Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದುಲೀಪ್ ಟ್ರೋಫಿ: ಗೆಲುವಿನ ಹಾದಿಯಲ್ಲಿ...

ದುಲೀಪ್ ಟ್ರೋಫಿ: ಗೆಲುವಿನ ಹಾದಿಯಲ್ಲಿ ಇಂಡಿಯಾ ರೆಡ್

ಮುಕುಂದ್ ಭರ್ಜರಿ ಶತಕ, ಕುಲ್‌ದೀಪ್‌ಗೆ 5 ವಿಕೆಟ್

ವಾರ್ತಾಭಾರತಿವಾರ್ತಾಭಾರತಿ25 Aug 2016 11:57 PM IST
share
ದುಲೀಪ್ ಟ್ರೋಫಿ: ಗೆಲುವಿನ ಹಾದಿಯಲ್ಲಿ ಇಂಡಿಯಾ ರೆಡ್

ಗ್ರೇಟರ್ ನೊಯ್ಡ, ಆ.25: ಆರಂಭಿಕ ಬ್ಯಾಟ್ಸ್‌ಮನ್ ಅಭಿನವ್ ಮುಕುಂದ್ ಬಾರಿಸಿದ ಆಕರ್ಷಕ ಶತಕ(169 ರನ್), ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಗುರುಕೀರತ್ ಸಿಂಗ್(82 ರನ್) ಅರ್ಧಶತಕ ಹಾಗೂ ಕುಲ್‌ದೀಪ್ ಯಾದವ್(5-55) ಅಮೋಘ ಬೌಲಿಂಗ್‌ನ ನೆರವಿನಿಂದ ಇಂಡಿಯಾ ರೆಡ್ ತಂಡ ದುಲೀಪ್ ಟ್ರೋಫಿ ಪಂದ್ಯದಲ್ಲಿ ಇಂಡಿಯಾ ಗ್ರೀನ್ ತಂಡದ ವಿರುದ್ಧ ಗೆಲುವಿನ ಹಾದಿಯಲ್ಲಿದೆ.

 ಗೆಲುವಿಗೆ 497 ರನ್ ಕಠಿಣ ಸವಾಲು ಪಡೆದಿದ್ದ ಇಂಡಿಯಾ ಗ್ರೀನ್ ತಂಡ 3ನೆ ದಿನದಾಟದಂತ್ಯಕ್ಕೆ 46 ಓವರ್‌ಗಳಲ್ಲಿ 217 ರನ್‌ಗೆ 7 ವಿಕೆಟ್ ಕಳೆದುಕೊಂಡಿದೆ. ಅಂತಿಮ ದಿನವಾದ ಶುಕ್ರವಾರ ಗೆಲ್ಲಲು ಇನ್ನೂ 280 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಕುಲ್‌ದೀಪ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಚೊಚ್ಚಲ 5 ವಿಕೆಟ್ ಗೊಂಚಲು ಪಡೆದರು.

ರಾಬಿನ್ ಉತ್ತಪ್ಪ 72 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರು. ನಾಯಕ ಸುರೇಶ್ ರೈನಾ(42) ಕ್ರೀಸ್ ಕಾಯ್ದುಕೊಂಡಿದ್ದಾರೆ. ಸೌರವ್ ತಿವಾರಿ(31) ಎರಡಂಕೆ ದಾಟಿದರು. ಇದೇ ಮೊದಲ ಬಾರಿ ಪಿಂಕ್ ಚೆಂಡಿನಲ್ಲಿ ಹಗಲು-ರಾತ್ರಿ ನಡೆಯುತ್ತಿರುವ ನಾಲ್ಕುದಿನಗಳ ದುಲೀಪ್ ಟ್ರೋಫಿ ಪಂದ್ಯದ ಮೂರನೆ ದಿನವಾದ ಗುರುವಾರ 3 ವಿಕೆಟ್ ನಷ್ಟಕ್ಕೆ 344 ರನ್‌ನಿಂದ ಎರಡನೆ ಇನಿಂಗ್ಸ್ ಮುಂದುವರಿಸಿದ ಇಂಡಿಯಾ ರೆಡ್ ತಂಡ ಸ್ಪಿನ್ನರ್ ಶ್ರೇಯಸ್ ಗೋಪಾಲ್(5-123) ದಾಳಿಗೆ ಸಿಲುಕಿ 116.5 ಓವರ್‌ಗಳಲ್ಲಿ 486 ರನ್‌ಗೆ ಆಲೌಟಾಯಿತು. ಆದರೆ, ಇಂಡಿಯಾ ಗ್ರೀನ್ ತಂಡಕ್ಕೆ ಕಠಿಣ ಗುರಿ ನೀಡಲು ಯಶಸ್ವಿಯಾಯಿತು.

ಸುದೀಪ್ ಚಟರ್ಜಿ(114) ಅವರೊಂದಿಗೆ 2ನೆ ವಿಕೆಟ್‌ಗೆ 240 ರನ್ ಜೊತೆಯಾಟ ನಡೆಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದ ಮುಕುಂದ್ ಆ ಬಳಿಕ 4ನೆ ವಿಕೆಟ್‌ಗೆ ಗುರುಕೀರತ್‌ರೊಂದಿಗೆ 70 ರನ್ ಸೇರಿಸಿ ತಂಡವನ್ನು ಆಧರಿಸಿದರು.

ತಂಡದ ಪರ ಗರಿಷ್ಠ ಸ್ಕೋರ್(169 ರನ್, 221 ಎಸೆತ, 20 ಬೌಂಡರಿ) ದಾಖಲಿಸಿದ್ದ ಮುಕುಂದ್‌ಗೆ ವೇಗದ ಬೌಲರ್ ಅಶೋಕ್ ದಿಂಡಾ ಪೆವಿಲಿಯನ್ ಹಾದಿ ತೋರಿಸಿದರು.

ತಂಡದ ಮೊತ್ತವನ್ನು 425 ರನ್‌ಗೆ ತಲುಪಿಸಿದ ಗುರುಕೀರತ್(82 ರನ್, 96ಎಸೆತ, 13 ಬೌಂಡರಿ, 1 ಸಿಕ್ಸರ್) ಕರ್ನಾಟಕದ ಸ್ಪಿನ್ನರ್ ಎಸ್.ಗೋಪಾಲ್‌ಗೆ ವಿಕೆಟ್ ಒಪ್ಪಿಸಿದರು.

ಔಟಾಗದೆ 33 ರನ್ ಗಳಿಸಿದ ಅನುರೀತ್ ಸಿಂಗ್ ಇಂಡಿಯಾ ಗ್ರೀನ್ ತಂಡಕ್ಕೆ ಕಠಿಣ ಗುರಿ ನಿಗದಿಪಡಿಸಲು ತಂಡಕ್ಕೆ ನೆರವಾದರು.

ಸಂಕ್ಷಿಪ್ತ ಸ್ಕೋರ್

ಇಂಡಿಯಾ ರೆಡ್ ಪ್ರಥಮ ಇನಿಂಗ್ಸ್: 161

ಇಂಡಿಯಾ ಗ್ರೀನ್ ಪ್ರಥಮ ಇನಿಂಗ್ಸ್: 151

ಇಂಡಿಯಾ ರೆಡ್ ದ್ವಿತೀಯ ಇನಿಂಗ್ಸ್: 486/10

 (ಮುಕುಂದ್ 169, ಸಂದೀಪ್ ಮುಖರ್ಜಿ 114, ಗುರುಕೀರತ್ 82, ಎಸ್.ಗೋಪಾಲ್ 5-123, ಓಜಾ 2-58)

ಇಂಡಿಯಾ ಗ್ರೀನ್ ದ್ವಿತೀಯ ಇನಿಂಗ್ಸ್: 46 ಓವರ್‌ಗಳಲ್ಲಿ 217/7

(ರಾಬಿನ್ ಉತ್ತಪ್ಪ 72, ಸುರೇಶ್ ರೈನಾ ಔಟಾಗದೆ 42, ಕುಲದೀಪ್ ಯಾದವ್ 5-55)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X