Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ, ಪಾರಿಕ್ಕರ್ ರಾಜೀನಾಮೆಗೆ ಆಗ್ರಹ

ಮೋದಿ, ಪಾರಿಕ್ಕರ್ ರಾಜೀನಾಮೆಗೆ ಆಗ್ರಹ

ರಕ್ಷಣಾ ಇಲಾಖೆ ‘ಸ್ಕಾರ್ಪಿನ್’ ಮಾಹಿತಿ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ26 Aug 2016 10:48 PM IST
share
ಮೋದಿ, ಪಾರಿಕ್ಕರ್ ರಾಜೀನಾಮೆಗೆ ಆಗ್ರಹ

ಬೆಂಗಳೂರು, ಆ. 26: ರಕ್ಷಣಾ ಇಲಾಖೆ ‘ಸ್ಕಾರ್ಪಿನ್ ಯೋಜನೆ’ಯ ಮಹತ್ವದ ಮಾಹಿತಿ ಸೋರಿಕೆ ಯಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ, ರಕ್ಷಣಾ ಸಚಿವ ಪಾರಿಕ್ಕರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮೇಲ್ಮನೆ ಸದಸ್ಯ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಭಕ್ತಿ, ರಾಷ್ಟ್ರೀಯತೆಯ ಗುತ್ತಿಗೆದಾರರಂತೆ ವರ್ತಿಸುವ ಸಂಘ ಪರಿವಾರದವರು ಎಲ್ಲಿದ್ದಾರೋ ಗೊತ್ತಾಗುತ್ತಿಲ್ಲ. ದೇಶದ ರಕ್ಷಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ನಿಜಕ್ಕೂ ಆಘಾತಕಾರಿ ಎಂದು ಹೇಳಿದರು.
24ಸಾವಿರ ಕೋಟಿ ರೂ.ವೆಚ್ಚದಲ್ಲಿ ಫಾನ್ಸ್ ಡಿಸಿಎನ್‌ಎಸ್ ಸಹಭಾಗಿತ್ವದಲ್ಲಿ ಕೈಗೊಂಡಿದ್ದ ‘ಸ್ಕಾರ್ಪಿನ್ ಯೋಜನೆ’ಯ ಮಹತ್ವದ ಮಾಹಿತಿ ಚೀನಾಕ್ಕೆ ದೊರೆತಿದೆ ಎಂಬ ಸಂಶಯವಿದೆ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಈ ಪ್ರಕರಣವನ್ನು ಮುಚ್ಚಿ ಹಾಕಲು ಕೇಂದ್ರ ಸರಕಾರ ಹುನ್ನಾರ ನಡೆಸಿದೆ ಎಂದರು.
ಪಠಾಣ್ ಕೋಟ್ ಮೇಲಿನ ಉಗ್ರರ ದಾಳಿ ಪ್ರಕರಣವನ್ನು ರಕ್ಷಣಾ ಸಚಿವರು ಸೂಕ್ತ ರೀತಿಯಲ್ಲಿ ನಿರ್ವಹಿಸಲಿಲ್ಲ. ಕಾಶ್ಮೀರ ವಿಚಾರದಲ್ಲಿಯೂ ಕೇಂದ್ರ ಸರಕಾರ ದ್ವಂದ್ವ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ರಕ್ಷಣಾ ಮಾಹಿತಿ ಸೋರಿಕೆ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ನಕಲಿ ದೇಶಭಕ್ತಿ: ‘ಆಮ್ನೆಸ್ಟಿ’ ಇಂಟರ್ ನ್ಯಾಷನಲ್ ಏರ್ಪಡಿಸಿದ್ದ ಸಂವಾದದಲ್ಲಿ ‘ಆಝಾದಿ’ ಘೋಷಣೆ ನೆಪದಲ್ಲಿ ಹೋರಾಟ ಕೈಗೊಂಡಿದ್ದ ಎಬಿವಿಪಿ, ದೇಶದ ರಕ್ಷಣಾ ಮಾಹಿತಿ ಸೋರಿಕೆಯ ಬಗ್ಗೆ ವೌನ ವಹಿಸಿರು ವುದೇಕೆ ಎಂದು ಪ್ರಶ್ನಿಸಿದ ಅವರು, ನಕಲಿ ದೇಶಭಕ್ತಿಯನ್ನು ಮೊದಲು ನಿಲ್ಲಿಸಬೇಕು ಎಂದು ವ್ಯಂಗ್ಯವಾಡಿದರು.
ಹಠಮಾರಿ ಧೋರಣೆ ಸಲ್ಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಆ ಭಾಗದ ಎಲ್ಲ ಜಲಾಶಯಗಳಲ್ಲಿ ನೀರಿಲ್ಲ. ಆದುದರಿಂದ ತಮಿಳುನಾಡಿನ ‘ನೀರು ಬಿಡಲೇಬೇಕು’ ಎಂಬ ಹಠಮಾರಿ ಧೋರಣೆ ಸರಿಯಲ್ಲ ಎಂದು ಉಗ್ರಪ್ಪ ಆಕ್ಷೇಪಿಸಿದರು.
ಕೆಆರ್‌ಎಸ್, ಹಾರಂಗಿ, ಕಬಿನಿ ಹಾಗೂ ಹೇಮಾವತಿ ಸೇರಿ ಒಟ್ಟು 63 ಟಿಎಂಸಿ ನೀರಿದ್ದು, ಆ ಪೈಕಿ ಕೇವಲ 39 ಟಿಎಂಸಿಯಷ್ಟು ನೀರನ್ನು ಬಳಕೆ ಮಾಡಿಕೊಳ್ಳಬಹುದು. ವಾಸ್ತವ ಸ್ಥಿತಿ ಹೀಗಿರುವಾಗ ತಮಿಳುನಾಡು 50 ಟಿಎಂಸಿ ನೀರು ಕೇಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಆ ಭಾಗದ ನೂರಾರು ಹಳ್ಳಿಗಳಿಗೆ ಕುಡಿಯಲು 30ಟಿಎಂಸಿ ನೀರು ಬೇಕು ಎಂದ ಅವರು, ನೆಲ-ಜಲದ ವಿಚಾರದಲ್ಲಿ ಯಾವುದೇ ಪಕ್ಷ ರಾಜಕೀಯ ಮಾಡುವುದು ಯಾರಿಗೂ ಶೋಭೆಯಲ್ಲ ಎಂದು ಪರೋಕ್ಷವಾಗಿ ಕುಮಾರಸ್ವಾಮಿಯನ್ನು ಟೀಕಿಸಿದರು.
ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿ ಕೊಡಲು ಕರ್ನಾಟಕ ಸರಕಾರ ದೊಂದಿಗೆ ಕೇಂದ್ರ ಸರಕಾರವೂ ಕೈಜೋಡಿಸಬೇಕು. ಕೆಂದ್ರ ಸರಕಾರ ಜವಾಬ್ದಾರಿ ಇದೆ ಎಂದ ಅವರು, ಮಳೆ ಆಗುವವರೆಗೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದರು.

‘ಸಂಘ ಪರಿವಾರದ ನಕಲಿ ದೇಶಭಕ್ತರಿಗೆ ಸತ್ಯವನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಹೀಗಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಪ್ರಧಾನಿ ಮೋದಿಯವರು, ನವಾಝ್ ಶರೀಫ್ ಹುಟ್ಟುಹಬ್ಬದ ನಿಮಿತ್ತ ಪಾಕಿಸ್ತಾನಕ್ಕೆ ಭೇಟಿ ನೀಡಿದ ಬಳಿಕ ಅವರು ಟ್ವಿಟರ್‌ನಲ್ಲಿ ಏನೆಲ್ಲ ಹೇಳಿದ್ದಾರೆಂಬುದನ್ನು ನೋಡಿ ರಮ್ಯಾ ವಿರುದ್ಧ ಪ್ರತಿಭಟನೆ ಮಾಡಲಿ’
-ವಿ.ಎಸ್.ಉಗ್ರಪ್ಪ, ಮೇಲ್ಮನೆ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X