Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಮೃತಿ ಇರಾನಿಯ ಸೀರೆಯ ಲಕ್ಷಗಟ್ಟಲೆ ಬಿಲ್...

ಸ್ಮೃತಿ ಇರಾನಿಯ ಸೀರೆಯ ಲಕ್ಷಗಟ್ಟಲೆ ಬಿಲ್ ಪಾವತಿಸಲು ನಿರಾಕರಣೆ

ಪ್ರಧಾನಿ ಕಚೇರಿ ತಲುಪಿದ ಜವಳಿ ಸಚಿವೆ-ಕಾರ್ಯದರ್ಶಿ ಜಟಾಪಟಿ

ವಾರ್ತಾಭಾರತಿವಾರ್ತಾಭಾರತಿ28 Aug 2016 9:06 PM IST
share
ಸ್ಮೃತಿ ಇರಾನಿಯ ಸೀರೆಯ ಲಕ್ಷಗಟ್ಟಲೆ ಬಿಲ್ ಪಾವತಿಸಲು ನಿರಾಕರಣೆ

ಹೊಸದಿಲ್ಲಿ,ಆ.28: ಮಾಜಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರು ವಿವಿಧ ವಿಷಯಗಳ ಕುರಿತು, ಅದು ಟ್ವಿಟರ್‌ನಲ್ಲಿ ಮೂದಲಿಕೆಯಾಗಿರಲಿ ಅಥವಾ ಹೈದ್ರಾಬಾದ್ ವಿವಿಯ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣವಾಗಿರಲಿ..,ವಿವಾದಗಳನ್ನು ಸೃಷ್ಟಿಸುವ ಮೂಲಕ ಆಗಾಗ್ಗೆ ಮಾಧ್ಯಮಗಳಲ್ಲಿ ಸುದ್ದಿಗೆ ಗ್ರಾಸವಾಗುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ಅವರ ಖಾತೆಯನ್ನು ಬದಲಿಸಿ ಜವಳಿ ಸಚಿವೆಯನ್ನಾಗಿ ಮಾಡಿದ್ದಾರೆ.
ಜವಲಿ ಸಚಿವಾಲಯದಲ್ಲಿನ ಮೂಲಗಳನ್ನು ನಂಬುವುದಾದರೆ ಸ್ಮತಿ ಇತ್ತೀಚಿಗೆ ತನ್ನ ಸಚಿವಾಲಯದ ಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ರಷ್ಮಿ ವರ್ಮಾ ಜೊತೆ ಜಟಾಪಟಿ ಮಾಡಿಕೊಂಡಿದ್ದಾರೆ. ವರ್ಮಾ ಈ ಬಗ್ಗೆ ಸಂಪುಟ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದು,ವಿಷಯ ಮೋದಿಯವರ ಕಿವಿಗೂ ಬಿದ್ದಿದೆಯೆನ್ನಲಾಗಿದೆ.
ತನ್ಮಧ್ಯೆ ವರ್ಮಾ ಅವರು, ಸ್ಮತಿಯವರ ಇದೇ ಧೋರಣೆ ಮುಂದುವರಿದರೆ ಅವರೊಂದಿಗೆ ಒಂದೇ ಇಲಾಖೆಯಲ್ಲಿ ಕೆಲಸ ಮಾಡುವುದು ತನಗೆ ಕಷ್ಟವಾಗುತ್ತದೆ ಎಂದು ಹಿರಿಯ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದಾರೆ.
ಈ ಜಟಾಪಟಿಗೆ ಕಾರಣವಿಲ್ಲಿದೆ. ಸ್ಮೃತಿ ಇತ್ತೀಚಿಗೆ ಜವಳಿ ಸಚಿವಾಲಯವು ನಡೆಸುತ್ತಿರುವ ಗುಡಿ ಕೈಗಾರಿಕೆಯೊಂದಕ್ಕೆ ಪರಿಶೀಲನೆಗಾಗಿ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅಲ್ಲಿಯ ಶೋರೂಮ್‌ನಿಂದ ಕೆಲವು ದುಬಾರಿ ಸೀರೆಗಳು ಮತ್ತು ಗಣೇಶನ ವಿಗ್ರಹವೊಂದನ್ನು ಖರೀದಿಸಿದ್ದರು. ಸಚಿವೆಯ ಈ ಶಾಪಿಂಗ್ ಬಿಲ್‌ನ ಮೊತ್ತ ಸುಮಾರು ಎಂಟು ಲ.ರೂ.ಗಳಾಗಿದ್ದವು ಎಂದು ಮೂಲಗಳು ಹೇಳಿವೆ.
ಇಷ್ಟಾದ ಬಳಿಕ ಸ್ಮತಿಯವರ ಆಪ್ತ ಸಹಾಯಕ ಈ ಬಿಲ್ ಪಾವತಿಸುವಂತೆ ಜವಳಿ ಕಾರ್ಯದರ್ಶಿ ವರ್ಮಾರಿಗೆ ಕಳುಹಿಸಿದ್ದ. ಆದರೆ ಸೀರೆಗಳು ಮತ್ತು ವಿಗ್ರಹವನ್ನು ಸಚಿವೆ ತನ್ನ ಖಾಸಗಿ ಬಳಕೆಗಾಗಿ ಖರೀದಿಸಿದ್ದಾರೆ,ಹೀಗಾಗಿ ಈ ಬಿಲ್ ಮೊತ್ತವನ್ನು ಸರಕಾರವು ಪಾವತಿಸುವ ಪ್ರಶ್ನೆಯೇ ಇಲ್ಲ ಎಂದು ವರ್ಮಾ ಖಡಾಖಂಡಿತವಾಗಿ ಹೇಳಿದ್ದರು.
ವರ್ಮಾರ ಹೇಳಿಕೆಯಿಂದ ಕೆರಳಿದ ಸ್ಮೃತಿ, ಇಲಾಖೆಯ ಸಚಿವೆಯಾಗಿ ಸಚಿವಾಲಯದ ಅಧೀನದಲ್ಲಿರುವ ಗುಡಿ ಕೈಗಾರಿಕೆಯು ತಯಾರಿಸುವ ಬಟ್ಟೆಗಳನ್ನು ಧರಿಸುವ ಹಕ್ಕು ತನಗೆ ಇದೆ. ಇದರ ಬಿಲ್ ಪಾವತಿ ಸಮಸ್ಯೆಯಾಗಬಾರದು ಎಂದಿದ್ದಾರೆ.
ಇಡೀ ಪ್ರಹಸನ ಈ ಇಬ್ಬರು ಗಣ್ಯ ಮಹಿಳೆಯರ ನಡುವೆ ಕಚ್ಚಾಟಕ್ಕೆ ಕಾರಣವಾಗಿದೆ. ವರ್ಮಾ ಸಂಪುಟ ಕಾರ್ಯದರ್ಶಿಗೆ ಆಪ್ತ ಸಹಾಯಕರು ಎಂದೇ ಪರಿಗಣಿಸಲಾಗಿದೆ. ಅವರು ಪಿಎಂಒಗೂ ಈ ಬಗ್ಗೆ ದೂರು ಸಲ್ಲಿಸಿದ್ದಾರೆನ್ನಲಾಗಿದೆ.
ತನ್ಮಧ್ಯೆ ಸಚಿವೆ ಮತ್ತು ಕಾರ್ಯದರ್ಶಿ ನಡುವೆ ಯಾವುದೇ ಜಟಾಪಟಿಯನ್ನು ಸ್ಮತಿಯವರ ನಿಕಟವರ್ತಿಗಳು ತಳ್ಳಿಹಾಕಿದ್ದಾರೆ. ಕೆಲವರು ಸ್ಮತಿಯವರ ವರ್ಚಸ್ಸಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ, ಹೀಗಾಗಿ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X