Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರ್ಮಿಕ ಅಸಹನೆಯಿಂದ ಕಲಬುರ್ಗಿ ಹತ್ಯೆ:...

ಧಾರ್ಮಿಕ ಅಸಹನೆಯಿಂದ ಕಲಬುರ್ಗಿ ಹತ್ಯೆ: ಮರುಳಸಿದ್ದಪ್ಪ

ಎಂ.ಎಂ.ಕಲಬುರ್ಗಿ ಒಂದು ನೆನಪು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Aug 2016 10:47 PM IST
share
ಧಾರ್ಮಿಕ ಅಸಹನೆಯಿಂದ ಕಲಬುರ್ಗಿ ಹತ್ಯೆ: ಮರುಳಸಿದ್ದಪ್ಪ

ಬೆಂಗಳೂರು, ಆ.26: ದೇಶದಲ್ಲಿ ವಿಷಮ ವಾತಾವರಣ ವನ್ನು ಬಿತ್ತುತ್ತಿರುವ ಧಾರ್ಮಿಕ ಅಸಹನೆಯನ್ನು ರಾಜಕೀಯ ಮತ್ತು ಸಾಮಾಜಿಕ ಪರಿಸರದಿಂದ ಹೊರಹಾಕುವ ಅನಿವಾರ್ಯವಿದೆ ಎಂದು ಹಿರಿಯ ಚಿಂತಕ ಪ್ರೊ.ಕೆ.ಮರುಳಸಿದ್ದಪ್ಪ ತಿಳಿಸಿದ್ದಾರೆ. ಶುಕ್ರವಾರ ನಗರದ ಕಸಾಪದಲ್ಲಿ ವಿವಿಧ ಜನಪರ ಸಂಘಟನೆಗಳು ಆಯೋಜಿಸಿದ್ದ ಹಿರಿಯ ಸಂಶೋಧಕ ‘ಎಂ.ಎಂ.ಕಲಬುರ್ಗಿ ಒಂದು ನೆನಪು’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಪರೋಹಿತಶಾಹಿ ವರ್ಗದ ವಿರುದ್ಧ ಅಭಿ ಪ್ರಾಯ ಮತ್ತು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ಮುನ್ನ, ಮುಂದಾಗುವ ಹಲ್ಲೆ ಮತ್ತು ದೌರ್ಜನ್ಯಗಳಿಗೂ ಸಿದ್ದರಾಗಲೇಬೇಕು. ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ ಪನ್ಸಾರೆ, ಡಾ.ಎಂ.ಎಂ.ಕಲಬುರ್ಗಿಯವರ ಹತ್ಯಗಳ ಹಿಂದೆ ಧಾರ್ಮಿಕ ಅಸಹನೆಯಿದೆ ಎಂದರು.
ಎಂ.ಎಂ.ಕಲಬುರ್ಗಿಯವರ ಅಭಿಪ್ರಾಯಗಳು ನಿಷ್ಠುರಕ್ಕೆ ಗುರಿಯಾಗಿದ್ದವು. ಈ ಪರಿಣಾಮ ಹಲವು ಬಾರಿ ಅವರ ಮೇಲೆ ಹಲ್ಲೆ ನಡೆದಿದ್ದವು. ಇದೇ ಕಾರಣಕ್ಕೆ ಕೋಮು ವಾದಿಗಳ ಗುಂಡೇಟಿಗೆ ಬಲಿಯಾದರು. ದೇಶದಲ್ಲಿ ಎರಡು ವರ್ಷಗಳಲ್ಲಿ ಸಂಭವಿಸಿರುವ ಅಭಿವ್ಯಕ್ತಿ ಸ್ವಾತಂತ್ರದ ಮೇಲಿನ ಹಲ್ಲೆಗಳು ಸಹಿಸುವಂತಹದ್ದಲ್ಲ ಎಂದರು.
 ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಮಾತನಾಡಿ, ಎಂ.ಎಂ.ಕಲಬುರ್ಗಿಯವರ ಕೊಲೆ ಕನ್ನಡ ಸಾಹಿತ್ಯ ಚರಿತ್ರೆಗೆ ಕಳಂಕ ತಂದಿದೆ. ಇವರ ಕೊಲೆಯ ಹಿಂದೆ ಮತೀಯ, ಜಾತೀಯವಾದಿಗಳ ಕೈವಾಡವಿದೆ. ಅಲ್ಲದೆ ಕಲಬುರ್ಗಿ, ದಾಭೋಲ್ಕರ್, ಪನ್ಸಾರೆಯವರ ಕೊಲೆಯಲ್ಲಿ ಸಾಮ್ಯತೆಯಿದೆ. ಒಂದು ವರ್ಷ ಕಳೆದರೂ ಡಾ.ಎಂ.ಎಂ. ಕಲಬುರ್ಗಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಸಿಐಡಿ ವಿಫಲವಾಗಿದೆ ಅಸಮಾಧಾನ ವ್ಯಕ್ತಪಡಿಸಿದರು.
ತನ್ನ ಒಳಗಿನ ಸತ್ಯಶೋಧಕವನ್ನು ಹೇಳಬೇಕು ಎಂದು ಹಠಕ್ಕೆ ಬಿದ್ದಾಗ ಕಲಬುರ್ಗಿ ಕೊಲೆಯಾಗಿ ಹೋದರು. ಈ ಕೊಲೆಯ ಹಿಂದೆ ವೀರಶೈವರ ಕೈವಾಡವಿದೆ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಕೊಲೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಹೊತ್ತಿರುವ ಸಿಐಡಿ ತಂಡ ಕೂಡಲೇ ಕೊಲೆಗಡುಕರನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ತಾತ್ವಿಕ ಮುಕ್ತಾಯ ಹಾಡಬೇಕು ಎಂದು ಆಗ್ರಹಿಸಿದರು.
 ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತ ನಾಡಿ, ಎಂ.ಎಂ.ಕಲಬುರ್ಗಿಯವರು ನಿಜವಾದ ಹೆಸರಿನಲ್ಲಿ ನಾಡೋಜ. ಕನ್ನಡವನ್ನು ಬೆಳೆಸಿದ ಮಹಾನ್ ವಿದ್ವಾಂಸ. ಆದರೆ ಇವರು ರಣ ಹೇಡಿಗಳಿಗೆ ಜೀವತೆತ್ತರು ಎಂದು ನೋವಿನಿಂದ ನುಡಿದರು.
ಕಾರ್ಯಕ್ರಮದಲ್ಲಿ ಎಂ.ಎಂ .ಕಲಬುರ್ಗಿಯವರ ಹತ್ಯೆಯನ್ನು ಖಂಡಿಸಿ ಆ.30ರಂದು ಧಾರವಾಡದಲ್ಲಿ ವೌನ ಮೆರವಣಿಗೆ ನಡೆಸಲು ಸಭಿಕರು ನಿರ್ಧರಿಸಿದರು. ಈ ವೇಳೆ ಚಿಂತಕರಾದ ಡಾ.ಬಿ.ಟಿ.ಲಲಿತಾ ನಾಯಕ್, ಇಂದಿರಾ ಕೃಷ್ಣಪ್ಪ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಟಿಪ್ಪು ಸುಲ್ತಾನ್ ಫ್ರಂಟ್‌ನ ಅಧ್ಯಕ್ಷ ಸರ್ದಾರ್ ಅಹ್ಮದ್ ಖುರೇಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X