Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿಕೆಎಸ್‌ಸಿ ದಮ್ಮಾಮ್ ವಲಯ ವತಿಯಿಂದ...

ಡಿಕೆಎಸ್‌ಸಿ ದಮ್ಮಾಮ್ ವಲಯ ವತಿಯಿಂದ ಕ್ಷೇಮನಿಧಿ ಸಮಿತಿಗೆ ಚಾಲನೆ

ಸುನ್ನೀ ಗೈಡನ್ಸ್ ಬ್ಯೂರೊ ಅಧ್ಯಕ್ಷ ಅಳಕೆಮಜಲು ಉಸ್ತಾದ್‌ರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ29 Aug 2016 7:19 PM IST
share
ಡಿಕೆಎಸ್‌ಸಿ ದಮ್ಮಾಮ್ ವಲಯ ವತಿಯಿಂದ ಕ್ಷೇಮನಿಧಿ ಸಮಿತಿಗೆ ಚಾಲನೆ

ಜುಬೈಲ್, ಆ.29: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ದಮ್ಮಾಮ್ ವಲಯದ ವತಿಯಿಂದ ಸುನ್ನೀ ಗೈಡೆನ್ಸ್ ಬ್ಯೂರೋದ ಅಧ್ಯಕ್ಷ ಮುಹಮ್ಮದ್ ಖಾಸಿಮಿ ಅಳಕೆಮಜಲು ಅವರಿಗೆ ಸನ್ಮಾನ ಸಮಾರಂಭ ಹಾಗೂ ಕ್ಷೇಮನಿಧಿ ಸಮಿತಿಗೆ ಅಧಿಕೃತ ಚಾಲನೆ ಮತ್ತು ನಿಯಾಮವಳಿ ಬಿಡುಗಡೆ ಸಮಾರಂಭ ಜುಬೈಲ್‌ನ ಡಿಕೆಎಸ್‌ಸಿ ಆಡಿಟೊರಿಯಂನಲ್ಲಿ ಶುಕ್ರವಾರ ನಡೆಯಿತು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಕಿನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಸ್ತಾದ್ ಮುಹಮ್ಮದ್ ಖಾಸಿಮಿ, ವಲಯಾಧ್ಯಕ್ಷ ಸುಲೈಮಾನ್ ಸೂರಿಂಜೆ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಬರ್ವ ಅವರು ಕ್ಷೇಮನಿಧಿ ಅಧ್ಯಕ್ಷ ಹಾತೀಂ ಕಂಚಿ, ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಲ್ಲೂರ್, ಸಲಹೆಗಾರ ಹಾತೀಂ ಕುಳೂಳು ಅವರಿಗೆ ಕ್ಷೇಮನಿಧಿಯನ್ನು ನೀಡುವ ಮೂಲಕ ಕ್ಷೇಮನಿಧಿಗೆ ಚಾಲನೆ ನೀಡಿದರು.

ನಿಯಮಾವಳಿ ಮತ್ತು ನಿಬಂಧನೆ ಪತ್ರವನ್ನು ಉಸ್ತಾದ್ ಮುಹಮ್ಮದ್ ಖಾಸಿಮಿ ಮತ್ತು ಕೋಬರ್ ಘಟಾಕಾಧ್ಯಕ್ಷ ಅಬ್ದುರ್ರಹ್ಮಾನ್ ಪಾಣಾಜೆಯವರು, ಹಿರಿಯ ಉದ್ಯಮಿ ಮುಹಮ್ಮದ್ ಕಮ್ಮರಡಿಯವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿ, ಹಫ್ರುಲ್ ಬಾತಿನ್, ಅಲ್ ಹಸ್ಸಾ, ಅಲ್ ಕೋಬರ್, ತುಕ್ಬಾ, ದಮ್ಮಾಮ್, ಜುಬೈಲ್ ಮತ್ತು ಮುಝೈನ್ ಘಟಕದ ಮುಖಂಡರಿಗೆ ಹಸ್ತಾಂತರಿಸಿದರು. ಕ್ಷೇಮನಿಧಿಯ ಪ್ರಥಮ ಧನಸಹಾಯವಾಗಿ 2 ಲಕ್ಷ ರೂ.ನ್ನು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿರುವ ಸುನ್ನೀ ಸೆಂಟರ್‌ನ ದಮ್ಮಾಮ್ ಘಟಕದ ಸಕ್ರಿಯ ಕಾರ್ಯಕರ್ತ ಅಬ್ದುಲ್ ಅಝೀಝ್ ಕಂದಾವರರಿಗೆ ಅವರ ಸಂಬಂಧಿಕ ಅನ್ಸಾರ್ ಕಾನ ಅವರ ಮೂಲಕ ವಿತರಿಸಲಾಯಿತು.

ಈ ಸಂದರ್ಭ ಸುನ್ನೀ ಗೈಡೆನ್ಸ್ ಬ್ಯೂರೋ ಅಧ್ಯಕ್ಷ ಹಾಗೂ ಇಹ್ಸಾನ್ ಬನಾತ್ ಕೇರ್‌ನ ಪ್ರಾಂಶುಪಾಲ ಉಸ್ತಾದ್ ಮುಹಮ್ಮದ್ ಖಾಸಿಮಿ ಅಳಕೆಮಜಲು ಅವರನ್ನು ವಲಯಾಧ್ಯಕ್ಷ ಸುಲೈಮಾನ್ ಸೂರಿಂಜೆ, ಪ್ರಧಾನ ಕಾರ್ಯದರ್ಶಿ ಅಬೂಬಕರ್ ಬರ್ವ ಮತ್ತು ಉಪಾಧ್ಯಕ್ಷ ಶೇಖ್ ಬಳ್ಕುಂಜೆಯವರು ಶಾಲು ಹೊದಿಸಿ, ಪವಿತ್ರ ಕುರ್‌ಆನ್ ನೀಡಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ವಲಯ ಸಮಿತಿಯ 7 ಘಟಕಗಳ ಮುಖಂಡರು ಕ್ಷೇಮನಿಧಿ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಅಬ್ದುಲ್ಲತೀಫ್ ಸಖಾಫಿ ದುಆ ನೆರವೇರಿಸಿದರು. ಮಾಸ್ಟರ್ ಮುಹಮ್ಮದ್ ಮುಸ್ತಫಾ ಕಿರಾಅತ್ ಪಠಿಸಿದರು. ವೇದಿಕೆಯಲ್ಲಿ ಡಿಕೆಎಸ್‌ಸಿ ಮುಖಂಡರಾದ ಉಸ್ತಾದ್ ಅಬ್ದುಲ್ಲತೀಫ್ ಸಖಾಫಿ, ಹಫ್ರ್ ಲ್ ಬಾತಿನ್ ಉಪಾಧ್ಯಕ್ಷ ಮುಹಮ್ಮದ್ ಅಮ್ಮುಂಜೆ, ಹಿರಿಯರಾದ ಅನ್ವರ್ ಹುಸೈನ್ ಗೂಡಿನಬಳಿ, ಯುವ ಉದ್ಯಮಿ ಅಲ್ ಹಸ್ಸ ಉಪಾಧ್ಯಕ್ಷ ಸಿದ್ದೀಕ್ ಕಲ್ಲಡ್ಕ ಮತ್ತು ಹಲವಾರು ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ವಲಯಾಧ್ಯಕ್ಷ ಸುಲೈಮಾನ್ ಸೂರಿಂಜೆ ಸ್ವಾಗತಿಸಿದರು. ಕ್ಷೇಮನಿಧಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಅನ್ವರ್ ಹುಸೈನ್ ಗೂಡಿನಬಳಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X