Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಂತಿಯುತ ಗಣೇಶೋತ್ಸವ ಆಚರಣೆಗೆ ಕ್ರಮ:...

ಶಾಂತಿಯುತ ಗಣೇಶೋತ್ಸವ ಆಚರಣೆಗೆ ಕ್ರಮ: ಎಸ್ಪಿ

ಗೂಂಡಾಗಿರಿ ಸಹಿಸಲ್ಲ: ನೂತನ ಎಸ್ಪಿ ಅಭಿನವ್ ಖರೇ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ26 Aug 2016 10:40 PM IST
share
ಶಾಂತಿಯುತ ಗಣೇಶೋತ್ಸವ ಆಚರಣೆಗೆ ಕ್ರಮ: ಎಸ್ಪಿ

ಶಿವಮೊಗ್ಗ, ಆ. 26: ಗೂಂಡಾಗಳ ನಿಗ್ರಹಕ್ಕೆ ಒತ್ತು ನೀಡುವುದರ ಜೊತೆಗೆ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟು ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ಮುಂಬರುವ ಗಣೇಶೋತ್ಸವ ಸಮಾರಂಭವನ್ನು ಸುಗಮ-ಶಾಂತಿಯುತವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೇ ತಿಳಿಸಿದ್ದಾರೆ.

ಶುಕ್ರವಾರ ನಗರದ ಬಿ.ಎಚ್.ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿಗರ್ಮಿತ ಎಸ್ಪಿ ರವಿ ಡಿ. ಚೆನ್ನಣ್ಣನರವರಿಂದ ಅಧಿಕಾರ ಸ್ವೀಕರಿಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರವಿ ಡಿ. ಚೆನ್ನಣ್ಣನರವರು ಗಣಪತಿ ಹಬ್ಬಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂದೋಬಸ್ತ್ ಗೆ ಸಂಬಂಧಿಸಿದ ರೂಪುರೇಷೆ ಸಿದ್ಧಪಡಿಸಿದ್ದಾರೆ. ಅದರಂತೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಅನುಸರಿಸಬೇಕಾದ ವಿಧಿ-ವಿಧಾನಗಳ ಬಗ್ಗೆ ಈಗಿರುವ ಮಾರ್ಗಸೂಚಿಗಳನ್ನೇ ಮುಂದುವರಿಸಿಕೊಂಡು ಹೋಗಲಾಗುವುದು. ಒಟ್ಟಾರೆ ಗಣಪತಿ ಉತ್ಸವವು ಜಿಲ್ಲೆಯಾದ್ಯಂತ ಸುಗಮ-ಶಾಂತಿಯುತವಾಗಿ ನಡೆಯಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಒತ್ತು:

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಜೊತೆಗೆ ಪೊಲೀಸ್ ಕಲ್ಯಾಣ ಕಾರ್ಯಕ್ರಮಕ್ಕೆ ಆದ್ಯತೆ ನೀಡಲಾಗುವುದು. ಮೈಸೂರು ಮಾದರಿಯಲ್ಲಿ ಶಿವಮೊಗ್ಗದಲ್ಲಿಯೂ ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದ್ದಾರೆ. ಶಿವಮೊಗ್ಗ ನಗರ ಮತ್ತು ಜಿಲ್ಲೆಯಲ್ಲಿನ ಸಂಚಾರ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಪಟ್ಟಿ ಮಾಡಿ ಆದ್ಯತೆ ಮೇರೆ ಅವುಗಳನ್ನು ಪರಿಹರಿಸಲು ಗಮನಹರಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಒಂದೇ ಬ್ಯಾಚ್:

   

 ರವಿ ಡಿ. ಚೆನ್ನಣ್ಣನವರ್ ಹಾಗೂ ತಾವು ಒಂದೇ ಬ್ಯಾಚ್‌ನವ ರಾಗಿದ್ದೇವೆ. ಅವರು ಜಿಲ್ಲೆಯಲ್ಲಿ ಜಾರಿಗೆ ತಂದಿರುವ ಎಲ್ಲ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ಇದೇ ಸಂದಭರ್ದಲ್ಲಿ ಅಭಿನವ್ ಖರೇಹೇಳಿದರು.

ಸಕ್ರಿಯವಾಗುತ್ತಿವೆ ಮಾಫಿಯಾ ಗ್ಯಾಂಗ್‌ಗಳು:

ರವಿ ಡಿ. ಚೆನ್ನಣ್ಣನರವರು ವರ್ಗಾವಣೆಗೊಳ್ಳುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ಕೆಲ ಮಾಫಿಯಾ ಗ್ಯಾಂಗ್, ಕ್ರಿಮಿನಲ್‌ಗಳು ಮತ್ತೆ ಸಕ್ರಿಯವಾಗುತ್ತಿದ್ದು, ಮತ್ತೆ ತಮ್ಮ ದಂಧೆ ಶುರು ಮಾಡುವ ಸನ್ನಾಹ ನಡೆಸುತ್ತಿರುವ ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ನೂತನ ಎಸ್ಪಿ ಅಭಿನವ್ ಖರೇಯವರು ಎಚ್ಚರವಹಿಸಬೇಕಾಗಿದೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ನಗರದಲ್ಲಿ ಕ್ರಿಮಿನಲ್‌ಗಳು ಮತ್ತೆ ಬಾಲ ಬಿಚ್ಚದಂತೆ ನೋಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಮಾಫಿಯಾ ಗ್ಯಾಂಗ್ ಹಾಗೂ ಕ್ರಿಮಿನಲ್‌ಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸುವ ಕೆಲಸಗಳನ್ನು ಮಾಡಬೇಕಾಗಿದೆ ಎಂದು ನಾಗರಿಕರು ಸಲಹೆ ನೀಡುತ್ತಾರೆ.

ನೂತನ ಎಸ್ಪಿಯ ಮುಂದಿದೆ ಗಣೇಶೋತ್ಸವದ ಸವಾಲು!: 

 ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೇಯವರಿಗೆ ಮುಂಬರುವ ಗಣೇಶೋತ್ಸವ ಹಬ್ಬ ಅತ್ಯಂತ ಮಹತ್ವದ್ದಾಗಿದೆ. ಜಿಲ್ಲೆಯ ಪ್ರಮುಖ ಗಣಪತಿಗಳ ಮೆರವಣಿಗೆಯನ್ನು ಸುಗಮ-ಶಾಂತಿಯುತವಾಗಿ ನಡೆಸುವ ಗುರುತರ ಜವಾಬ್ದಾರಿ ನೂತನ ಎಸ್ಪಿಯ ಮೇಲಿದೆ. ಈ ನಿಟ್ಟಿನಲ್ಲಿ ಅಭಿನವ್ ಖರೇಯವರು ಕೈಗೊಳ್ಳುವ ಭದ್ರತಾ ಕ್ರಮಗಳ ಬಗ್ಗೆ ಜಿಲ್ಲೆಯ ನಾಗರಿಕರಲ್ಲಿ ಸಾಕಷ್ಟು ಕುತೂಹಲ ಮನೆ ಮಾಡಿದೆ. ಎಚ್ಚರವಾಗಿರಬೇಕು: ನೂತನ ಎಸ್ಪಿ ಅಭಿನವ್ ಖರೇಯವರು ಗಣೇಶ ಹಬ್ಬದ ಜವಾಬ್ದಾರಿ ನಿರ್ವಹಣೆಯನ್ನು ಅತ್ಯಂತ ಎಚ್ಚರಿಕೆ, ಚಾಕಚಕ್ಯತೆ, ಸೂಕ್ಷ್ಮತೆಯಿಂದ ನಡೆಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X