Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಡೋನೇಶ್ಯದಲ್ಲಿ 145 ವರ್ಷದ ವ್ಯಕ್ತಿ :...

ಇಂಡೋನೇಶ್ಯದಲ್ಲಿ 145 ವರ್ಷದ ವ್ಯಕ್ತಿ : ಬಹುಶಃ ಜಗತ್ತಿನ ಸಾರ್ವಕಾಲಿಕ ಅತಿ ಹಿರಿಯ ಮನುಷ್ಯ

ವಾರ್ತಾಭಾರತಿವಾರ್ತಾಭಾರತಿ28 Aug 2016 11:03 PM IST
share
ಇಂಡೋನೇಶ್ಯದಲ್ಲಿ 145 ವರ್ಷದ ವ್ಯಕ್ತಿ : ಬಹುಶಃ ಜಗತ್ತಿನ ಸಾರ್ವಕಾಲಿಕ ಅತಿ ಹಿರಿಯ ಮನುಷ್ಯ

ಲಂಡನ್, ಆ. 28: ತನಗೆ 145 ವರ್ಷವಾಗಿದೆ ಎಂದು ಇಂಡೋನೇಶ್ಯದ ವ್ಯಕ್ತಿಯೊಬ್ಬರು ಹೇಳಿಕೊಳ್ಳುತ್ತಿದ್ದು, ಅದು ನಿಜವಾದರೆ ಅವರು ಈ ಜಗತ್ತಿನ ಸಾರ್ವಕಾಲಿಕ ಅತಿ ಹಿರಿಯ ವ್ಯಕ್ತಿಯಾಗಿದ್ದಾರೆ.

ಇಂಡೋನೇಶ್ಯದ ಅಧಿಕಾರಿಗಳು ಮಾನ್ಯ ಮಾಡಿರುವ ದಾಖಲೆಗಳ ಪ್ರಕಾರ, ಮಧ್ಯ ಜಾವಾದ ಸ್ರಾಗೆನ್ ನಿವಾಸಿ ಮಬಹ ಗೋತೊ ಅವರು ಹುಟ್ಟಿದ್ದು 1870 ಡಿಸೆಂಬರ್ 31.

ದಾಖಲೆಯು ನಿಜವಾದರೆ, ಗೋತೊ ಜಗತ್ತಿನ ಪ್ರಮಾಣಿತ ಅತಿ ಹಿರಿಯ ವ್ಯಕ್ತಿಯಿಂದ ತುಂಬಾ ದೊಡ್ಡವರಾಗುತ್ತಾರೆ. ಈ ದಾಖಲೆಯು ಈಗ ಫ್ರಾನ್ಸ್‌ನ ಜೀನ್ ಕಾಲ್ಮಂಟ್ ಹೆಸರಿನಲ್ಲಿದೆ. ಅವರು 122 ವರ್ಷಗಳ ಕಾಲ ಬದುಕಿದ್ದರು.

ಗೋತೊ ಅವರ ಎಲ್ಲ 10 ಸಹೋದರ ಸಹೋದರಿಯರು, ನಾಲ್ವರು ಹೆಂಡಂದಿರು, ಎಲ್ಲ ಮಕ್ಕಳು ನಿಧನರಾಗಿದ್ದಾರೆ. ಅವರ ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳ ಮಕ್ಕಳು ಬದುಕಿದ್ದಾರೆ ಎಂದು ‘ದ ಸನ್’ ವರದಿ ಮಾಡಿದೆ.

ಆದಾಗ್ಯೂ, ಈ ಅತಿ ಹಿರಿಯ ಮನುಷ್ಯ ಸಾವನ್ನು ಎದುರು ನೋಡುತ್ತಿದ್ದಾರೆ. ಅವರು 20 ವರ್ಷಗಳ ಹಿಂದೆಯೇ ತನ್ನ ಸಮಾಧಿ ಕಲ್ಲನ್ನು ಖರೀದಿಸಿ ಇಟ್ಟಿದ್ದಾರೆ.

‘‘ನಾನು ಸಾಯಲು ಬಯಸುತ್ತಿದ್ದೇನೆ. ನನ್ನ ಮೊಮ್ಮಕ್ಕಳು ಈಗ ಸ್ವತಂತ್ರವಾಗಿ ಬದುಕುತ್ತಿದ್ದಾರೆ’’ ಎಂದು ಅವರು ಹೇಳಿದರು.

ಅವರು ಜಗತ್ತಿನ ‘ಸಾರ್ವಕಾಲಿಕ ಅತ್ಯಂತ ಹಿರಿಯ ವ್ಯಕ್ತಿ’ಯಾಗಿ ದಾಖಲಾಗುತ್ತಾರೋ ಇಲ್ಲವೋ ಎನ್ನುವುದು ಅನಿಶ್ಚಿತ. ಯಾಕೆಂದರೆ, ಅವರ ದಾಖಲೆಯನ್ನು ಸ್ವತಂತ್ರವಾಗಿ ಈಗಲೂ ಪರಿಶೀಲನೆ ನಡೆಸಲಾಗಿಲ್ಲ.

ಕಳೆದ ಮೂರು ತಿಂಗಳಲ್ಲಿ ಗೋತೊರಿಗೆ ಚಮಚದ ಮೂಲಕ ಆಹಾರ ನೀಡಲಾಗುತ್ತಿದೆ. ಅವರು ನಿತ್ರಾಣರಾಗಿದ್ದು ಅವರಿಗೆ ಬೇರೆಯವರು ಸ್ನಾನ ಮಾಡಿಸಬೇಕಾಗಿದೆ.

ಅವರು ಹೆಚ್ಚಿನ ಸಮಯ ಕುಳಿತುಕೊಂಡು ರೇಡಿಯೊ ಕೇಳುತ್ತಾರೆ ಎಂದು ಗೋತೊ ಅವರ ಮೊಮ್ಮಕ್ಕಳು ಹೇಳುತ್ತಾರೆ. ಅವರ ದೀರ್ಘಾಯುಷ್ಯದ ಗುಟ್ಟು ‘ತಾಳ್ಮೆ’ ಎಂದು ಅವರು ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X