Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗರ್ಭಿಣಿ ಮಗಳನ್ನು ಸೈಕಲ್‌ನಲ್ಲಿ...

ಗರ್ಭಿಣಿ ಮಗಳನ್ನು ಸೈಕಲ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದ ತಂದೆ.. !

ವಾರ್ತಾಭಾರತಿವಾರ್ತಾಭಾರತಿ29 Aug 2016 12:20 PM IST
share
ಗರ್ಭಿಣಿ ಮಗಳನ್ನು ಸೈಕಲ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದ ತಂದೆ.. !

 ಭೂಪಾಲ್, ಆ.29: ‘ಜನನಿ ಎಕ್ಸ್‌ಪ್ರೆಸ್’ನಲ್ಲಿ ತುಂಬು ಗರ್ಭಿಣಿ ಮಗಳನ್ನು ಕರೆದೊಯ್ಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ತಂದೆಯೊಬ್ಬರು ತನ್ನ ಸೈಕಲ್‌ನಲ್ಲಿ ಕುಳ್ಳಿರಿಸಿಕೊಂಡು ಆರು ಕಿ.ಮೀ. ದೂರದ ಆಸ್ಪತ್ರೆಯ ಹಾದಿ ಹಿಡಿದ ಘಟನೆ ಬುಂದೆಲ್‌ಖಂಡ್‌ನಲ್ಲಿ  ನಡೆದಿದೆ.

  ಚಿತ್ತಾರಪುರ ಜಿಲ್ಲೆಯ ಶಾಹ್‌ಪುರ್ ಗ್ರಾಮದ ಬಕ್ಸವಾಹ್ ಎಂಬಲ್ಲಿನ ನಿವಾಸಿ ಬುಡಕಟ್ಟು ಜನಾಂಗಕ್ಕೆ ಸೇರಿದ ನನ್ಹೆಭಾಯ್ ಎಂಬವರೇ ಗರ್ಭಿಣಿ ಮಗಳನ್ನು ಸೈಕಲ್‌ನಲ್ಲಿ ಕುಳ್ಳಿರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದ ತಂದೆ.
ರವಿವಾರ ಬೆಳಗ್ಗೆ ನನ್ಹೆಭಾಯ್ ಮಗಳು ಗರ್ಭಿಣಿ ಪಾರ್ವತಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ತಕ್ಷಣ ಅವರು ಮಗಳನ್ನು ಕರೆದೊಯ್ಯಲು ಸಹಾಯಕ್ಕಾಗಿ ‘ಜನನಿ ಎಕ್ಸ್‌ಪ್ರೆಸ್’ಗೆ ಕರೆ ಮಾಡಿದರು.  ಗ್ರಾಮೀಣ ಪ್ರದೇಶದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಇರುವ ತುರ್ತು ಸಾರಿಗೆ ಸೌಲಭ್ಯ ಜನನಿ ಎಕ್ಸ್‌ಪ್ರೆಸ್‌ನಿಂದ ಅವರಿಗೆ ಸಹಾಯ ದೊರೆಯಲಿಲ್ಲ. ಜನನಿ  ಎಕ್ಸ್‌ಪ್ರೆಸ್‌ನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿಯನ್ನು ಗುತ್ತಿಗೆದಾರ ನನ್ಹೆಭಾಯ್‌ಗೆ ನೀಡಿದರು. ಆದರೆ ನನ್ಹೆ ಭಾಯ್ ಕೈ ಕಟ್ಟಿ ಕೂರಲಿಲ್ಲ. ಮಗಳನ್ನು ಸೈಕಲಿನಲ್ಲಿ ಕುಳ್ಳಿರಿಸಿ ಸೈಕಲ್ ತುಳಿಯುತ್ತಲೇ 6 ಕಿ.ಮಿ. ದೂರದ ಆಸ್ಪತ್ರೆ ತಲುಪಿದರು. ಆಸ್ಪತ್ರೆಯಲ್ಲಿ ಮಗಳು ಪಾರ್ವತಿ ಗಂಡು ಮಗುವಿಗೆ ಜನ್ಮ ನೀಡಿದಳು.
 ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಡಾ.ವಿ.ಕೆ. ಗುಪ್ತಾ ಅವರು ಜಿಲ್ಲೆಯಲ್ಲಿ 15 ಆ್ಯಂಬುಲೆನ್ಸ್ ಮತ್ತು 19 ಜನನಿ ಎಕ್ಸ್‌ಪ್ರೆಸ್ ವಾಹನಗಳ ಸೌಲಭ್ಯ ಇದೆ. ಆದರೆ ನನ್ಹೆಭಾಯ್ ಅವರು ಜನನಿ ಎಕ್ಸ್‌ಪ್ರೆಸ್ ಕೇಂದಕ್ಕೆ ಕರೆ ಮಾಡಿರುವ ದಾಖಲೆಯಿಲ್ಲ ಎಂದು ಹೇಳಿದ್ದಾರೆ.
  ಅಮಾನವೀಯ ಘಟನೆಗಳಿಗೆ ಕೊನೆಯಿಲ್ಲ. ಒಡಿಶಾದ ಕಲಹಂಡಿಯಲ್ಲಿ ಕ್ಷಯ ರೋಗದಿಂದ ಸಾವಿಗೀಡಾದ ಮಹಿಳೆಯ ಶವವನ್ನು ಸಾಗಿಸಲು ಆಸ್ಪತ್ರೆಯ ಅಧಿಕಾರಿಗಳು ವಾಹನ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಪತಿ ಹೆಣವನ್ನು ತಲೆಯಲ್ಲಿ ಹೊತ್ತುಕೊಂಡ ಘಟನೆ ಮತ್ತು ಮಧ್ಯಪ್ರದೇಶದ ದಾಮೋಹ್‌ನಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತಪಟ್ಟಾಗ,ಶವವನ್ನು ಹೊರಕ್ಕೆ ಎಸೆದು ಆಕೆಯ ಪತಿ ಹಾಗೂ ಹಸುಗೂಸನ್ನು ಬಸ್‌ನಿಂದ ಹೊರದಬ್ಬಿದ ಘಟನೆಯ ಬಳಿಕ ಇದೀಗ ಇನ್ನೊಂದು ಅಂತದ್ದೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.


  


  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X