Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದಲಾವಣೆಯತ್ತ ದಾಪುಗಾಲು ‘ಡಿಜಿಟಲ್...

ಬದಲಾವಣೆಯತ್ತ ದಾಪುಗಾಲು ‘ಡಿಜಿಟಲ್ ಕ್ಯಾಂಪ್ಕೊ’ ಯೋಜನೆ: ಎಸ್.ಆರ್ ಸತೀಶ್ಚಂದ್ರ

ವಾರ್ತಾಭಾರತಿವಾರ್ತಾಭಾರತಿ28 Aug 2016 7:56 PM IST
share
ಬದಲಾವಣೆಯತ್ತ ದಾಪುಗಾಲು ‘ಡಿಜಿಟಲ್ ಕ್ಯಾಂಪ್ಕೊ’ ಯೋಜನೆ: ಎಸ್.ಆರ್ ಸತೀಶ್ಚಂದ್ರ

ಪುತ್ತೂರು, ಆ.28: ಬದಲಾವಣೆಯನ್ನು ಇಡೀ ಜಗತ್ತು ಒಪ್ಪಿಕೊಂಡಿದ್ದು, ಮೊಬೈಲ್, ಸಾರಿಗೆ, ಮನೆಗಳ ನಿಮಾಣ, ಪೈಂಟಿಂಗ್, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ತರವಾದ ಬದಲಾವಣೆಗಳು ಕಂಡುಬರುತ್ತಿದೆ. ಕ್ಯಾಂಪ್ಕೊ ಸಂಸ್ಥೆಯು ಕೂಡ ಇದೇ ರೀತಿಯ ಬದಲಾವಣೆಯತ್ತ ದಾಪುಗಾಲು ಇಟ್ಟಿದ್ದು ’ಡಿಜಿಟಲ್ ಕ್ಯಾಂಪ್ಕೊ’ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಅವರು ಹೇಳಿದರು.

ಪುತ್ತೂರಿನ ಎಂ.ಟಿ ರಸ್ತೆಯಲ್ಲಿರುವ ಕ್ಯಾಂಪ್ಕೊ ಸಂಸ್ಥೆಯ ಶಾಖಾ ಕಚೇರಿಯ ಆವರಣದಲ್ಲಿ ಶನಿವಾರ ನಡೆದ ಸದಸ್ಯ ಬೆಳೆಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗುಣಮಟ್ಟದ ಸಂಸ್ಥೆಯಾಗಿ ಮತ್ತು ಜನರ ನಂಬಿಕೆಯ ಸಂಸ್ಥೆಯಾಗಿ ಕ್ಯಾಂಪ್ಕೊ ಬೆಳೆದಿದೆ. ರೈತರು ಬೆಳೆದ ಎಲ್ಲಾ ಉತ್ಪನ್ನಗಳನ್ನು ಖರೀದಿಸಬೇಕು ಎಂಬ ಬೇಡಿಕೆಯು ಬರುತ್ತಿದ್ದು ರೈತರು ಸಂಸ್ಥೆಯ ಮೇಲೆ ಇಟ್ಟಿರುವ ವಿಶ್ವಾಸವನ್ನು ಎತ್ತಿ ತೋರಿಸುತ್ತಿದೆ. ಮಾರುಕಟ್ಟೆಯಲ್ಲಿ ಧಾರಣೆ ಕುಸಿದಾಗಲೂ ಕ್ಯಾಂಪ್ಕೊ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಶೇ.10 ವ್ಯವಹಾರ ಮಾಡಿ ಶೇ.100ರಷ್ಟು ತೆರಿಗೆಯನ್ನು ಸರಕಾರಕ್ಕೆ ಸಂಸ್ಥೆಯು ಪಾವತಿಸುತ್ತಿದೆ. ಅಡಿಕೆ ಕೃಷಿಕರ ಹಿತ ಕಾಯುವ ಕೇಂದ್ರ ಸರಕಾರದ ಭರವಸೆಯು ಈಡೇರುವ ಹಂತದಲ್ಲಿದ್ದು, ಶೀಘ್ರವೇ ಬೆಂಬಲ ಬೆಲೆಯನ್ನು ಘೋಷಿಸಲಿದೆ. ಬೆಳೆಗಾರರ ಹಿತರಕ್ಷಣೆ ಮತ್ತು ಮಾರುಕಟ್ಟೆಯ ಸ್ಥಿರತೆಗಾಗಿ ಸರ್ವರೀತಿಯ ಪ್ರಯತ್ನವನ್ನು ಮಾಡುತ್ತಿದೆ ಎಂದು ಅವರು ತಿಳಿಸಿದರು.

ರೈತರು ತಾವು ಬೆಳೆದ ಉತ್ಪನ್ನಗಳನ್ನು ಅಧಿಕೃತ ಬಿಲ್‌ನಲ್ಲಿಯೇ ವ್ಯವಹಾರ ಮಾಡುತ್ತೇವೆ. ಆ ಮೂಲಕ ಸರಕಾರಕ್ಕೆ ತೆರಿಗೆ ಸಂದಾಯ ಮಾಡುತ್ತೇವೆ ಎಂದು ಪ್ರಮಾಣ ಮಾಡಬೇಕು ಎಂದು ಅವರು ಹೇಳಿದರು.

ಕ್ಯಾಂಪ್ಕೊ ಮಾಜಿ ನಿರ್ದೇಶಕ ಸಂಜೀವ ಮಠಂದೂರು, ಕ್ಯಾಂಪ್ಕೊದ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ , ವಿಟ್ಲ ಸಿಪಿಸಿಆರ್‌ಐನ ತಾಂತ್ರಿಕ ಅಧಿಕಾರಿ ಪುರಂದರ ಮಾತನಾಡಿದರು.

ಹಿರಿಯ ಕೃಷಿಕ ರಮೇಶ್ ಶೆಟ್ಟಿ ವಾಮದಪದವು, ಶ್ರೀನಿವಾಸ ರಾವ್ ಮುಗೇರು, ಸೀತಾರಾಮ ರೈ ಕುರಿಯ, ಲಕ್ಷ್ಮೀ ವಿ.ಎಲ್ ದೀಪ ಬೆಳಗಿಸಿ ಉದ್ಘಾಟಿಸಿದರು.

ನಿರ್ದೇಶಕ ಪದ್ಮನಾಭ ಕೊಂಕೋಡಿ, ರೀಜನಲ್ ಮ್ಯಾನೇಜರ್ ಪ್ರೇಮಾನಂದ ಶೆಟ್ಟಿಗಾರ್ ಮತ್ತಿತರರು ಇದ್ದರು. ಉಪಾಧ್ಯಕ್ಷ ಶಂಕರನಾರಾಯಣ ಭಟ್ ಸ್ವಾಗತಿಸಿದರು. ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ ವಂದಿಸಿದರು. ಈಶ್ವರ ನಾಯ್ಕಿ ಕಾರ್ಯಕ್ರಮ ನಿರೂಪಿಸಿದರು. 

ಮುಂದೆ ಕಾಳುಮೆಣಸು ವ್ಯವಹಾರ

ಸುಮಾರು 400 ವರ್ಷಗಳ ಹಿಂದೆಯೇ ರಾಣಿ ಅಬ್ಬಕ್ಕ ಕಾಳುಮೆಣಸನ್ನು ವಿದೇಶಗಳಿಗೆ ರಪ್ತು ಮಾಡುತ್ತಿದ್ದರು. ಆದರೆ ಕ್ಯಾಂಪ್ಕೊ ಸಂಸ್ಥೆಯ ಮೂಲಕ ಕಳೆದ 40 ವರ್ಷಗಳಿಂದ ರೈತರು ಬೆಳೆದ ಅಡಿಕೆ ಹಾಗೂ ಕೊಕ್ಕೋಗಳನ್ನು ಮಾತ್ರವೇ ವ್ಯವಹಾರ ಮಾಡಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಕಾಳು ಮೆಣಸು ವ್ಯವಹಾರ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗುವುದು ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X