Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಶಕ್ತ ಜನಪದ ಕಲಾವಿದರಿಗೆ ಮಾಸಾಶನ...

ಅಶಕ್ತ ಜನಪದ ಕಲಾವಿದರಿಗೆ ಮಾಸಾಶನ ಅಗತ್ಯ:ಕೋಟ

‘ಕೋಲು ಹೊಯ್ಯುವ ಪದಗಳು’ ದಾಖಲಾತಿ ಕಮ್ಮಟ

ವಾರ್ತಾಭಾರತಿವಾರ್ತಾಭಾರತಿ27 Aug 2016 7:14 PM IST
share
ಅಶಕ್ತ ಜನಪದ ಕಲಾವಿದರಿಗೆ ಮಾಸಾಶನ ಅಗತ್ಯ:ಕೋಟ

ಮಂದಾರ್ತಿ, ಆ.27: ನಮ್ಮ ಗ್ರಾಮೀಣ ಭಾಗಗಳಲ್ಲಿ ಈಗಲೂ ಸಾಕಷ್ಟು ಮಂದಿ ಜನಪದ ಕಲಾವಿದರು ಇದ್ದಾರೆ. ಅಂಥವರನ್ನು ಗುರುತಿಸುವ ಕೆಲಸ ವಾಗಬೇಕು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಮುಗ್ಧ ಅಶಕ್ತ ಕಲಾವಿದರಿಗೆ ಮಾಸಾಶನ ಸಿಗುವಂತಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರು ಆಕಾಶವಾಣಿ, ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸಹಯೋಗದೊಂದಿಗೆ ಮಂದಾರ್ತಿ ದುರ್ಗಾಪರಮೇಶ್ವರಿ ದೇವಳದ ಸಭಾಭವನದಲ್ಲಿ ಆಯೋಜಿಸಿದ ಕುಂದಗನ್ನಡದ ಹಾಡುಗಬ್ಬ ‘ಕೋಲು ಹೊಯ್ಯುವ ಪದಗಳು’ ಕುರಿತ ಎರಡು ದಿನಗಳ ದಾಖಲಾತಿ ಕಮ್ಮಟವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಭಾವನೆಗಳನ್ನು, ಸೌಹಾರ್ದ ಮತ್ತು ಸಾಮರಸ್ಯದ ಬದುಕನ್ನು ಆಡು ಭಾಷೆಯ ಮೂಲಕ ತಿಳಿಸುವಂತೆ ಮಾಡುವ ಇಂತಹ ಮುಗ್ಧ ಕಲಾವಿದರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಂದುಹೋದ ಇತಿಹಾಸದ ಕಟ್ಟಕಡೆಯ ಪಳೆಯುಳಿಕೆಯಂತಿರುವ ಇಂಥ ಜಾನಪದ ಸಾಹಿತ್ಯಗಳ ದಾಖಲಾತಿ ಮಾಡಿ ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ತುರ್ತಾಗಿ ಆಗಬೇಕು. ಇಂಥ ಕಾರ್ಯಕ್ಕೆ ಮುಂದಾದ ಆಕಾಶವಾಣಿಯ ಕಾರ್ಯಕ್ರಮ ಅಭಿನಂದನಾರ್ಹ ಎಂದು ಮಾಜಿ ಸಚಿವರು ಹೇಳಿದರು.

ಅರಿವು ಅಗತ್ಯ:

ನಮ್ಮ ಇತಿಹಾಸ, ಚರಿತ್ರೆಯ ಬಗ್ಗೆ ತಿಳಿಯದೇ ಇದ್ದರೆ ಚಾರಿತ್ರಹೀನ ಸಮಾಜ ಸಷಿಯಾಗುತ್ತದೆ. ಆದ್ದರಿಂದ ಚರಿತ್ರೆಯನ್ನು ತಿಳಿಸುವ ಜಾನಪದ ಸಾಹಿತ್ಯಗಳನ್ನು ದಾಖಲಾತಿ ಮಾಡಿ ಉಳಿಸುವಂತಾಗಬೇಕು ಎಂದು ಮಂಗಳೂರು ವಿವಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಉದಯ ಬಾರ್ಕೂರು ಹೇಳಿದರು.

ಕಾರ್ಯಕ್ರಮದಲ್ಲಿ ‘ಚರಿತ್ರೆ ಮತ್ತು ಚಾರಿತ್ರ’ ವಿಷಯದ ಕುರಿತು ಉಪನ್ಯಾಸ ನೀಡಿದ ಡಾ.ಬಾರ್ಕೂರು, ಯುವ ಜನಾಂಗ ಜಾನಪದ ಇತಿಹಾಸ ತಿಳಿಸುವ ಸಂಸ್ಕಾರಯುತ ಬದುಕನ್ನು ಕಟ್ಟುವ ಇಂತಹ ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸಲು ಮುಂದೆ ಬರಬೇಕು ಎಂದರು.

ಮಂಗಳೂರು ಆಕಾಶವಾಣಿಯಕಾರ್ಯಕ್ರಮ ಮುಖ್ಯಸ್ಥ ಹಾಗೂ ಸಹಾಯಕ ನಿಲಯ ನಿರ್ದೇಶಕ ಸಡಾ.ವಸಂತಕುಮಾರ ಪೆರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್.ಧನಂಜಯ ಶೆಟ್ಟಿ, ಸಮಿತಿ ಸದಸ್ಯ ಗೋಪಾಲ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಮಂಗಳೂರು ಆಕಾಶವಾಣಿಯ ಡಾ. ಸದಾನಂದ ಪೆರ್ಲ ಸ್ವಾಗತಿಸಿ, ನಿರ್ವಾಹಕ ದೇವು ಹನೆಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X