Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 92 ಪೈಸೆಗೆ 10 ಲಕ್ಷ ರೂಪಾಯಿಯ ರೈಲು...

92 ಪೈಸೆಗೆ 10 ಲಕ್ಷ ರೂಪಾಯಿಯ ರೈಲು ಪ್ರಯಾಣ ವಿಮೆ

ಕೇಂದ್ರ ಸರ್ಕಾರದಿಂದ ಹೊಸ ಯೋಜನೆ

ವಾರ್ತಾಭಾರತಿವಾರ್ತಾಭಾರತಿ26 Aug 2016 11:30 PM IST
share
92 ಪೈಸೆಗೆ 10 ಲಕ್ಷ ರೂಪಾಯಿಯ ರೈಲು ಪ್ರಯಾಣ ವಿಮೆ

ಆನ್‌ಲೈನ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ ಶುಭ ಸುದ್ದಿ. ಕೇವಲ ಒಂದು ರೂಪಾಯಿಗಿಂತಲೂ ಕಡಿಮೆ ಮೊತ್ತದ ವಿಮಾ ಕಂತು ಪಾವತಿಸಿ, 10 ಲಕ್ಷ ರೂಪಾಯಿಯ ರೈಲು ಪ್ರಯಾಣ ವಿಮೆ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಯೋಜನೆ ಆಗಸ್ಟ್ 31ರಿಂದ ಜಾರಿಗೆ ಬರಲಿದೆ.

ಐಆರ್‌ಸಿಟಿಸಿ ಮೂಲಕ ರೈಲ್ವೆ ಟಿಕೆಟ್ ಕಾಯ್ದಿರಿಸುವಾಗ ಕೇವಲ 92 ಪೈಸೆ ಕಂತುಪಾವತಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಕಳೆದ ವರ್ಷದ ರೈಲ್ವೆ ಬಜೆಟ್‌ನಲ್ಲಿ, ರೈಲು ಪ್ರಯಾಣಿಕರಿಗೆ ಐಚ್ಛಿಕ ವಿಮಾ ಯೋಜನೆಯನ್ನು ಘೋಷಿಸಿದ್ದರು. ಟಿಕೆಟ್ ಕಾಯ್ದಿರಿಸುವ ವೇಳೆಯೇ ಪ್ರಿಮಿಯಂ ತುಂಬುವ ವ್ಯವಸ್ಥೆ ಜಾರಿಗೆ ತರುವುದಾಗಿ ಹೇಳಿದ್ದರು.

ಈ ಹೊಸ ಸೌಲಭ್ಯ ಉಪನಗರ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಲಭ್ಯ ಇರುವುದಿಲ್ಲ. ಉಳಿದಂತೆ ಯಾವುದೇ ದರ್ಜೆಯಲ್ಲಿ ಪ್ರಯಾಣಿಸುವವರೂ ವಿಮಾಸೌಲಭ್ಯ ಪಡೆಯಬಹುದು. ಆರಂಭದಲ್ಲಿ ರೈಲುಗಳ ಆಧಾರದಲ್ಲಿ ಇದು ಜಾರಿಯಾಗಲಿದೆ. ಈ ಯೋಜನೆ ಐದು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಹಾಗೂ ವಿದೇಶಿ ಪ್ರಯಾಣಿಕರಿಗೆ ಅನ್ವಯಿಸುವುದಿಲ್ಲ. ದೃಢೀಕೃತ ಟಿಕೆಟ್, ಆರ್‌ಎಸಿ ಹಾಗೂ ವೆಯಿಟಿಂಗ್ ಲಿಸ್ಟ್‌ನಲ್ಲಿರುವ ಪ್ರಯಾಣಿಕರೂ ಇದು ಲಭ್ಯ.

ರೈಲು ಪ್ರಯಾಣದ ವೇಳೆ ಅವಘಡ ಸಂಭವಿಸಿ ಪ್ರಯಾಣಿಕರು ಮೃತಪಟ್ಟರೆ ಅಥವಾ ಕಾಯಂ ಅಂಗವೈಕಲ್ಯಕ್ಕೆ ಒಳಗಾದರೆ 10 ಲಕ್ಷ ರೂಪಾಯಿ, ಭಾಗಶಃ ಅಂಗವೈಕಲ್ಯಕ್ಕೆ 7.5 ಲಕ್ಷ, 2 ಲಕ್ಷ ರೂಪಾಯಿವರೆಗೂ ಆಸ್ಪತ್ರೆ ದಾಖಲಾತಿ ವೆಚ್ಚ ನೀಡಲಾಗುತ್ತದೆ. ಇದರ ಜತೆಗೆ ಮೃತದೇಹವನ್ನು ಒಯ್ಯಲು 10 ಸಾವಿರ ರೂಪಾಯಿ ನೀಡಲಾಗುತ್ತದೆ. ಭಯೋತ್ಪಾದಕ ದಾಳಿ, ಡಕಾಯಿತಿ, ದೊಂಬಿ, ಶೂಟೌಟ್, ಬೆಂಕಿ ಆಕಸ್ಮಿಕ ಪ್ರಕರಣಗಳಿಗೂ ಇದು ಅನ್ವಯಿಸುತ್ತದೆ. ಆದರೆ ಟಿಕೆಟ್ ರದ್ದುಪಡಿಸಿದರೆ, ಪ್ರಿಮಿಯಂ ಹಣ ಮರುಪಾವತಿ ಇರುವುದಿಲ್ಲ.

ಈ ಯೋಜನೆಯನ್ನು ಐಆರ್‌ಸಿಟಿಸಿಯು ಐಸಿಐಸಿಐ ಲೊಂಬಾರ್ಡ್ ಜನರಲ್ ಇನ್ಶೂರೆನ್ಸ್, ರಾಯಲ್ ಸುಂದರಂ ಜನರಲ್ ಇನ್ಶೂರೆನ್ಸ್ ಹಾಗೂ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಪಾಲುದಾರಿಕೆಯಲ್ಲಿ ಜಾರಿಗೊಳಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X