ನೆಲ್ಯಾಡಿ: ಕಾರು ಢಿಕ್ಕಿಯಾಗಿ ಪಾದಚಾರಿಗೆ ಗಂಭೀರ ಗಾಯ
ಉಪ್ಪಿನಂಗಡಿ, ಆ.26: ಕಾರು ಢಿಕ್ಕಿಯಾಗಿ ಪಾದಚಾರಿಯೋರ್ವರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ದಾವಣಗೆರೆ ಮೂಲದ ಆರೀಫುಲ್ಲಾ (32) ಗಾಯಗೊಂಡ ವ್ಯಕ್ತಿ.
ಇವರು ನಿನ್ನೆ ಸಂಜೆ ನೆಲ್ಯಾಡಿ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಅಲ್ಟೋ ಕಾರು ಇವರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಕೃಷ್ಣಪ್ರಸಾದ್ ಎಂಬಾತನ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story