Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಚಿನ್ನಾಭರಣ ದರೋಡೆಗೈಯಲು...

ಉಪ್ಪಿನಂಗಡಿ: ಚಿನ್ನಾಭರಣ ದರೋಡೆಗೈಯಲು ಬಂದವರು ಚಿಲ್ಲರೆ ಹಣದೊಂದಿಗೆ ಪರಾರಿಯಾದರು

ವಾರ್ತಾಭಾರತಿವಾರ್ತಾಭಾರತಿ26 Aug 2016 11:17 PM IST
share
ಉಪ್ಪಿನಂಗಡಿ: ಚಿನ್ನಾಭರಣ ದರೋಡೆಗೈಯಲು ಬಂದವರು ಚಿಲ್ಲರೆ ಹಣದೊಂದಿಗೆ ಪರಾರಿಯಾದರು

ಉಪ್ಪಿನಂಗಡಿ, ಆ.26: ಇಲ್ಲಿನ ರಾಮನಗರದ ಜನವಸತಿ ಪ್ರದೇಶದಲ್ಲಿರುವ ಮನೆಗೆ ಹಾಡಹಗಲೇ ನುಗ್ಗಿರುವ ಕಳ್ಳರು ಚಿನ್ನಾಭರಣಕ್ಕಾಗಿ ಹುಡುಕಾಡಿ ಅದು ಸಿಗದಿದ್ದಾಗ ಕಾಣಿಕೆ ಡಬ್ಬಿಯಲ್ಲಿದ್ದ ಚಿಲ್ಲರೆ ಹಣದೊಂದಿಗೆ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.

ರಾಮನಗರದ ಜನತಾ ಕಾಲನಿ ನಿವಾಸಿ ಅಚ್ಯುತ ಪಡಿಯಾರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಅಚ್ಯುತ ಪಡಿಯಾರ್ ಉದ್ಯಮಿಯಾಗಿದ್ದು, ಉಪ್ಪಿನಂಗಡಿಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ. ಶುಕ್ರವಾರ ಕೂಡಾ ಎಂದಿನಂತೆ ತನ್ನ ಅಂಗಡಿಗೆ ತೆರಳಿದ್ದಾರೆ. ಪತಿಗೆ ವ್ಯವಹಾರದಲ್ಲಿ ಸಹಕರಿಸಲೆಂದು ಪೂರ್ವಾಹ್ನ 11ಗಂಟೆಗೆ ಎಂದಿನಂತೆ ಅಚ್ಯುತ ಪಡಿಯಾರ್ ಅವರ ಪತ್ನಿ ಕೂಡಾ ಪತಿಯ ಅಂಗಡಿಗೆ ತೆರಳಿದ್ದಾರೆ. ಆದರೆ ಮಧ್ಯಾಹ್ನ ಎರಡರ ಸುಮಾರಿಗೆ ಅವರು ಮನೆಗೆ ಬಂದು ನೋಡುವಾಗ ಕಳ್ಳತನ ವಿಷಯ ಬೆಳಕಿಗೆ ಬಂದಿದೆ.

ಕೀಲಿ ಕೈ ತೆಗೆದೇ ಪ್ರವೇಶಿಸಿದ್ದರು !

ಈ ಮನೆಗೆ ಮುಂಭಾಗವೇ ಎರಡು ಬಾಗಿಲಿದ್ದು, ಇವರು ಯಾವಾಗಲು ಮನೆಯಿಂದ ಹೋಗುವಾಗ ಪ್ರಧಾನ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಿ ಬಳಿಕ ಎರಡನೆ ಬಾಗಿಲಿಗೆ ಬೀಗ ಹಾಕಿ ತೆರಳುತ್ತಿದ್ದರು. ಅಲ್ಲದೇ, ಕೀಲಿ ಕೈಯನ್ನು ಮನೆ ಬದಿಯಲ್ಲಿಯೇ ಇರುವ ಸ್ನಾನಗೃಹದಲ್ಲಿರುವ ಸಾಬೂನು ಪೆಟ್ಟಿಯಲ್ಲಿ ಅಡಗಿಸಿಡುತ್ತಿದ್ದರು. ಇವರ ಮನೆಗೆ ನುಗ್ಗಿದ ಕಳ್ಳರು ಕೂಡಾ ಇವರು ಸ್ನಾನ ಗೃಹದಲ್ಲಿ ಅಡಗಿಸಿಟ್ಟಿರುವ ಕೀಲಿಕೈಯನ್ನು ತೆಗೆದು ಮನೆಯ ಬೀಗ ತೆಗೆದು ಒಳ ಪ್ರವೇಶಿಸಿದ್ದು, ಮನೆಯಲ್ಲಿದ್ದ ಮೂರು ಕಪಾಟುಗಳನ್ನು ಜಾಲಾಡಿ, ಚೆಲ್ಲಾಪಿಲ್ಲಿಯಾಗಿಸಿದ್ದರು. ಅಲ್ಲದೇ, ಮಂಚದ ಮೇಲೆ ಹಾಸಲಾಗಿದ್ದ ಹಾಸಿಗೆಯನ್ನು ಎತ್ತಿ ಕೂಡಾ ನೋಡಿದ್ದರು. ಆದರೆ ಅಲ್ಲೇನು ಸಿಗದಿದ್ದಾಗ ದೇವರ ಕೋಣೆಗೆ ನುಗ್ಗಿದ ಕಳ್ಳರು ಅಲ್ಲಿದ್ದ ಶ್ರೀ ಗಣೇಶೋತ್ಸವ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಚಿಲ್ಲರೆಯನ್ನು ಕದ್ದಿದ್ದಾರೆ. ಹೋಗುವಾಗ ತಾವು ತಂದಿದ್ದ ಕತ್ತಿಯನ್ನು ಸೋಪಾದ ಮೇಲಿಟ್ಟು ಪ್ರಧಾನ ಬಾಗಿಲಿನ ಚಿಲಕವನ್ನು ಒಳಗಿನಿಂದ ತೆಗೆದು ಆ ಮೂಲಕ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X