Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಉಚಿತ ಆರೋಗ್ಯ ತಪಾಸಣಾ...

ಚಿಕ್ಕಮಗಳೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ28 Aug 2016 10:23 PM IST
share
ಚಿಕ್ಕಮಗಳೂರು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು, ಆ.28: ಸಫಾ ಬೈತುಲ್‌ಮಾಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಟಿಪ್ಪು ನಗರದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಜಾತಿಬೇಧ ಮರೆತು ನೂರಾರು ಜನ ಪಾಲ್ಗೊಂಡಿದ್ದರು.

ಟಿಪ್ಪುನಗರದ ಬಿಲಾಲ್ ಮಸೀದಿ ಆವರಣದಲ್ಲಿ ಬೆಳಗ್ಗೆ 9:30ರಿಂದ ಸಂಜೆಯವರೆಗೂ ನಡೆದ ಶಿಬಿರದಲ್ಲಿ ಸಂತೆ ಮೈದಾನ, ಮಾರ್ಕೆಟ್ ರಸ್ತೆ, ಶಂಕರಪುರ ಸೇರಿದಂತೆ ವಿವಿಧ ಭಾಗಗಳಿಂದ ಮಕ್ಕಳಿಂದ ವೃದ್ಧ್ದರಾದಿಯಾಗಿ ನೂರಾರು ಜನ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉಚಿತ ಔಷಧಿಗಳನ್ನು ಪಡೆದರು.

ಸಂಸ್ಥೆ ಅಧ್ಯಕ್ಷ ಇರ್ಷಾದ್ ಅಹ್ಮದ್ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಅದೆಷ್ಟೊ ಮಂದಿ ಬಡವರು ಹಲವು ಕಾಯಿಲೆಗಳಿಗೆ ತುತ್ತಾಗಿ ಚಿಕಿತ್ಸೆಗೂ ಹಣವಿಲ್ಲದೆ ಹಪಹಪಿಸುತ್ತಿದ್ದುದನ್ನು ಕಂಡಿದ್ದೇವೆ. ಅದನ್ನರಿತು ಕಳೆದ ಹಲವು ವರ್ಷಗಳಿಂದ ಸಫಾ ಬೈತುಲ್‌ಮಾಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರದ ಮೂಲಕ ಜಾತಿ, ಮತ ಭೇದ ಮರೆತು ಬಡವರ್ಗದ ಸರ್ವಧರ್ಮೀಯರಿಗೂ ತಪಾಸಣೆ ಮಾಡಿ ಉಚಿತವಾಗಿ ಔಷಧಿಗಳನ್ನು ನೀಡಿ ಸಹಕರಿಸಲಾಗುತ್ತಿದೆ. ಮೈಕೈ ನೋವು ಸೇರಿದಂತೆ ಸಣ್ಣಪುಟ್ಟ ಕಾಯಿಲೆಗಳನ್ನು ಗುಣಪಡಿಸಿಕೊಳ್ಳಲು ಕೈಲಾಗದಷ್ಟು ಕೆಲವು ಬಡವರಿದ್ದಾರೆ. ಆ ವರ್ಗದ ಜನಕ್ಕೆ ಈ ಶಿಬಿರ ಅನುಕೂಲವಾಗಿದೆ ಎಂದರು.

ನಗರದಲ್ಲಿ ಸಂಸ್ಥೆಯಿಂದ ಮನೆಗಳಿಗೆ ತೆರಳಿ ಅವರಲ್ಲಿರುವ ಸ್ಕ್ರಾಪ್ ಸಾಮಗ್ರಿಗಳನ್ನು ಪಡೆದು ಅದನ್ನು ಮಾರಿ ಬಂದ ಹಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಬಡವರಿಗೆ ಆಹಾರಧಾನ್ಯ ವಿತರಣೆ, ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಕೈಲಾದ ಮಟ್ಟಿಗೆ ಧನಸಹಾಯ ಮಾಡಲಾಗುತ್ತಿದೆ ಎಂದರು.

ಉಚಿತ ತಪಾಸಣೆ ನಡೆಸುತ್ತಿರುವ ಕಡೂರು ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಮಾತನಾಡಿ, ಮೈಕೈ ನೋವು, ಜ್ವರ, ಕೆಮ್ಮು, ಶೀತ, ಬಿಪಿ, ಶುಗರ್ ಸೇರಿದಂತೆ ನಾನಾರೀತಿ ಕಾಯಿಲೆಗೊಳಪಟ್ಟವರು ಈ ಆರೋಗ್ಯ ತಪಾಸಣಾ ಶಿಬಿರಕ್ಕೆ ಬಂದು ಚಿಕಿತ್ಸೆ ಪಡೆಯುವ ಜೊತೆ ಔಷಧಿಗಳನ್ನು ಪಡೆದಿದ್ದಾರೆ.

ತೀವ್ರ ಸ್ವರೂಪದ ಕಾಯಿಲೆಗಳು ಇದ್ದಲ್ಲಿ ಸಂಬಂಧ ಪಟ್ಟ ವೈದ್ಯರ ಬಳಿತೆರಳಿ ಕಾಯಿಲೆ ಗುಣಪಡಿಸಿಕೊಳ್ಳಲು ಸಲಹೆ ನೀಡುತ್ತೇವೆ. ಇದರ ಜೊತೆಗೆ ಸಂಸ್ಥೆಯಿಂದ ಸಹಾಯ ಮಾಡುತ್ತೇವೆ. 150ರಿಂದ 200ರೋಗಿಗಳನ್ನು ತಪಾಸಣೆ ಮಾಡಲಾಗಿದ್ದು ಕೊಳಚೆ ಪ್ರದೇಶವಾಗಿರುವುದರಿಂದ ಚಿಕುನ್ ಗುನ್ಯಾ ಸಂಬಂಧಿ ಕಾಯಿಲೆಗಳ ರೋಗಿಗಳೆ ಹೆಚ್ಚು ಬಂದಿದ್ದಾರೆ ಎಂದರು.

ಸಂಸ್ಥೆಯ ನೂರುಲ್ಲಾ, ಸಾಹಿರ್ ಕುರೇಶಿ, ಮುದಸ್ಸೀರ್, ಶುಶ್ರೂಷಕಿ ನಫೀಸಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X