Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜನಾಡಿಯಿಂದ ಅಪಹರಣಕ್ಕೊಳಗಾಗಿದ್ದ ಯುವಕ...

ಮಂಜನಾಡಿಯಿಂದ ಅಪಹರಣಕ್ಕೊಳಗಾಗಿದ್ದ ಯುವಕ ಕೊಣಾಜೆ ಠಾಣೆಗೆ ಹಾಜರು

ವಾರ್ತಾಭಾರತಿವಾರ್ತಾಭಾರತಿ27 Aug 2016 7:36 PM IST
share
ಮಂಜನಾಡಿಯಿಂದ ಅಪಹರಣಕ್ಕೊಳಗಾಗಿದ್ದ ಯುವಕ ಕೊಣಾಜೆ ಠಾಣೆಗೆ ಹಾಜರು

ಕೊಣಾಜೆ, ಆ.27: ವಿದೇಶದಿಂದ ಕಳೆದ ಕೆಲ ತಿಂಗಳ ಹಿಂದೆ ಊರಿಗೆ ಬಂದು ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ಅಪಹರಣ ಪ್ರಕರಣವು ತಿರುವು ಪಡೆದಿದ್ದು ಅಪಹರಣಕ್ಕೊಳಗಾದ ಮಂಜನಾಡಿ ಕಲ್ಕಟ್ಟ ನಿವಾಸಿ ಆರೀಫ್ (24) ಕೊಣಾಜೆ ಠಾಣೆಗೆ ಹಾಜರಾಗಿ ಪ್ರಕರಣದ ಮಾಹಿತಿ ನೀಡಿದ್ದಾರೆ.
ಅಪಹರಣಕಾರರೇ ಬಸ್ಸಿಗೆ ಹಣ ನೀಡಿ ಸುಳ್ಯ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆಂದು ಕೊಣಾಜೆ ಪೊಲೀಸ್ ಠಾಣೆಗೆ ಬಂದಿರುವ ಆರೀಫ್ ಪೊಲೀಸರಲ್ಲಿ ತಿಳಿಸಿದ್ದಾರೆ.

ವಿದೇಶದಲ್ಲಿ ಕೆಲಸದಲ್ಲಿದ್ದ ಆರೀಪ್ ಕೆಲ ತಿಂಗಳುಗಳ ಹಿಂದೆ ಊರಿಗೆ ವಾಪಸಾಗಿದ್ದರು. ನಂತರ ಮೀನಿನ ವ್ಯಾಪಾರ ಆರಂಭಿಸಿದ್ದ ಆರೀಫ್ ಚೆಂಬುಗುಡ್ಡೆ ಸಮೀಪ ಮೀನು ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದರು. ಕೆಲದಿನಗಳ ಹಿಂದೆ ಮಂಜನಾಡಿಯಿಂದ ಮಂಗಳೂರಿನ ದಕ್ಕೆಗೆ ತೆರಳುವ ಸಂದರ್ಭ ಸ್ಕಾರ್ಪಿಯೋ ವಾಹನದಲ್ಲಿ ಬಂದಿದ್ದ ತಂಡ ನಸುಕಿನ ಜಾವ ಕಲ್ಕಟ್ಟದಿಂದ ಅಪಹರಿಸಿತ್ತು. ಬಳಿಕ ಮನೆ ಮಂದಿಗೆ ವಿದೇಶದ ದೂರವಾಣಿ ಸಂಖ್ಯೆ ಮೂಲಕ ಬಂದ ಕರೆಯ ಮೂಲಕ 1.5 ಕೋಟಿ ರೂ.ಗೆ ಬೇಡಿಕೆ ಇಡಲಾಗಿತ್ತು. ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಅಪಹರಣಕಾರರು ಹಾಕಿದ್ದರು. ಅದರಂತೆ ಮನೆಮಂದಿ ಬೆದರಿ 25 ಲಕ್ಷ ರೂ. ಕೊಡುವ ವಿಶ್ವಾಸ ನೀಡಿದರೂ ಅಪಹರಣಕಾರರು ಒಪ್ಪಿರಲಿಲ್ಲ. ಇದರಿಂದ ದಾರಿ ಕಾಣದ ಕುಟುಂಬ ತಡವಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಈ ವೇಳೆ ಉಪ್ಪಿನಂಗಡಿಯ ಹಾಗೂ ಕಾಸರಗೋಡಿನ ಮೂಲದ ವ್ಯಕ್ತಿಗಳ ತಂಡ ಅಪಹರಿಸಿರುವುದಾಗಿ ತಿಳಿಸಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಕೊಣಾಜೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದರೂ ಪ್ರಯೋಜನವಾಗಿರಲಿಲ್ಲ. ಈ ನಡುವೆ ಗುರುವಾರ ಏಕಾಏಕಿ ಆರಿಫ್ ಕೊಣಾಜೆ ಠಾಣೆಗೆ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಆರೀಪ್ ವಿದೇಶದಲ್ಲಿರುವ ಸಂದರ್ಭ 40,00,000 ರೂ.ನಷ್ಟು ನಗದನ್ನು ಪರಿಚಯದ ಮೇರೆಗೆ ಪಡೆದುಕೊಂಡಿದ್ದರು. ಆದರೆ, ಅದನ್ನು ವಾಪಸ್ಸು ಮಾಡದೇ ಊರಿಗೆ ಮರಳಿದ್ದರು ಎನ್ನಲಾಗಿದ್ದು, ನೀಡಿದ ಹಣ ಪಡೆಯಲೆಂದೇ ತಂಡ ಅಪಹರಿಸಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ. ಅಪಹರಣಕಾರರು ಆರಿಫ್‌ರನ್ನು ತಮಿಳುನಾಡಿಗೆ ಕರೆದೊಯ್ದು ಅಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಇರಿಸಿದ್ದಾರೆಂದು ಆರಿಫ್ ಪೊಲೀಸರಿಗೆ ತಿಳಿಸಿದ್ದರೂ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ ಎನ್ನಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X