Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರಿ ಭಾಷೆಯ ಕಲಿಕೆಗೆ ವ್ಯಾಕರಣ,...

ಬ್ಯಾರಿ ಭಾಷೆಯ ಕಲಿಕೆಗೆ ವ್ಯಾಕರಣ, ನಿಘಂಟು ಪೂರಕ: ಡಾ.ಬಿ.ಎ.ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ28 Aug 2016 6:42 PM IST
share
ಬ್ಯಾರಿ ಭಾಷೆಯ ಕಲಿಕೆಗೆ ವ್ಯಾಕರಣ, ನಿಘಂಟು ಪೂರಕ: ಡಾ.ಬಿ.ಎ.ವಿವೇಕ ರೈ

ಮಂಗಳೂರು, ಆ.28: ಬ್ಯಾರಿ ಭಾಷೆಯ ಕಲಿಕೆಗೆ ವ್ಯಾಕರಣ, ನಿಘಂಟು ಪೂರಕವಾಗಿದೆ. ಈ ನಿಟ್ಟಿನಲ್ಲಿಅಕಾಡೆಮಿಯ ಮೂಲಕ ಹಮ್ಮಿಕೊಂಡ ಕಾರ್ಯ ಮಹತ್ವದ್ದಾಗಿದೆ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ತಿಳಿಸಿದ್ದಾರೆ.

ಅವರು ಇಂದು ನಗರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಕಚೇರಿಯಲ್ಲಿ ಹಮ್ಮಿಕೊಂಡ ಬ್ಯಾರಿ ಭಾಷಾ ವ್ಯಾಕರಣ ರಚನೆಗೆ ಚಾಲನೆ ನೀಡಿ ಮಾತನಾಡಿದರು.

ಜನರಾಡುವ ಭಾಷೆಯಲ್ಲಿ ಭಾಷೆಯ ಸತ್ವ ಅಡಗಿದೆ. ಅದೇ ಭಾಷೆಯ ಜೀವ ಸತ್ವ. ಜನಸಾಮಾನ್ಯರು ವ್ಯಾಕರಣ ಓದದೆ ಭಾಷೆಯನ್ನು ಬಳಸುತ್ತಾರೆ.ಆದರೆ ಒಂದು ಭಾಷೆಯನ್ನು ಅಧಿಕೃತಗೊಳಿಸಲು ಹಾಗೂ ಮುಂದಿನ ದಿನಗಳಲ್ಲಿ ಇತರ ಭಾಷೆಗಳನ್ನಾಡುವವರು ಬ್ಯಾರಿ ಭಾಷೆಯನ್ನು ಕಲಿಯಬೇಕಾದರೆ ಅದಕ್ಕೊಂದು ಅಧಿಕೃತ ಸ್ವರೂಪ ಬೇಕಾಗುತ್ತದೆ. ಈ ಸ್ವರೂಪ ನೀಡಲು ವ್ಯಾಕರಣ, ನಿಘಂಟಿನ ರಚನೆಯ ಅಗತ್ಯವೂ ಇದೆ. ಉದಾಹರಣೆಗೆ ಇಂಗ್ಲೀಷ್ ಭಾಷೆಯ ಬೆಳವಣಿಗೆಗೆ ಆ ಭಾಷೆಯಲ್ಲಿ ರಚನೆಯಾದ ನಿಘಂಟು, ವ್ಯಾಕರಣ ಪ್ರಮುಖ ಕಾರಣವಾಯಿತು ಎಂದು ವಿವೇಕ ರೈ ತಿಳಿಸಿದರು.

ಸಚಿವ ರಮಾನಾಥ ರೈ ಶ್ಲಾಘನೆ

ಬ್ಯಾರಿಭಾಷಾ ಬೆಳವಣಿಗೆಗೆ ಸಂಬಂಧಿಸಿದಂತೆ ಅಕಾಡೆಮಿಯ ವತಿಯಿಂದ ನಿಘಂಟಿನ ರಚನೆ, ವ್ಯಾಕರಣ ರಚನೆ ಮೊದಲಾದ ಕೆಲಸಗಳನ್ನು ಭಾಷೆಯ ಬಗೆಗಿನ ಪ್ರೀತಿಯಿಂದ, ಕಾಳಜಿಯಿಂದ ಮಾಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. 

ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ತಯಾರಿಸಿರುವ ಬ್ಯಾರಿ -ಕನ್ನಡ ಭಾಷಾ ನಿಂಘಟಿನ 2ನೆ ಕರಡು ಪ್ರತಿಯನ್ನು ಅಕಾಡೆಮಿಯ ಸದಸ್ಯರಾದ ಬಿ.ಎಂ.ಇಚ್ಲಂಗೊಡು, ಸಂಶುದ್ದೀನ್ ಮಡಿಕೇರಿ ಹಾಗೂ ಇತರ ಸದಸ್ಯರು ಸಚಿವ ಬಿ. ರಮಾನಾಥ ರೈಗೆ ಹಸ್ತಾಂತರಿಸಿದರು.

ನಾಲ್ಕು ತಿಂಗಳ ಒಳಗೆ ಬ್ಯಾರಿ ಭಾಷಾ ವ್ಯಾಕರಣ ಪುಸ್ತಕ ರಚನೆ

ಮುಂದಿನ ನಾಲ್ಕು ತಿಂಗಳ ಒಳಗೆ ಬ್ಯಾರಿ ಭಾಷಾ ವ್ಯಾಕರಣ ಪುಸ್ತಕ ರಚನೆಯನ್ನು ಪೂರ್ಣಗೊಳಿಸಲಾಗುವುದು. ಬ್ಯಾರಿ ಅಕಾಡೆಮಿಯ ವತಿಯಿಂದ ಮುಂದಿನ ದಿನಗಳಲ್ಲಿ ಹಿರಿಯರೊಂದಿಗೆ ಸಂವಾದ ಕಾರ್ಯಕ್ರಮ, ರಾಜ್ಯ ಸಮ್ಮೇಳನ, ಅಕ್ಟೋಬರ್ 3ರಂದು ಬ್ಯಾರಿ ಭಾಷಾ ದಿನಾಚರಣೆ ಮಾಡಲಾಗುವುದು. ಬ್ಯಾರಿ ಭಾಷೆಯಲ್ಲಿ ಪಠ್ಯಪುಸ್ತಕ ರಚಿಸುವ ಉದ್ದೇಶವನ್ನು ಹೊಂದಲಾಗಿದೆ. ಮಂಗಳೂರು ಆಕಾಶವಾಣಿಯಿಂದ ಬ್ಯಾರಿ ಭಾಷಾ ಕಾರ್ಯಕ್ರಮಕ್ಕೆ ಆಕಾಶವಾಣಿಯ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಪ್ರಾಸ್ತಾವಿಕ ಮಾತುಗಳಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಸುರೇಂದ್ರ ರಾವ್, ಭಾಷೆ ಆಯಾ ಪ್ರದೇಶದ ಸಂಸ್ಕೃತಿಯೊಂದಿಗೆ ನಿಕಟವಾಗಿ ಬೆಳೆದು ಬಂದಿದೆ. ಈ ಸೂಕ್ಷ್ಮಗಳನ್ನು ನಿಘಂಟು ರಚನೆಯ ಸಂದರ್ಭದಲ್ಲಿ ಅರಿತುಕೊಳ್ಳಬೇಕಾಗಿದೆ ಎಂದರು.

ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿದರು.ಅಬ್ದುಲ್ಲತೀಫ್ ನೇರಳಕಟ್ಟೆ ವಂದಿಸಿದರು. ಮುಹಮ್ಮದ್ ಶರೀಫ್ ನಿರ್ಮುಂಜೆ ಕಾರ್ಯಕ್ರಮ ನಿರೂಪಿಸಿದರು. ಜೋಕಟ್ಟೆಯ ಅಂಜುಮಾನ್ ಪ.ಪೂ ಕಾಲೇಜಿನ ಸಂಚಾಲಕ ಮೂಸಬ್ಬ ಪಿ.ಬ್ಯಾರಿ, ಚಿಕ್ಕಮಗಳೂರು ಜಿಲ್ಲಾ ಬ್ಯಾರಿ ಒಕ್ಕೂಟದ ಅಧ್ಯಕ್ಷ ಕೆ.ಮುಹಮ್ಮದ್, ಮಾಜಿ ಮೇಯರ್ ಶಶಿಧರ ಹೆಗ್ಡೆ ಹಾಗೂ ಅಕಾಡೆಮಿಯ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X