Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮ್ ಮಹಿಳೆಯರಿಗೆ ಆತಿಥ್ಯ ನೀಡಲು...

ಮುಸ್ಲಿಮ್ ಮಹಿಳೆಯರಿಗೆ ಆತಿಥ್ಯ ನೀಡಲು ನಿರಾಕರಿಸಿದ ಫ್ರಾನ್ಸ್ ರೆಸ್ಟೋರೆಂಟ್

‘ಭಯೋತ್ಪಾದಕರು ಮುಸ್ಲಿಮರು ಮತ್ತು ಎಲ್ಲ ಮುಸ್ಲಿಮರು ಭಯೋತ್ಪಾದಕರು’ ಎಂದ ಮಾಲೀಕ

ವಾರ್ತಾಭಾರತಿವಾರ್ತಾಭಾರತಿ29 Aug 2016 7:49 PM IST
share
ಮುಸ್ಲಿಮ್ ಮಹಿಳೆಯರಿಗೆ ಆತಿಥ್ಯ ನೀಡಲು ನಿರಾಕರಿಸಿದ ಫ್ರಾನ್ಸ್ ರೆಸ್ಟೋರೆಂಟ್

ಪ್ಯಾರಿಸ್, ಆ. 29: ಪ್ಯಾರಿಸ್‌ನ ಉಪನಗರವೊಂದರಲ್ಲಿನ ರೆಸ್ಟೋರೆಂಟೊಂದು ಇಬ್ಬರು ಮುಸ್ಲಿಮ್ ಮಹಿಳೆಯರಿಗೆ ಆತಿಥ್ಯ ನೀಡಲು ನಿರಾಕರಿಸಿದ್ದು, ಫ್ರಾನ್ಸ್‌ನಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಗಿದೆ ಎಂದು ಬಿಬಿಸಿ ರವಿವಾರ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ಹರಡುತ್ತಿರುವ ವೀಡಿಯೊವೊಂದರಲ್ಲಿ ಆಘಾತಕಾರಿ ಸಂಗತಿ ದಾಖಲಾಗಿದೆ. ವೀಡಿಯೊದಲ್ಲಿ ರೆಸ್ಟೋರೆಂಟ್ ಮಾಲೀಕ ಹಿಜಾಬ್‌ಧಾರಿ ಮಹಿಳೆಯರಿಗೆ ಹೀಗೆ ಹೇಳುತ್ತಾನೆ: ‘‘ಭಯೋತ್ಪಾದಕರು ಮುಸ್ಲಿಮರು ಮತ್ತು ಎಲ್ಲ ಮುಸ್ಲಿಮರು ಭಯೋತ್ಪಾದಕರು’’.

ಟ್ರೆಂಬ್ಲೆ ಎನ್ ಫ್ರಾನ್ಸ್‌ನ ಲೆ ಸೆನಾಕಲ್ ರೆಸ್ಟೋರೆಂಟ್‌ನಲ್ಲಿ ಶನಿವಾರ ಘಟನೆ ನಡೆದಿದೆ.

 ಈ ಘಟನೆಗೆ ಪ್ರತಿಕ್ರಿಯೆಯಾಗಿ ರೆಸ್ಟೋರೆಂಟ್‌ನ ಹೊರಗೆ ಸೇರಿದ ಗುಂಪಿನೊಂದಿಗೆ ಹೊಟೇಲ್ ಮಾಲೀಕ ಕ್ಷಮೆ ಯಾಚಿಸಿದ್ದಾನೆ.

ಫ್ರಾನ್ಸ್‌ನ ಬೀಚ್‌ಗಳಲ್ಲಿ ಬುರ್ಕಿನಿ ಧರಿಸುವುದಕ್ಕೆ ಸಂಬಂಧಿಸಿದ ವಿಷಯದಲ್ಲಿ ಸೃಷ್ಟಿಯಾಗಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ತಾನು ತಾಳ್ಮೆ ಕಳೆದುಕೊಂಡಿದ್ದೇನೆ ಹಾಗೂ ಅದೂ ಅಲ್ಲದೆ, ಕಳೆದ ನವೆಂಬರ್‌ನಲ್ಲಿ ಬಟಕ್ಲಾನ್ ಸಂಗೀತ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾನು ಒಬ್ಬ ಸ್ನೇಹಿತನನ್ನೂ ಕಳೆದುಕೊಂಡಿದ್ದೇನೆ ಎಂದು ರೆಸ್ಟೋರೆಂಟ್ ಮಾಲೀಕ ಮುಸ್ಲಿಮ್ ಮಹಿಳೆಯರಿಗೆ ಹೇಳುವುದು ವೀಡಿಯೊದಲ್ಲಿ ದಾಖಲಾಗಿದೆ.

 ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆಯರು, ‘‘ಹಾಗಾದರೆ, ನಮಗೆ ಜನಾಂಗೀಯವಾದಿಗಳ ಆತಿಥ್ಯ ಬೇಡ’’ ಎಂದು ಹೇಳಿದರು.

ಅದಕ್ಕೆ ಉತ್ತರಿಸಿದ ಮಾಲೀಕ, ‘‘ಜನಾಂಗೀಯವಾದಿಗಳು ಜನರನ್ನು ಕೊಲ್ಲುವುದಿಲ್ಲ’’ ಎಂದನು.

ಮುಂದುವರಿದ ಆತ, ‘‘ನಿಮ್ಮಂಥ ಜನರು ನನ್ನ ರೆಸ್ಟೋರೆಂಟ್‌ನಲ್ಲಿ ಇರುವುದನ್ನು ನಾನು ಬಯಸುವುದಿಲ್ಲ. ಇನ್ನು ವಾದ ಬೇಡ’’ ಎಂದು ಹೇಳಿದನು.

ತನಿಖೆಗೆ ಆದೇಶ

ರೆಸ್ಟೋರೆಂಟ್ ಮಾಲೀಕರ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದಿರುವ ಫ್ರಾನ್ಸ್ ಸಚಿವೆ ಲಾರೆನ್ಸ್ ರೊಸಿನಾಲ್, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಸರಕಾರಿ ಜನಾಂಗೀಯ ತಾರತಮ್ಯ ನಿಗ್ರಹ ಸಂಸ್ಥೆ ‘ಡಿಲ್ಕ್ರ’ಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇಬ್ಬರು ಸಂತ್ರಸ್ತ ಮಹಿಳೆಯರಿಗೆ ಕಾನೂನು ನೆರವು ಮತ್ತು ಮಾನಸಿಕ ಬೆಂಬಲ ನೀಡುವುದಾಗಿ ಫ್ರಾನ್ಸ್‌ನ ಇಸ್ಲಾಮೊಫೋಬಿಯ ನಿಗ್ರಹ ಸಂಘಟನೆ ಸಿಸಿಐಎಫ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X