Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಗ್ರಾಮೀಣ ಜನರಲ್ಲಿ ಪೌಷ್ಟಿಕ ಆಹಾರದ...

ಭಾರತದ ಗ್ರಾಮೀಣ ಜನರಲ್ಲಿ ಪೌಷ್ಟಿಕ ಆಹಾರದ ಕೊರತೆ

ವಾರ್ತಾಭಾರತಿವಾರ್ತಾಭಾರತಿ25 Aug 2016 11:08 PM IST
share

ಹೊಸದಿಲ್ಲಿ, ಆ.25: ಭಾರತದ 70ನೆ ಸ್ವಾತಂತ್ರ ವರ್ಷ ಆರಂಭಗೊಂಡಿದೆ. ದೇಶದಲ್ಲಿ ವ್ಯಾಪಕ ಬೆಳವಣಿಗೆ ಕಾಣಿಸತೊಡಗಿದೆ. ಆದರೆ, ಇದಕ್ಕೆ ಗ್ರಾಮೀಣ ಭಾರತ ಹೊರತಾಗಿದೆ. ಗ್ರಾಮೀಣ ಪ್ರದೇಶದ 83.3 ಕೋಟಿ(ಶೇ.70) ಭಾರತೀಯರು ಆರೋಗ್ಯದಿಂದಿರಲು ಅಗತ್ಯವಿರುವುದಕ್ಕಿಂತ ಕಡಿಮೆ ಪೌಷ್ಟಿಕಾಂಶಗಳನ್ನು ಸೇವಿಸುತ್ತಿದ್ದಾರೆ. ರಾಷ್ಟ್ರೀಯ ಪೌಷ್ಟಿಕಾಂಶ ನಿಗಾ ಬ್ಯೂರೊದ(ಎನ್ನೆನ್ನೆಂಬಿ) ಸಮೀಕ್ಷೆಯೊಂದು ಇದನ್ನು ತಿಳಿಸಿದೆ.

1975-79ಕ್ಕೆ ಹೋಲಿಸಿದರೆ ಗ್ರಾಮೀಣ ಭಾರತದ ಜನರು ಈಗ 550 ಕ್ಯಾಲರಿ ಹಾಗೂ 13 ಗ್ರಾಂ ಪ್ರೊಟೀನ್, 5 ಮಿ.ಗ್ರಾಂ ಕಬ್ಬಿಣ, 250 ಮಿ.ಗ್ರಾಂ. ಕ್ಯಾಲ್ಸಿಯಂ ಮತ್ತು ಸುಮಾರು 500 ಮಿ.ಗ್ರಾಂ. ವಿಟಮಿನ್-ಎಯಷ್ಟು ಕಡಿಮೆ ಪ್ರಮಾಣದ ಪೌಷ್ಟಿಕಾಂಶಗಳನ್ನು ಸೇವಿಸುತ್ತಿದ್ದಾರೆ.
ಮೂರಕ್ಕಿಂತ ಕೆಳ ಹರೆಯದ ಮಕ್ಕಳು, ದಿನಕ್ಕೆ ಅಗತ್ಯವಿರುವ 300 ಮೀ.ಲೀ. ಹಾಲಿನ ಬದಲು ಸರಾಸರಿ 80 ಮಿ.ಲೀ. ಹಾಲನ್ನಷ್ಟೇ ಕುಡಿಯುತ್ತಿವೆ. ಈ ಅಂಕಿ-ಅಂಶವು ಶೇ.35ರಷ್ಟು ಗ್ರಾಮೀಣ ಪುರುಷರು ಹಾಗೂ ಮಹಿಳೆಯರು ಯಾಕೆ ಪೌಷ್ಟಿಕಾಂಶ ಕೊರತೆಯಿಂದ ನರಳುತ್ತಿದ್ದಾರೆ ಹಾಗೂ ಶೇ.42ರಷ್ಟು ಮಕ್ಕಳು ಯಾಕೆ ಕಡಿಮೆ ತೂಕದವುಗಳಾಗಿವೆಯೆಂಬುದನ್ನು ವಿವರಿಸುತ್ತದೆ.
ಬಡವರೇ ಇರುವ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಿದೆಯೆಂದು ಲಾಭರಹಿತ ಸಂಘಟನೆ ‘ಆಜೀವಿಕಾ ಬ್ಯೂರೊ’ 2014ರಲ್ಲಿ ದಕ್ಷಿಣ ರಾಜಸ್ಥಾನದ 4 ಪಂಚಾಯತ್‌ಗಳಾದ್ಯಂತ ನಡೆಸಿದ ಸಮೀಕ್ಷೆ ಸೂಚಿಸಿದೆ.
 ಸಮೀಕ್ಷಿಸಲಾಗಿದ್ದ ಸುಮಾರು 500ರಷ್ಟು ತಾಯಂದಿರಲ್ಲಿ ಅರ್ಧದಷ್ಟು ಮಹಿಳೆಯರು ಹಿಂದಿನ ದಿನ ಬೇಳೆ ಕಾಳುಗಳನ್ನು ಸೇವಿಸಿರಲಿಲ್ಲ. ಮೂರನೆ ಒಂದರಷ್ಟು ಮಂದಿ ಸರಕಾರಿ ಬಳಸಿರಲಿಲ್ಲ ಹಾಗೂ ಬಹುತೇಕ ಅಮ್ಮಂದಿರು ಯಾವುದೇ ಹಣ್ಣು, ಮೊಟ್ಟೆ ಅಥವಾ ಮಾಂಸ ತಿಂದಿರಲಿಲ್ಲ. ಇದರ ಪರಿಣಾಮವಾಗಿ ಅವರಲ್ಲಿ ಅರ್ಧದಷ್ಟು ತಾಯಂದಿರು ಹಾಗೂ ಅವರ ಮೂರರ ಕೆಳ ಹರೆಯದ ಮಕ್ಕಳು ಕುಘೋಷಿತರಾಗಿದ್ದರು.
ಪೌಷ್ಟಿಕಾಂಶ ಕೊರತೆ ತಡೆಯಲು ಸಾಕಷ್ಟು ಖರ್ಚು ಮಾಡದಿರುವುದು, ಜಮೀನು ಇಲ್ಲದಿರುವುದು, ಬೆಲೆಯೇರಿಕೆ ಇತ್ಯಾದಿಗಳು ಗ್ರಾಮೀಣದಲ್ಲಿ ಕುಘೋಷಣೆಗೆ ಪ್ರಧಾನ ಕಾರಣಗಳಾಗಿವೆಯೆಂದು ಸಮೀಕ್ಷೆ ಅಭಿಪ್ರಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X