Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾನೂನು ಪಾಲನೆಯಲ್ಲಿ ಪೊಲೀಸರ ತಾರತಮ್ಯ:...

ಕಾನೂನು ಪಾಲನೆಯಲ್ಲಿ ಪೊಲೀಸರ ತಾರತಮ್ಯ: ಪಿಎಫ್‌ಐ ಆರೋಪ

ಹೋರಾಟದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ29 Aug 2016 10:00 PM IST
share
ಕಾನೂನು ಪಾಲನೆಯಲ್ಲಿ ಪೊಲೀಸರ ತಾರತಮ್ಯ: ಪಿಎಫ್‌ಐ ಆರೋಪ

ಮಂಗಳೂರು, ಆ. 29: ಕಾನೂನು ಪಾಲನೆಯಲ್ಲಿ ಪೊಲೀಸರು ತಾರತಮ್ಯ ಎಸಗುತ್ತಿದ್ದು, ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಪೊಲೀಸರು ನಿರಂತರ ಮುಸ್ಲಿಂ ಸಮುದಾಯವನ್ನು ಗುರಿಪಡಿಸುತ್ತಿದೆ ಎಂದು ಪಿಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ ಆರೋಪಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುವಾದಿಗಳ ಅಟ್ಟಹಾಸದ ವಿರುದ್ಧ, ಪೊಲೀಸ್ ದೌರ್ಜನ್ಯ ಮತ್ತು ತಾರತಮ್ಯ ವಿರುದ್ಧ ಪಿಎಫ್‌ಐ ಹಲವು ರೀತಿಯಲ್ಲಿ ಪ್ರತಿಭಟನೆ ನಡೆಸಿಕೊಂಡು ಬಂದಿದೆ. ಆದರೆ ಬದಲಾವಣೆ ಕಾಣಲು ಸಾಧ್ಯವಾಗಿಲ್ಲ. ಪ್ರಕರಣದಲ್ಲಿ ಮುಸ್ಲಿಂ ಯುವಕನೊಬ್ಬನನ್ನು ಬಂಧಿಸಿದರೆ, ಅಂತಹ ಯುವಕರ ಮೇಲೆ ಗೂಂಡಾ ಕಾಯ್ದೆಯಂತಹ ಗಂಭೀರ ಪ್ರಕರಣ ದಾಖಲಿಸಿ ಪ್ರಜಾಸತ್ತಾತ್ಮಕ ಹೋರಾಟವನ್ನು ಬುಡದಿಂದಲೇ ಮಟ್ಟಹಾಕುವ ಪ್ರಯತ್ನ ನಡೆಯುತ್ತಿದೆ ಎಂದರು.

ಚರಣ್ ಕೊಲೆ ಪ್ರಕರಣದಲ್ಲೂ ಪೊಲೀಸರು ಅಮಾಯಕ ಸೈಫುಲ್ಲಾ ಎಂಬವರನ್ನು ಬಂಧಿಸಿದ್ದಾರೆ. ಸೈಫುಲ್ಲಾ ಅವರು ಚರಣ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿಲ್ಲ. ಅಮಾಯಕರೊಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದಕ್ಕೆ ನಮ್ಮ ಆಕ್ಷೇಪವಿದೆ. ಪೊಲೀಸರು ಯಾವ ಒತ್ತಡಕ್ಕೂ ಮಣಿಯದೆ ಕಾನೂನಾತ್ಮಕವಾಗಿ ಕಾರ್ಯಾಚರಿಸಬೇಕು. ಇಲ್ಲದಿದ್ದರೆ ಸಂಘಟನೆಯ ವತಿಯಿಂದ ಪೊಲೀಸ್ ಇಲಾಖೆಯ ವಿರುದ್ಧ ಹೋರಾಟ ನಡೆಸುವುದಾಗಿ ಹನೀಫ್ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳಾದ ಮಜೀದ್ ಜೋಕಟ್ಟೆ, ಸಿರಾಜುದ್ದೀನ್ ಮತ್ತು ಜಿಲ್ಲಾ ಸಮಿತಿ ಸದಸ್ಯ ಅಬೂಬಕರ್ ಸಿದ್ದೀಕ್ ಉಪಸ್ಥಿತರಿದ್ದರು.

ಪೊಲೀಸ್ ಅನ್ಯಾಯದ ವಿರುದ್ಧ ಪಿಎಫ್‌ಐ ಪ್ರತಿಭಟನೆ

ಚರಣ್ ಕೊಲೆ ಪ್ರಕರಣದಲ್ಲಿ ಅಮಾಯಕನ ಬಂಧನ ಹಾಗೂ ಪೊಲೀಸರ ಅನ್ಯಾಯದ ವಿರುದ್ಧ ಪಿಎಫ್‌ಐ ಕಾರ್ಯಕರ್ತರು ಇಂದು ಮಧ್ಯಾಹ್ನ ಪೊಲೀಸ್ ಕಮಿಷನರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಚರಣ್ ಕೊಲೆ ಪ್ರಕರಣದಲ್ಲಿ ಪೊಲೀಸರು ಒತ್ತಡಕ್ಕೆ ಮಣಿದು ಅಮಾಯಕರನ್ನು ಬಂಧಿಸಿ, ಅನ್ಯಾಯ ಎಸಗಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಪಿಎಫ್‌ಐನ ಕೆಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X