Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಇತಿಹಾಸದ ಪ್ರಜ್ಞೆಯೊಂದಿಗೆ ಕ್ರಿಯಾಶೀಲತೆ...

‘ಇತಿಹಾಸದ ಪ್ರಜ್ಞೆಯೊಂದಿಗೆ ಕ್ರಿಯಾಶೀಲತೆ ಬೆರೆತರೆ ನಾಡು ಕಟು್ಟವುದು ಸುಲಭ’

ನವ ಕರ್ನಾಟಕ ಸಂಘದ ಉದ್ಘಾಟನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Aug 2016 11:01 PM IST
share
‘ಇತಿಹಾಸದ ಪ್ರಜ್ಞೆಯೊಂದಿಗೆ ಕ್ರಿಯಾಶೀಲತೆ ಬೆರೆತರೆ ನಾಡು ಕಟು್ಟವುದು ಸುಲಭ’

ಅಂಕೋಲಾ, ಆ.29: ಪ್ರಬುದ್ಧ ಕರ್ನಾಟಕವನ್ನು ನಿರ್ಮಿಸುವಲ್ಲಿ ಅಂಕೋಲಾದ ನವ ಕರ್ನಾಟಕ ಸಂಘವು ಭೂಮಿಕೆಯಾಗಲಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉತ್ತರ ಕನ್ನಡ ಜಿಲ್ಲೆಯ ಉಪನಿರ್ದೇಶಕ ಎ.ಬಿ. ಪುಂಡಲೀಕ ಹೇಳಿದರು.

  ಅವರು ಪಟ್ಟಣದ ಪೂರ್ಣಪ್ರಜ್ಞ ಪ್ರೌಢಶಾಲೆಯಲ್ಲಿ ನೂತನವಾಗಿ ಆರಂಭವಾದ ಅಂಕೋಲಾದ ನವ ಕರ್ನಾಟಕ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕೇವಲ ಕನ್ನಡ ಭಾಷೆ ಮತ್ತು ನೆಲದ ಕುರಿತು ಒಲವಿದ್ದರೆ ಸಾಲದು, ಸಾಹಿತ್ಯ ಮತ್ತು ಇತಿಹಾಸದ ಪ್ರಜ್ಞೆಯೊಂದಿಗೆ ಕ್ರಿಯಾಶೀಲತೆಯಿದ್ದಾಗ ಮಾತ್ರ ನಾಡು ನುಡಿಯನ್ನು ಕಟ್ಟಬಹುದು. ಸಮಾನ ಮನಸ್ಕರಾದ ಪ್ರಬುದ್ಧರನ್ನೊಳಗೊಂಡಿರುವ ನವ ಕರ್ನಾಟಕ ಸಂಘವು ಭವಿಷ್ಯದಲ್ಲಿ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಲಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ಅಂಕಣಕಾರ ಪ್ರೊ.ವಿಷ್ಣು ಜೋಷಿ ಮಾತನಾಡಿ, ಸಂಸ್ಕೃತದ ಅಧ್ಯಯನದಿಂದ ಕನ್ನಡದಲ್ಲಿ ಪ್ರಭುತ್ವವನ್ನು ಹೊಂದಲು ಸಾಧ್ಯ. ತಾಯಂದಿರು ಸಿನಿಮಾ ಧಾರಾವಾಹಿಗಳಿಂದ ದೂರವಾದಲ್ಲಿ ಮಕ್ಕಳಿಗೆ ತನ್ನಿಂದ ತಾನಾಗಿಯೇ ಸಂಸ್ಕಾರವು ಮೈಗೂಡುತ್ತದೆ ಎಂದರು.

 ಹಿರಿಯ ಚಿಂತಕ ಗೌತಮ ಗಾಂವಕರ ತೊರ್ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯಕ್ತಿಗತ ನೆಲೆಯಲ್ಲಿನ ಚಟುವಟಿಕೆಗಳಿಗಿಂತಲೂ ಸಾಂಘಿಕ ಚಟುವಟಿಕೆಗಳು ಪರಿಣಾಮಕಾರಿಯಾಗಿದ್ದು, ಅದು ಸುಸಾಂಘಿಕ ಚಟುವಟಿಕೆ ಯಾಗುವಲ್ಲಿ ಹೇರಿಕೆ ಓಲೈಕೆಗಳಿಗೆ ಅವಕಾಶವನ್ನೊದಗಿಸದೇ ಸಮಷ್ಟಿಯ ಹಿತವನ್ನು ಕಾಯ್ದುಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ನಡೆದ ಶ್ರಾವಣ-ಸ್ವಾತಂತ್ರ್ಯ ಕವಿಗೋಷ್ಠಿಯಲ್ಲಿ ಪ್ರೊ.ವಿಷ್ಣು ಜೋಷಿ, ಡಿ.ಡಿ.ಪಿ.ಆಯ್ ಪುಂಡಲೀಕ, ಶಿವಾಬಾಬಾ ನಾಯ್ಕ, ಪ್ರೊ. ಪುಷ್ಪಾ ಪ್ರಭಾಕರ, ರೇಣುಕಾ ರಮಾನಂದ, ಜಿ.ಯು.ನಾಯಕ, ಪ್ರೊ. ನಾಗೇಶದೇವ ಅಂಕೋಲೆಕರ ಹಾಗೂ ಸಾತು ಗೌಡ ಸ್ವರಚಿತ ಕವನಗಳನ್ನು ವಾಚಿಸಿದರು.

 ನವ ಕರ್ನಾಟಕ ಸಂಘದ ಅಧ್ಯಕ್ಷ ಮಂಜುನಾಥ ಗಾಂವಕರ ಬರ್ಗಿ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸುಧಾ ಶೆಟ್ಟಿ ಪ್ರಾರ್ಥಿಸಿದರು. ನಿರುಪಮಾ ಶ್ಯಾಮಸುಂದರ ನಿರೂಪಿಸಿದರು. ಜಿ.ಆರ್. ತಾಂಡೇಲ್ ಸಂದೇಶ ವಾಚಿಸಿದರು. ಸಂಘಟನೆಯ ಕಾರ್ಯದರ್ಶಿ ಶ್ಯಾಮಸುಂದರ ಗೌಡ ವಂದಿಸಿದರು.

  ಸಭೆಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ನಾಯಕ, ಸಾಹಿತಿ ವಿಷ್ಣು ನಾಯ್ಕ, ಶಾಂತಾರಾಮ ನಾಯಕ ಹಿಚ್ಕಡ, ಡಾ. ಆರ್.ಜಿ.ಗುಂದಿ, ಪ್ರೊ. ಮೋಹನ ಹಬ್ಬು, ಕೃಷ್ಣ ನಾಯಕ ಹಿಚ್ಕಡ, ನಾಗೇಂದ್ರ ತೊರ್ಕೆ, ಶಫಿ ಮಾಸ್ತರ್, ವೆಂಟು ಮಾಸ್ತರ್ ಶೀಳ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X