ್ರ, ನಾಲ್ಕು ಸಾವಿರ ಜನರಿಗೆ ಉದ್ಯೋಗ ಕಲ್ಪಿಸುವ 421 ಕೋಟಿ ರೂ. ವೆಚ್ಚದಲ್ಲಿ ಟೂಲ್ಸ್ ಪಾರ್ಕ್ ನಿರ್ಮಿಸುತ್ತಿದ್ದು, ಕೇಂದ್ರ ಸರಕಾರ 125 ಕೋಟಿ ರೂ. ಅನುದಾನ ಒದಗಿಸಲಿದೆ ಎಂದು ಹೇಳಿದರು.್ಟು 2,160 ಕೋಟಿ ರೂ. ವೌಲ್ಯದ ಯಂತ್ರೋಪಕರಣಗಳನ್ನು ಉತ್ಪಾದಿಸುವ ಉದ್ದೇಶ ಹೊಂದಿದ್ದು, ಭೂಮಿ ಖರೀದಿಗೆ 191 ಕೋಟಿ ರೂ., ಮೂಲ ಸೌಲಭ್ಯ ಕಲ್ಪಿಸಲು 229 ಕೋಟಿ ರೂ. ಸೇರಿದಂತೆ ಒಟ್ಟು 421 ಕೋಟಿ ರೂ. ವೆಚ್ಚವಾಗಲಿದೆ ಎಂದು ಜಯಚಂದ್ರ ವಿವರ ನೀಡಿದರು.ಾರಿಡಾರ್ ವಿಸ್ತರಣೆ: ಕೈಗಾರಿಕೆಗಳ ಅಭಿವೃದ್ಧಿ ದೃಷ್ಟಿಯಿಂದ ನಿರ್ಮಿಸಲು ಉದ್ದೇಶಿಸಿರುವ ‘ಚೆನ್ನೆ-ಬೆಂಗಳೂರು ಕೈಗಾರಿಕಾ ಕಾರಿಡಾರ್’ನ್ನು ಚಿತ್ರದುರ್ಗದ ವರೆಗೆ ವಿಸ್ತರಿಸಲು ಉದ್ದೇಶಿಸಿದ್ದು, ಈ ಸಂಬಂಧ ಈಗಾಗಲೇ ಉನ್ನತ ಸಮಿತಿ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ತಿದ್ದುಪಡಿ: ಖಜಾನೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿ ಹಾಗೂ ಆರ್ಥಿಕ ಇಲಾಖೆಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಗಳ ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ, ಕೆಪಿಎಸ್ಸಿಯ 2014-15ನೆ ಸಾಲಿನ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲು ಸಮ್ಮತಿಸಿದೆ.ೆರೆ ಅಭಿವೃದ್ಧಿ: ಸ್ಥಳೀಯ ಯೋಜನಾ ಪ್ರಾಕಾರಗಳು ಸಂಗ್ರಹಿಸುವ ಕೆರೆಗಳ ಅಭಿವೃದ್ಧಿ ತೆರಿಗೆ ಹಣದ ಪೈಕಿ ಶೇ.25ರಷ್ಟು ಬೆಂಗಳೂರು ನಗರದ ಕೆರೆಗಳ ಅಭಿವೃದ್ಧಿಗೆ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಕಾರಕ್ಕೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸೂಕ್ಷ್ಮ ನೀರಾವರಿಗೂ ನೆರವು: ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ವ್ಯವಸ್ಥೆ ಅಳವಡಿಕೆ ಯೋಜನೆಗೆ 32.22 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ. ಗದಗ-ಹೊಂಬಾಳ್ ರೈಲ್ವೆ ನಿಲ್ದಾಣದ ಬಳಿ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯದ ಪಾಲಿನ 13 ಕೋಟಿ ರೂ. ನೀಡಲು ಒಪ್ಪಿಗೆ ನೀಡಿದೆ ಎಂದು ಅವರು ಮಾಹಿತಿ ನೀಡಿದರು.ಡ್ಡಾಯ ನಿವೃತ್ತಿ: ಭ್ರಷ್ಟಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಶೋಕ ಎಂ.ಮುಗಳಿ ಅವರನ್ನು ಕಡ್ಡಾಯ ನಿವೃತ್ತಿ ದಂಡನೆ ವಿಸಲು ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.ೇಂದ್ರದ ನರ್ಮ್ ಸೇರಿದಂತೆ ವಿವಿಧ ಯೋಜನೆಗಳಡಿ ನಗರದ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಂಡಿದ್ದ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು 836.98 ಕೋಟಿ ರೂ. ಬಜೆಟ್ನಲ್ಲಿ ನಿಗದಿಪಡಿಸಿ, ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ಜಯಚಂದ್ರ ವಿವರ ನೀಡಿದರು.ಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಜಟ್ಟೂರು ಗ್ರಾಮದ ಬಳಿ ಕಾಗಿನ ನದಿಗೆ ಅಡ್ಡಲಾಗಿ ಜಟ್ಟೂರು ಬ್ರಿಡ್ಜ್ ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಯ 26.26 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು.ುಡಿಯುವ ನೀರು: ಮೈಸೂರಿನ ಸುತ್ತೂರು ಗ್ರಾಮದ ಬಳಿ ನದಿಯಿಂದ ನೀರನ್ನು ಎತ್ತಿ ನಂಜನಗೂಡು, ಯಳಂದೂರು ಮತ್ತು ಚಾಮರಾಜನಗರ ತಾಲೂಕಿನ 24 ಕೆರೆಗಳನ್ನು ತುಂಬಿಸುವ 233 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ಹೇಳಿದರು.





