Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದ ಕುಖ್ಯಾತ ರೌಡಿಗಳು...

ಶಿವಮೊಗ್ಗದ ಕುಖ್ಯಾತ ರೌಡಿಗಳು ವಿದೇಶದಲ್ಲಿ !

ಹೆಬ್ಬೆಟ್ಟು ಮಂಜ ಸೇರಿ ನಾಲ್ವರ ವಿರುದ್ಧ ರೆಡ್ ಕಾರ್ನರ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ27 Aug 2016 10:12 PM IST
share

ಶಿವಮೊಗ್ಗ, ಆ.27: ಶಿವಮೊಗ್ಗದ ಕುಖ್ಯಾತ ರೌಡಿ, ಪ್ರಸ್ತುತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹೆಬ್ಬೆಟ್ಟು ಮಂಜ ಸೇರಿದಂತೆ ರಾಜ್ಯಕ್ಕೆ ಸೇರಿದ ನಾಲ್ವರು ಭೂಗತ ಪಾತಕಿಗಳ ಬಂಧನಕ್ಕೆ ಮತ್ತೆ ಹೊಸದಾಗಿ ಇಂಟರ್‌ಪೋಲ್ ಸಂಸ್ಥೆಯು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ.

ಇಂಟರ್‌ಪೋಲ್ ಮೂಲಕ ಬೆಂಗಳೂರಿನ ಅಪರಾಧ ಪತ್ತೆ ದಳ ಪೊಲೀಸ(ಸಿಸಿಬಿ)ರು ಈ ನಾಲ್ವರು ಪಾತಕಿಗಳ ಬಂಧನಕ್ಕೆ ಕಾರ್ಯತಂತ್ರ ರೂಪಿಸಿರುವ ಮಾಹಿತಿ ಬೆಳಕಿಗೆ ಬಂದಿದೆ.

ಹೆಬ್ಬೆಟ್ಟು ಮಂಜನ ಜೊತೆಗೆ ಕಲಿ ಯೋಗೀಶ್, ರವಿ ಪೂಜಾರಿ ಹಾಗೂ ಕೊರಗ ವಿಶ್ವನಾಥ ಶೆಟ್ಟಿ ರೆಡ್ ಕಾರ್ನರ್ ನೋಟಿಸ್ ಜಾರಿಯಾದ ಭೂಗತ ಪಾತಕಿಗಳೆಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳ ಹಿಂದೆಯೇ ಈ ಎಲ್ಲ ಪಾತಕಿಗಳು ದೇಶ ತೊರೆದಿದ್ದಾರೆ. ಪ್ರಸ್ತುತ ದುಬೈ, ಕೀನ್ಯ, ಆಸ್ಟ್ರೇಲಿಯ, ಬ್ಯಾಂಕಾಕ್ ಸೇರಿದಂತೆ ನಾನಾ ದೇಶಗಳಲ್ಲಿ ಓಡಾಡಿಕೊಂಡಿದ್ದಾರೆ. ಕೊಲೆ, ಕೊಲೆಯತ್ನ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ನಾನಾ ರೀತಿಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಈ ಪಾತಕಿಗಳು ಕರ್ನಾಟಕ ಪೊಲೀಸರಿಗೆ ಬೇಕಾಗಿದ್ದಾರೆ. ಕಳೆದ ಕೆಲ ವರ್ಷಗಳ ಹಿಂದೆಯೇ ಈ ಪಾತಕಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿತ್ತು. ಆದರೆ ಪಾತಕಿಗಳ ಇತ್ತೀಚಿನ ಚಲನವಲನಗಳ ಬಗ್ಗೆ ಪೊಲೀಸರು ಇಂಟರ್‌ಪೋಲ್ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಇದೀಗ ಈ ಪಾತಕಿಗಳ ಇತ್ತೀಚಿನ ಚಲನವಲನಗಳ ಸಮಗ್ರ ಮಾಹಿತಿ, ಬಳಕೆ ಮಾಡುತ್ತಿರುವ ಪಾಸ್‌ಪೋರ್ಟ್, ಸ್ಯಾಟಲೈಟ್ ಫೋನ್, ಎರಡೂ ಕೈಗಳ 10 ಬೆರಳುಗಳ ಫಿಂಗರ್‌ಪ್ರಿಂಟ್ ಮಾಹಿತಿ ಸೇರಿದಂತೆ ಅವರ ಬಂಧನಕ್ಕೆ ಅಗತ್ಯವಾದ ಎಲ್ಲ ರೀತಿಯ ತಾಂತ್ರಿಕ ವಿವರಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಇತ್ತೀಚೆಗೆ ದಿಲ್ಲಿಯಲ್ಲಿರುವ ಸಿಬಿಐ ಕೇಂದ್ರ ಕಚೇರಿಗೆ ತಲುಪಿಸಿದ್ದರು. ಸಿಬಿಐ ಸಂಸ್ಥೆಯು ಈ ಾಹಿತಿಯನ್ನು ಇಂಟರ್‌ಪೋಲ್‌ಗೆ ರವಾನಿಸಿತ್ತು. ಇದರ ಆಧಾರದ ಮೇಲೆ ನಾಲ್ವರು ಆರೋಪಿಗಳ ವಿರುದ್ಧ ಮತ್ತೆ ಹೊಸದಾಗಿ ರೆಡ್ ಕಾರ್ನರ್ ನೋಟಿಸ್ ಾರಿಗೊಳಿಸುವ ಮೂಲಕ ಬಂಧನಕ್ಕೆ ಬೆಂಗಳೂರು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾ

ಜನನ್ನು ಇಂಟರ್‌ಪೋಲ್ ಪೊಲೀಸರ ಮೂಲಕ ಬಲೆಗೆ ಬೀಳಿಸಿಕೊಳ್ಳುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದರು. ಪಾಸ್‌ಪೋರ್ಟ್: ಶಿವಮೊಗ್ಗ ಭೂಗತ ಲೋಕದ ಕುಖ್ಯಾತ ರೌಡಿ ಹೆಬ್ಬೆಟ್ಟು ಮಂಜನು ಮಂಗಳೂರಿನಿಂದ ಪಾಸ್‌ಪೋರ್ಟ್ ಮಾಡಿಸಿದ್ದ. ಕುಖ್ಯಾತ ರೌಡಿ ಕೊರಂಗು ಕೃಷ್ಣನ ಮೇಲೆ ಹಿರಿಯೂರು ಬಳಿ ದಾಳಿ ನಡೆಸಿದ್ದ ಹೆಬ್ಬೆಟ್ಟು ವುಂಜನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ತದನಂತರ ಜಾಮೀನಿನ ಮೇಲೆ ಹೊರಬಂದ ಆರೋಪಿಯು ಎರಡು ವರ್ಷಗಳ ನಂತರ ಮುಂಬೈ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದ. ಹೆಬ್ಬೆಟ್ಟು ಮಂಜನ ವಿರುದ್ಧ ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ 13 ಕೇಸ್‌ಗಳು ದಾಖಲಾಗಿವೆ.

ಪಾತಕಿಗಳೊಂದಿಗೆ ಸಂಪರ್ಕದಲ್ಲಿರುವವರ ವಿವರ ಸಂಗ್ರಹ

: ಭೂಗತ ಪಾತಕಿಗಳು ಬೆಂಗಳೂರು ಹಾಗೂ ಕರ್ನಾಟಕದ ಇತರೆಡೆ ಹೊಂದಿರುವ ಸಂಪರ್ಕಗಳ ಸಮಗ್ರ ಮಾಹಿತಿಯನ್ನು ಸಿಸಿಬಿ ಪೊಲೀಸರು ಕಲೆ ಹಾಕಿದ್ದಾರೆ. ಸ್ಯಾಟಲೈಟ್‌ಫೋನ್ ಮೂಲಕ ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದರು ಎಂಬಿತ್ಯಾದಿ ವಿವರಗಳನ್ನು ಗುಪ್ತವಾಗಿ ಸಂಗ್ರಹಿಸಿದ್ದಾರೆ. ಇದು ಭೂಗತ ಪಾತಕಿಗಳೊಂದಿಗೆ ಸಂಪರ್ಕದಲ್ಲಿರುವವರಲ್ಲಿ ತಳಮಳ ಸೃಷ್ಟಿಸುವಂತೆ ಮಾಡಿದೆ. ಪಾತಕಿಗಳ ವಿರುದ್ಧ ಮತ್ತೆ ಹೊಸದಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿರುವುದರಿಂದ ಬಂಧನ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಏನಿದು ರೆಡ್ ಕಾರ್ನರ್ ನೋಟಿಸ್?

: ಇಂಟರ್‌ಪೋಲ್ ಎನ್ನುವುದು ಅಂತಾ ರಾಷ್ಟ್ರೀಯ ಮಟ್ಟದ ಪೊಲೀಸ್ ಸಂಸ್ಥೆ ಯಾಗಿದೆ. ಇದರಲ್ಲಿ ಭಾರತ ಸೇರಿದಂತೆ 190 ರಾಷ್ಟ್ರಗಳು ಸದಸ್ಯತ್ವ ಹೊಂದಿವೆ. ಅಪರಾಧ ಕೃತ್ಯ ಎಸಗಿ ಮತ್ತೊಂದು ರಾಷ್ಟ್ರಕ್ಕೆ ಪಲಾಯನ ಮಾಡಿದವರ ಬಂಧನದಲ್ಲಿ ಇಂಟರ್‌ಪೋಲ್ ಪೊಲೀಸರು ಮಹತ್ವದ ಪಾತ್ರವಹಿಸಲಿದ್ದಾರೆ. ಆಯಾ ರಾಷ್ಟ್ರ ನೀಡುವ ಮಾಹಿತಿಯ ಅನುಸಾರ ಈ ಸಂಸ್ಥೆಯು ಕ್ರಿಮಿನಲ್‌ಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುತ್ತದೆ. ಇದರಿಂದ ಬೇರೊಂದು ರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಸಹಕಾರಿಯಾಗಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X